Homeಮುಖಪುಟಹಕ್ಕುಗಳ ಉಲ್ಲಂಘನೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತರು

ಹಕ್ಕುಗಳ ಉಲ್ಲಂಘನೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತರು

- Advertisement -
- Advertisement -

ಕೇಂದ್ರ ಸರಕಾರ ಮತ್ತು ಕೆಲವು ರಾಜ್ಯಗಳ ಸರಕಾರಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕುಗಳ ಉಲ್ಲಂಘನೆಯನ್ನು ಮಾಡಲಾಗಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಗಡಿಯಲ್ಲಿನ ಎಲ್ಲಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲಿನ ಹಿಂಸಾಚಾರವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಮನವಿಯಲ್ಲಿ ಪೊಲೀಸರಿಂದ ಆಪಾದಿತ ಹಕ್ಕುಗಳ ಉಲ್ಲಂಘನೆಯ ಬಗ್ಗೆ ವರದಿ ಕೇಳಲಾಗಿದೆ ಮತ್ತು ಪ್ರತಿಭಟನೆಯಲ್ಲಿ ಗಾಯಗೊಂಡ ರೈತರು ಮತ್ತು ಅವರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಲಾಗಿದೆ. ಹರ್ಯಾಣ, ಪಂಜಾಬ್, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ವಿರುದ್ಧ ಅಶ್ರುವಾಯು, ರಬ್ಬರ್ ಗುಂಡುಗಳು ಮತ್ತು ಬುಲೆಟ್‌ಗಳ ಬಳಕೆ ಮೂಲಕ ಆಕ್ರಮಣಕಾರಿ ಮತ್ತು ಹಿಂಸಾತ್ಮಕ ಕ್ರಮಗಳನ್ನು ಅನುಸರಿಸಿವೆ ಮತ್ತು ರೈತರಿಗೆ ಗಂಭೀರ ಗಾಯಗಳಾಗಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ರೈತ ಸಂಘಗಳು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿಗಾಗಿ ಮತ್ತು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕಾಗಿ ಪ್ರತಿಭಟನೆಗಳಿಗೆ ಕರೆ ನೀಡಿದ ನಂತರ ಕೇಂದ್ರ ಮತ್ತು ಕೆಲವು ರಾಜ್ಯಗಳು ಬೆದರಿಕೆ ಹಾಕಿವೆ ಮತ್ತು ರಾಷ್ಟ್ರ ರಾಜಧಾನಿಯ ಗಡಿಯನ್ನು ಬಂದ್‌ ಮಾಡಿ ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಶಾಂತಿಯುತ ಪ್ರತಿಭಟನೆಯಲ್ಲಿ ಅನ್ಯಾಯವನ್ನು ಎದುರಿಸುತ್ತಿರುವ ರೈತರ ಹಿತಾಸಕ್ತಿ ಕಾಪಾಡುವಂತೆ  ಅರ್ಜಿಯಲ್ಲಿ ಕೋರಲಾಗಿದೆ ಎಂದು ಸಿಖ್ ಚೇಂಬರ್ ಆಫ್ ಕಾಮರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅಗ್ನೋಸ್ಟೋಸ್ ಥಿಯೋಸ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ಬಂಧಿಸಲಾಗಿದೆ, ಸಾಮಾಜಿಕ ಮಾದ್ಯಮ ಖಾತೆಗಳನ್ನು ನಿರ್ಬಂಧಿಸುವುದು, ರಸ್ತೆಗಳನ್ನು ನಿರ್ಬಂಧಿಸುವುದು ಸೇರಿದಂತೆ ಕೇಂದ್ರವು ಅನಗತ್ಯವಾಗಿ ನಿಷೇಧಿತ ಕ್ರಮಗಳನ್ನು ಕೈಗೊಂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಘರ್ಷಣೆಯಿಂದ ರೈತರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣಕ್ಕೆ ವೈದ್ಯಕೀಯ ಸೇವೆ ಸಿಗದೆ ಗಾಯಾಳುಗಳ ಸಾವುಗಳು ಸಂಭವಿಸಿದೆ. ದೆಹಲಿಯ ಗಡಿಯಲ್ಲಿನ ನಿರ್ಮಿಸಿರುವ ಕೋಟೆಗಳು ಪ್ರತಿಕೂಲ ಮತ್ತು ಹಿಂಸಾತ್ಮಕ ಪರಿಸ್ಥಿತಿಯನ್ನು ಸೃಷ್ಟಿಸಿವೆ ಮತ್ತು ರೈತರು ತಮ್ಮ ಪ್ರತಿಭಟನೆಯ ಪ್ರಜಾಪ್ರಭುತ್ವ ಹಕ್ಕನ್ನು ಚಲಾಯಿಸಲು ಅನುಮತಿಸಲಾಗುತ್ತಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರೈತರು ತಮ್ಮ ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಹಕ್ಕುಗಳ ಅನುಷ್ಠಾನಕ್ಕಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವಾಗ ತಮ್ಮದೇ ಸರ್ಕಾರ ಅವರನ್ನು ಭಯೋತ್ಪಾದಕರ ರೀತಿ ನಡೆಸಿಕೊಳ್ಳುತ್ತಿದೆ. ಅರ್ಜಿಯಲ್ಲಿ ಕೇಂದ್ರ ಸರಕಾರ, ನಾಲ್ಕು ರಾಜ್ಯಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಪ್ರತಿಭಟಿಸುವ ರೈತರನ್ನು ನ್ಯಾಯಯುತ ಮತ್ತು ಗೌರವಯುತವಾಗಿ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡುವಂತೆ ಆಗ್ರಹಿಸಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಆರೋಪಿಸಲಾಗಿದ್ದು, ಸಂತ್ರಸ್ತ ರೈತರು ಮತ್ತು ಅವರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡುವಂತೆ ಕೂಡ ಆಗ್ರಹಿಸಲಾಗಿದೆ.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...