Homeಮುಖಪುಟಹಕ್ಕುಗಳ ಉಲ್ಲಂಘನೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತರು

ಹಕ್ಕುಗಳ ಉಲ್ಲಂಘನೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತರು

- Advertisement -
- Advertisement -

ಕೇಂದ್ರ ಸರಕಾರ ಮತ್ತು ಕೆಲವು ರಾಜ್ಯಗಳ ಸರಕಾರಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕುಗಳ ಉಲ್ಲಂಘನೆಯನ್ನು ಮಾಡಲಾಗಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಗಡಿಯಲ್ಲಿನ ಎಲ್ಲಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲಿನ ಹಿಂಸಾಚಾರವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಮನವಿಯಲ್ಲಿ ಪೊಲೀಸರಿಂದ ಆಪಾದಿತ ಹಕ್ಕುಗಳ ಉಲ್ಲಂಘನೆಯ ಬಗ್ಗೆ ವರದಿ ಕೇಳಲಾಗಿದೆ ಮತ್ತು ಪ್ರತಿಭಟನೆಯಲ್ಲಿ ಗಾಯಗೊಂಡ ರೈತರು ಮತ್ತು ಅವರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಲಾಗಿದೆ. ಹರ್ಯಾಣ, ಪಂಜಾಬ್, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ವಿರುದ್ಧ ಅಶ್ರುವಾಯು, ರಬ್ಬರ್ ಗುಂಡುಗಳು ಮತ್ತು ಬುಲೆಟ್‌ಗಳ ಬಳಕೆ ಮೂಲಕ ಆಕ್ರಮಣಕಾರಿ ಮತ್ತು ಹಿಂಸಾತ್ಮಕ ಕ್ರಮಗಳನ್ನು ಅನುಸರಿಸಿವೆ ಮತ್ತು ರೈತರಿಗೆ ಗಂಭೀರ ಗಾಯಗಳಾಗಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ರೈತ ಸಂಘಗಳು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿಗಾಗಿ ಮತ್ತು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕಾಗಿ ಪ್ರತಿಭಟನೆಗಳಿಗೆ ಕರೆ ನೀಡಿದ ನಂತರ ಕೇಂದ್ರ ಮತ್ತು ಕೆಲವು ರಾಜ್ಯಗಳು ಬೆದರಿಕೆ ಹಾಕಿವೆ ಮತ್ತು ರಾಷ್ಟ್ರ ರಾಜಧಾನಿಯ ಗಡಿಯನ್ನು ಬಂದ್‌ ಮಾಡಿ ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಶಾಂತಿಯುತ ಪ್ರತಿಭಟನೆಯಲ್ಲಿ ಅನ್ಯಾಯವನ್ನು ಎದುರಿಸುತ್ತಿರುವ ರೈತರ ಹಿತಾಸಕ್ತಿ ಕಾಪಾಡುವಂತೆ  ಅರ್ಜಿಯಲ್ಲಿ ಕೋರಲಾಗಿದೆ ಎಂದು ಸಿಖ್ ಚೇಂಬರ್ ಆಫ್ ಕಾಮರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅಗ್ನೋಸ್ಟೋಸ್ ಥಿಯೋಸ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ಬಂಧಿಸಲಾಗಿದೆ, ಸಾಮಾಜಿಕ ಮಾದ್ಯಮ ಖಾತೆಗಳನ್ನು ನಿರ್ಬಂಧಿಸುವುದು, ರಸ್ತೆಗಳನ್ನು ನಿರ್ಬಂಧಿಸುವುದು ಸೇರಿದಂತೆ ಕೇಂದ್ರವು ಅನಗತ್ಯವಾಗಿ ನಿಷೇಧಿತ ಕ್ರಮಗಳನ್ನು ಕೈಗೊಂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಘರ್ಷಣೆಯಿಂದ ರೈತರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣಕ್ಕೆ ವೈದ್ಯಕೀಯ ಸೇವೆ ಸಿಗದೆ ಗಾಯಾಳುಗಳ ಸಾವುಗಳು ಸಂಭವಿಸಿದೆ. ದೆಹಲಿಯ ಗಡಿಯಲ್ಲಿನ ನಿರ್ಮಿಸಿರುವ ಕೋಟೆಗಳು ಪ್ರತಿಕೂಲ ಮತ್ತು ಹಿಂಸಾತ್ಮಕ ಪರಿಸ್ಥಿತಿಯನ್ನು ಸೃಷ್ಟಿಸಿವೆ ಮತ್ತು ರೈತರು ತಮ್ಮ ಪ್ರತಿಭಟನೆಯ ಪ್ರಜಾಪ್ರಭುತ್ವ ಹಕ್ಕನ್ನು ಚಲಾಯಿಸಲು ಅನುಮತಿಸಲಾಗುತ್ತಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರೈತರು ತಮ್ಮ ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಹಕ್ಕುಗಳ ಅನುಷ್ಠಾನಕ್ಕಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವಾಗ ತಮ್ಮದೇ ಸರ್ಕಾರ ಅವರನ್ನು ಭಯೋತ್ಪಾದಕರ ರೀತಿ ನಡೆಸಿಕೊಳ್ಳುತ್ತಿದೆ. ಅರ್ಜಿಯಲ್ಲಿ ಕೇಂದ್ರ ಸರಕಾರ, ನಾಲ್ಕು ರಾಜ್ಯಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಪ್ರತಿಭಟಿಸುವ ರೈತರನ್ನು ನ್ಯಾಯಯುತ ಮತ್ತು ಗೌರವಯುತವಾಗಿ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡುವಂತೆ ಆಗ್ರಹಿಸಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಆರೋಪಿಸಲಾಗಿದ್ದು, ಸಂತ್ರಸ್ತ ರೈತರು ಮತ್ತು ಅವರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡುವಂತೆ ಕೂಡ ಆಗ್ರಹಿಸಲಾಗಿದೆ.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...