Homeಮುಖಪುಟಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಅಂದು ಪ್ರಧಾನಿ ಮೋದಿಯವರು ಪಾಕಿಸ್ತಾನಕ್ಕೆ ಹರಿದುಹೋಗುತ್ತಿರುವ ನೀರನ್ನು ರಾಜಸ್ತಾನಕ್ಕೆ ತರುವ ಬಗ್ಗೆ ಮಾತನಾಡಿದ್ದರು. ಆಗ ಮತ್ತೆ ನನ್ನ ಹೊಲ ಹಸಿರಿನಿಂದ ಕಂಗೊಳಿಸುವ ಕನಸು ಕಂಡಿದ್ದೆ. ಅದು ಮತ್ತೆ ನಿರಾಸೆಯಾಯಿತು...

- Advertisement -
- Advertisement -

“ಕಾಂಗ್ರೆಸ್ ಪಕ್ಷದ ನಾಯಕರು ಶ್ರೀಮಂತರ ಮನೆಯಲ್ಲಿ ಬೆಳೆದವರು. ಅವರಿಗೆ ಬಡವರು ಹೇಗಿರುತ್ತಾರೆ ಎಂದು ತಿಳಿದಿರುವುದಿಲ್ಲ. ಪ್ರಧಾನಿ ಮೋದಿ ಚುನಾವಣಾ ಪ್ರಚಾರಗಳಲ್ಲಿ ನಾನು ರೈಲು ನಿಲ್ದಾಣದಲ್ಲಿ ಟೀ ಮಾರುತ್ತಿದೆ ಎಂದು ಹೇಳಿದಾಗ, ಅವರು ಮಾರಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮನಸ್ಸು ಕಾಂಗ್ರೆಸ್‌ನಿಂದ ಮೋದಿ ಕಡೆಗೆ ವಾಲಿತ್ತು. ಬಡತನದಲ್ಲಿ ಬಂದವನಿಗೆ ಬಡವರ ಕಷ್ಟ ತಿಳಿದಿರುತ್ತದೆ. ನಮಗಾಗಿ ಕೆಲಸ ಮಾಡುತ್ತಾರೆ ಎಂದು ಮತ ನೀಡಿದ್ದೆ. ಆದರೆ, ಇಂದು ಅವರೇ ನಮ್ಮ ಜೀವನಕ್ಕೆ ಕೊಳ್ಳಿ ಇಡುತ್ತಿದ್ದಾರೆ”  ಹೀಗೆ ನೋವಿನಲ್ಲಿ ಮನದ ಮಾತುಗಳನ್ನು ಹೊರಹಾಕಿದವರು ರಾಜಸ್ತಾನದ ರೈತ ರೇಖಾರಾಮ್ ಗೋಟಿಯಾ.

61 ವರ್ಷದ , ರಾಜಸ್ತಾನದ ನಾಗೋರ್ ಜಿಲ್ಲೆಯವರು. 12ನೇ ತರಗತಿವರೆಗೆ (ದ್ವಿತೀಯ ಪಿಯುಸಿ) ಶಿಕ್ಷಣ ಪಡೆದಿರುವ ಇವರು ಸರ್ಕಾರಿ ಉದ್ಯೋಗದ ಬದಲು ಆಯ್ಕೆ ಮಾಡಿಕೊಂಡಿದ್ದು ಕೃಷಿ.

“ ನಾನು ಶಿಕ್ಷಣ ಮುಗಿಸಿದಾಗ ಸರ್ಕಾರಿ ಉದ್ಯೋಗದ ಅವಕಾಶ ಹೆಚ್ಚಾಗಿತ್ತು. ಆದರೆ, ಸರ್ಕಾರಿ ಉದ್ಯೋಗಕ್ಕಿಂತ ಕೃಷಿಯಲ್ಲಿ ಅಧಿಕ ಲಾಭವಿತ್ತು. ಹಾಗಾಗಿ ಇರುವ ಎರಡು ಎಕರೆ ಜಮೀನಿನಲ್ಲೇ ಉತ್ತಮ ಕೃಷಿಯನ್ನು ಮಾಡುವ ಪಣತೊಟ್ಟು ಸರ್ಕಾರಿ ಉದ್ಯೋಗ ನಿರಾಕರಿಸಿದೆ. ಅಂದು ಸರಿ ಅನಿಸಿದ ನಿರ್ಧಾರ ಈಗ ನನ್ನ ಮಕ್ಕಳನ್ನು ಕಾರ್ಮಿಕರನ್ನಾಗಿಸಿದೆ” ಎಂದು ಅಳಲು ತೋಡಿಕೊಳ್ಳುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಡಿಸೆಂಬರ್ 13 ರಿಂದ ದೆಹಲಿ- ರಾಜಸ್ತಾನದ ಹೆದ್ದಾರಿ ಶಹಜಾನ್‌ಪುರ ಗಡಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ರೇಖಾರಾಮ್ ಗೋಟಿಯಾ, ಸುಮಾರು 2 ತಿಂಗಳುಗಳಾದರೂ ಒಂದು ದಿನವೂ ಮನೆಗೆ ಹೋಗಿ ಬಂದಿಲ್ಲ. ಬದಲಿಗೆ ತಮ್ಮ ಹೆಂಡತಿ, ಮೂವರು ಮಕ್ಕಳು, 5 ಮೊಮ್ಮಕ್ಕಳನ್ನು ಇಲ್ಲಿಗೆ ಕರೆಸಿಕೊಂಡು ಹೋರಾಟದಲ್ಲಿ ಪಾಲುದಾರರಾಗುವಂತೆ ಮಾಡಿದ್ದಾರೆ.

ಇರುವ 2 ಎಕರೆ ಜಮೀನಿನಲ್ಲಿ ಬಾಜ್ರಾ (ಜೋಳದ ರೀತಿಯ ಧಾನ್ಯ), ಹೆಸರುಕಾಳು, ಪಶು ಆಹಾರವನ್ನು ಬೆಳೆಯುತ್ತಾರೆ. ಮೂವರು ಮಕ್ಕಳು ಗ್ರಾಮದಲ್ಲಿ, ಪಕ್ಕದ ನಗರಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಇವರು ಮಾತ್ರ ಕೃಷಿ ಭೂಮಿಯನ್ನೇ ನಂಬಿಕೊಂಡಿದ್ದೇನೆ ಎನ್ನುತ್ತಾರೆ.

“ಪಂಜಾಬ್, ಹರಿಯಾಣದ ರೈತರಿಗೆ ಉತ್ತಮ ಎಂಎಸ್‌ಪಿ(MSP) ಸಿಗುತ್ತಿದೆ. ಅವರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಸಿಗುತ್ತಿದೆ. ಆದರೆ ರಾಜಸ್ತಾನದಲ್ಲಿ ಎಷ್ಟು ಆಳಕ್ಕೆ ಬೋರ್‌ವೇಲ್ ಹಾಕಿದರೂ ನೀರು ಬರುತ್ತಿಲ್ಲ. ಬರುವ ನೀರು ನಮ್ಮ ಪಶುಗಳಿಗೆ ಸಾಕಾಗುತ್ತಿಲ್ಲ. ಹರಿಯಾಣದ ಗಡಿಯಲ್ಲಿ ಇಷ್ಟು ದಿನಗಳಿಂದ ಕುಳಿತಿರುವ ನನಗೆ ಇಲ್ಲಿನ ಹಸಿರು ಕಂಡು ನೋವಾಗುತ್ತಿದೆ. ನಾನು ಮೊದ ಮೊದಲು ಇದೆ ರೀತಿಯಲ್ಲಿ ಬೆಳೆ ಬೆಳೆದಿದ್ದೆ. ಆದರೆ ಈಗ ಅದ್ಯಾವುದು ಸಾಧ್ಯವಾಗುತ್ತಿಲ್ಲ” ಎಂದು ಕಂಬನಿ ಹರಿಸುತ್ತಾರೆ.

ಇದನ್ನೂ ಓದಿ:ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

“ಅಂದು ಪ್ರಧಾನಿ ಮೋದಿಯವರು ಪಾಕಿಸ್ತಾನಕ್ಕೆ ಹರಿದುಹೋಗುತ್ತಿರುವ ನೀರನ್ನು ರಾಜಸ್ತಾನಕ್ಕೆ ತರುವ ಬಗ್ಗೆ ಮಾತನಾಡಿದ್ದರು. ಆಗ ಮತ್ತೆ ನನ್ನ ಹೊಲ ಹಸಿರಿನಿಂದ ಕಂಗೊಳಿಸುವ ಕನಸು ಕಂಡಿದ್ದೆ. ಅದು ಮತ್ತೆ ನಿರಾಸೆಯಾಯಿತು. ಇಲ್ಲಿನ ರೈತರು (ಪಂಜಾಬ್, ಹರಿಯಾಣ) ವರ್ಷಕ್ಕೆ ಮೂರು ಬೆಳೆ ಬೆಳೆಯುತ್ತಾರೆ. ಆದರೆ ನಮ್ಮ ರಾಜಸ್ತಾನದ ರೈತರು 2 ಬೆಳೆ ಬೆಳೆಯಲು ಹರಸಾಹಸ ಪಡುತ್ತಿದ್ದೇವೆ.”

“ಇನ್ನೊಂದು ವಿಷಯ ಗೊತ್ತಾ, ಮೋದಿಯವರ ಮಾತನ್ನು ಅದೆಷ್ಟು ನಿಷ್ಠೆಯಿಂದ ಪಾಲಿಸಿದ್ದೆ ಎಂದರೆ, 15 ಲಕ್ಷ ಹಾಕುವುದಾಗಿ ಅವರು ಹೇಳಿದಾಗ, ಅವರ ಮಾತು ನಂಬಿ ಹೊಸ ಅಕೌಂಟ್ ಮಾಡಿಸಿ, ಅದರಲ್ಲಿ ಯಾರಿಂದಲೂ ಒಂದು ರೂಪಾಯಿ ಹಾಕದಂತೆ ಎಚ್ಚರ ವಹಿಸಿದ್ದೆ. ಅದರಲ್ಲಿ ಮೋದಿಯವರೇ ಹಣ ಹಾಕಬೇಕು ಅದನ್ನು ಎಲ್ಲರಿಗೂ ಹೇಳಬೇಕು ಎಂದುಕೊಂಡಿದ್ದೆ. ಅದು ಕೂಡ ಸುಳ್ಳಾಯಿತು”.

“ಈ ಕೃಷಿ ಕಾನೂನುಗಳ ಮೂಲಕ ಇರುವ ಎಲ್ಲಾ ಆದಾಯವನ್ನು, ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ನಮ್ಮನ್ನು ದೊಡ್ಡ ದೊಡ್ಡ ಖಾಸಗಿ ಕಂಪನಿಗಳ ಗುಲಾಮರನ್ನಾಗಿಸಲು ಸರ್ಕಾರ ಪ್ರಯತ್ನ ಪಡುತ್ತಿದೆ. ಇರುವ ಎಂಎಸ್‌ಪಿ ಸರಿಯಾಗಿ ನೀಡದೆ ಸರ್ಕಾರ ನಮ್ಮನ್ನು ಆಟ ಆಡಿಸುತ್ತಿದೆ. ಅಂತಹದರಲ್ಲಿ ಈ ಕಾನೂನುಗಳು ನಮ್ಮ ಜೀವನವನ್ನೇ ಬಲಿ ತೆಗೆದುಕೊಳ್ಳಲು ಹೊರಟಿವೆ. ಇವು ರದ್ದಾಗುವವರೆಗೆ ನಾವು ಹೋರಾಟ ಮುಂದುವರೆಸುತ್ತವೇ ಇರುತ್ತೇವೆ. ಮನೆಯಲ್ಲಿ ಈಗಾಗಲೇ ಹೇಳಿ ಬಂದಿದ್ದೇನೆ. ನನ್ನನ್ನು ಮನೆಗೆ ಕರೆಯಬೇಡಿ ನಾನು ಸತ್ತು ಹೋದೆ ಎಂದು ಭಾವಿಸಿಕೊಳ್ಳಿ. ಗೆದ್ದ ಮೇಲೆ ಮಾತ್ರ ಇಲ್ಲಿಂದ ಮನೆಗೆ ಬರುತ್ತೇನೆ ಎಂದಿದ್ದೇನೆ. ಇರುವ ಜಮೀನು ಹೋದರೆ, ಇನ್ನೊಬ್ಬರ ಗುಲಾಮನಾಗಲಾರೆ” ಎಂದು ರೇಖಾರಾಮ್ ಗೋಟಿಯಾ ಹೇಳುತ್ತಾರೆ.

ಇದನ್ನೂ ಓದಿ: ಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

“ಅಂದು ರೈತರು ಎಂದರೆ ಸಂತೋಷದಿಂದ ಹೆಣ್ಣು ಕೊಡುತ್ತಿದ್ದರು. ಈಗ ರೈತರಿಗೆ, ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೆ ಮುಂದೆ ನೋಡುತ್ತಾರೆ. ಕೃಷಿ ಕ್ಷೇತ್ರವನ್ನು ಲಾಭದಾಯಕವನ್ನಾಗಿಸಿದರೇ ಬೇರೆ ಉದ್ಯೋಗಕ್ಕೆ ಜನ ಯಾಕೆ ಹೋಗುತ್ತಾರೆ..? ಇದರಿಂದ ನಿರುದ್ಯೋಗ ಕೂಡ ಕಡಿಮೆಯಾಗಲಿದೆ. ಆದರೆ ಸರ್ಕಾರ ಇರುವ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ನೀಡಲು ಹೊರಟಿದೆ. ನಾವು ಇನ್ನೆಷ್ಟು ವರ್ಷ ಬದುಕಬಲ್ಲವು..? ಸರ್ಕಾರದ ಈ ಕಾನುನೂಗಳ ಪ್ರಭಾವ ಬೀರುವುದು ಈಗಿನ ಯುವಜನತೆ ಮೇಲೆ’ ಎನ್ನುತ್ತಾರೆ ರೇಖಾರಾಮ್.

ಮಾಸ್ಟರ್‌ಸ್ಟ್ರೋಕ್

ರಾಜಸ್ತಾನದಲ್ಲಿ ಬೆಳೆಗಳಿಗಿರುವ ಎಂಎಸ್‌ಪಿ ಬಗ್ಗೆ ಮಾತನಾಡುತ್ತಾ, ನಮ್ಮ ರಾಜ್ಯದಲ್ಲೂ ಉತ್ತಮ ಎಂಎಸ್‌ಪಿ ಇದೆ. ಆದರೆ ಅವುಗಳೆಲ್ಲ ಕಾಗದದಲ್ಲಿ ಮಾತ್ರ ಎನ್ನುತ್ತಾರೆ. ಹೆಸರುಕಾಳಿಗೆ ಪ್ರತಿ ಕ್ವಿಂಟಾಲ್‌ಗೆ 7,300 ರೂಪಾಯಿ ಸರ್ಕಾರಿ ಎಂಎಸ್‌ಪಿ ಇದೆ ಆದರೆ ಸರ್ಕಾರಿ ಮಂಡಿಗಳಲ್ಲಿ ನಮ್ಮ ಬೆಳೆಯನ್ನು ಖರೀದಿಸುತ್ತಿಲ್ಲ. 5 ಸಾವಿರ ರೈತರು ಸರ್ಕಾ‌ರಿ ಮಂಡಿಗೆ ಹೋದರೆ ಅದರಲ್ಲಿ ಕೇವಲ 20 ರೈತರ ಮಾಲನ್ನು ಮಾತ್ರ ಖರೀದಿಸಲಾಗುತ್ತಿದೆ. ಅನಿವಾರ್ಯವಾಗಿ ನಾವು ಖಾಸಗಿ ಮಂಡಿಗೆ ಹೋಗಬೇಕಾಗಿದೆ, ಅಲ್ಲಿ ನಮಗೆ 5,000 ರೂಪಾಯಿ ದೊರೆಯುತ್ತದೆ. ಹಾಗೆ ಬಾಜ್ರಾ ಬೆಳೆಗೆ ಸರ್ಕಾರಿ ಎಂಎಸ್‌ಪಿ 2,160 ರೂಪಾಯಿ ಇದೆ. ಅದು ಕೂಡ ನಮಗೆ ಸಿಗುತ್ತಿಲ್ಲ, ಖಾಸಗಿ ಮಂಡಿಯಲ್ಲಿ 1,200 ರೂಪಾಯಿಗೆ ಮಾರಾಟ ಮಾಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಇನ್ನೂ ದೊಡ್ಡ ದೊಡ್ಡ ಖಾಸಗಿ ಕಂಪನಿಗಳಿಗೆ ನಮ್ಮನ್ನು ಮಾರಾಟ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ಮೋದಿಯವರಲ್ಲಿ ಒಂದು ಪ್ರಶ್ನೆ ಕೇಳಬೇಕು. ಟೀ ಮಾರುತ್ತಿದ್ದೆ ಎನ್ನುವ ನೀವು ಬಡವರು ಎಂದು ಕೊಂಡಿದ್ದೆ. ನೀವು ಹೇಳಿದ ಎಲ್ಲಾ ಮಾತುಗಳನ್ನು ನಾನು ನಂಬಿಕೊಂಡಿದ್ದೆ. ಆದರೆ ನಿಮ್ಮ ಮಾತುಗಳನ್ನು, ವಾಗ್ದಾನಗಳನ್ನು ಹೇಗೆ ಮರೆತಿರಿ..? ನಾವು ಕಾಂಗ್ರೆಸ್ ಅವರನ್ನು ಶ್ರೀಮಂತರು ಎಂದುಕೊಂಡಿದ್ದೇವು. ಆದರೆ ನೀವು ಬಡವರಲ್ಲ. ನಿಮಗೆ ಬಡತನದ ಬಗ್ಗೆ ಕೊಂಚವು ಅರಿವಿಲ್ಲ. ನೀವು ಶ್ರೀಮಂತರ ಹಿಂದೆ ಬಿದ್ದಿರಿ. ಅಂದು ಸಿಹಿ ಸಿಹಿ ಮಾತನಾಡಿ ಮತ ಪಡೆದ ಮೋದಿ ಬೇರೆ. ಇಂದಿನ ಮೋದಿಯೇ ಬೇರೆ.  ನಮ್ಮ (ರೈತರ) ಆದಾಯವನ್ನು ದ್ವಿಗುಣಗಿಳಿಸುವ ಮಾತನಾಡಿದ್ದಿರಿ. ಈಗ ಪಶು ಆಹಾರವನ್ನು ಕೊಳ್ಳುವುದನ್ನು ಬಂದ್ ಮಾಡಿಸಿದ್ದೀರ. ಬಿಜೆಪಿಯ ಬೈರೋಗ್ ಸಿಂಗ್ ಸರ್ಕಾರ ನಮ್ಮ ಬೆಳೆ ತೆಗೆದುಕೊಳ್ಳುವುದನ್ನು ನಿಲ್ಲಿಸಿತು. ಇಂತಹದರಲ್ಲಿ ನಮ್ಮ ಆದಾಯ ಹೇಗೆ ದ್ವಿಗುಣಗೊಳಿಸುವಿರಿ….?” ಎಂದು ಪ್ರಶ್ನಿಸಿದ್ದಾರೆ.

“ಇದು ಸರ್ವಾಧಿಕಾರಿ ಸರ್ಕಾರವಾಗಿದೆ. ಇದೇನು ರಾಜರಿಂದ ಬಂದ ಸರ್ಕಾರವಲ್ಲ. ಇದು ನಾವು ಮತ ನೀಡಿ ಹುಟ್ಟು ಹಾಕಿದ ಸರ್ಕಾರ. ಆದರೆ ನಮ್ಮನ್ನೇ ಆತಂಕವಾದಿ ಎನ್ನುತ್ತಾರೆ. ದೇಶದ್ರೋಹಿ ಎನ್ನುತ್ತಾರೆ. ನಮಗೆ ತುಂಬಾ ನೋವಾಗುತ್ತದೆ ನಮ್ಮನ್ನು ದೇಶದ್ರೋಹಿ ಎಂದಾಗ. ಇವರು ದೇಶದ್ರೋಹಿಗಳು, ದೇಶದ ಬಾವುಟವನ್ನು ಅವಮಾನ ಮಾಡಿದ ಇವರ ಚೇಲಾಗಳು ದೇಶದ್ರೋಹಿಗಳು. ನಮ್ಮ ರೈತರನ್ನು ದೇಶದ್ರೋಹಿಗಳು ಎನ್ನುತ್ತಾರೆ ಇವರನ್ನು ರೈತರು ಎಂದಿಗೂ ಕ್ಷಮಿಸುವುದಿಲ್ಲ. ನಾವು ನಮ್ಮ ಊರಿನಲ್ಲಿ ಮನೆ ಮನೆಗೆ ತೆರಳಿ ಹೇಳಿದ್ದೇವೆ ಬಿಜೆಪಿಗೆ ಎಂದಿಗೂ ಮತ ನೀಡಬೇಡಿ ಎಂದ್ದಿದ್ದೇವೆ” ಎಂದು ರೈತ ರೇಖಾರಾಮ್ ಗೋಟಿಯಾ ಹೇಳುತ್ತಾರೆ.

ಮಮತ.ಎಂ


ಇದನ್ನೂ ಓದಿ; 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...