Homeಮುಖಪುಟಹಕ್ಕುಗಳ ಉಲ್ಲಂಘನೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತರು

ಹಕ್ಕುಗಳ ಉಲ್ಲಂಘನೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತರು

- Advertisement -
- Advertisement -

ಕೇಂದ್ರ ಸರಕಾರ ಮತ್ತು ಕೆಲವು ರಾಜ್ಯಗಳ ಸರಕಾರಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕುಗಳ ಉಲ್ಲಂಘನೆಯನ್ನು ಮಾಡಲಾಗಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಗಡಿಯಲ್ಲಿನ ಎಲ್ಲಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲಿನ ಹಿಂಸಾಚಾರವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಮನವಿಯಲ್ಲಿ ಪೊಲೀಸರಿಂದ ಆಪಾದಿತ ಹಕ್ಕುಗಳ ಉಲ್ಲಂಘನೆಯ ಬಗ್ಗೆ ವರದಿ ಕೇಳಲಾಗಿದೆ ಮತ್ತು ಪ್ರತಿಭಟನೆಯಲ್ಲಿ ಗಾಯಗೊಂಡ ರೈತರು ಮತ್ತು ಅವರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಲಾಗಿದೆ. ಹರ್ಯಾಣ, ಪಂಜಾಬ್, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ವಿರುದ್ಧ ಅಶ್ರುವಾಯು, ರಬ್ಬರ್ ಗುಂಡುಗಳು ಮತ್ತು ಬುಲೆಟ್‌ಗಳ ಬಳಕೆ ಮೂಲಕ ಆಕ್ರಮಣಕಾರಿ ಮತ್ತು ಹಿಂಸಾತ್ಮಕ ಕ್ರಮಗಳನ್ನು ಅನುಸರಿಸಿವೆ ಮತ್ತು ರೈತರಿಗೆ ಗಂಭೀರ ಗಾಯಗಳಾಗಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ರೈತ ಸಂಘಗಳು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿಗಾಗಿ ಮತ್ತು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕಾಗಿ ಪ್ರತಿಭಟನೆಗಳಿಗೆ ಕರೆ ನೀಡಿದ ನಂತರ ಕೇಂದ್ರ ಮತ್ತು ಕೆಲವು ರಾಜ್ಯಗಳು ಬೆದರಿಕೆ ಹಾಕಿವೆ ಮತ್ತು ರಾಷ್ಟ್ರ ರಾಜಧಾನಿಯ ಗಡಿಯನ್ನು ಬಂದ್‌ ಮಾಡಿ ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಶಾಂತಿಯುತ ಪ್ರತಿಭಟನೆಯಲ್ಲಿ ಅನ್ಯಾಯವನ್ನು ಎದುರಿಸುತ್ತಿರುವ ರೈತರ ಹಿತಾಸಕ್ತಿ ಕಾಪಾಡುವಂತೆ  ಅರ್ಜಿಯಲ್ಲಿ ಕೋರಲಾಗಿದೆ ಎಂದು ಸಿಖ್ ಚೇಂಬರ್ ಆಫ್ ಕಾಮರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅಗ್ನೋಸ್ಟೋಸ್ ಥಿಯೋಸ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ಬಂಧಿಸಲಾಗಿದೆ, ಸಾಮಾಜಿಕ ಮಾದ್ಯಮ ಖಾತೆಗಳನ್ನು ನಿರ್ಬಂಧಿಸುವುದು, ರಸ್ತೆಗಳನ್ನು ನಿರ್ಬಂಧಿಸುವುದು ಸೇರಿದಂತೆ ಕೇಂದ್ರವು ಅನಗತ್ಯವಾಗಿ ನಿಷೇಧಿತ ಕ್ರಮಗಳನ್ನು ಕೈಗೊಂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಘರ್ಷಣೆಯಿಂದ ರೈತರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣಕ್ಕೆ ವೈದ್ಯಕೀಯ ಸೇವೆ ಸಿಗದೆ ಗಾಯಾಳುಗಳ ಸಾವುಗಳು ಸಂಭವಿಸಿದೆ. ದೆಹಲಿಯ ಗಡಿಯಲ್ಲಿನ ನಿರ್ಮಿಸಿರುವ ಕೋಟೆಗಳು ಪ್ರತಿಕೂಲ ಮತ್ತು ಹಿಂಸಾತ್ಮಕ ಪರಿಸ್ಥಿತಿಯನ್ನು ಸೃಷ್ಟಿಸಿವೆ ಮತ್ತು ರೈತರು ತಮ್ಮ ಪ್ರತಿಭಟನೆಯ ಪ್ರಜಾಪ್ರಭುತ್ವ ಹಕ್ಕನ್ನು ಚಲಾಯಿಸಲು ಅನುಮತಿಸಲಾಗುತ್ತಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರೈತರು ತಮ್ಮ ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಹಕ್ಕುಗಳ ಅನುಷ್ಠಾನಕ್ಕಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವಾಗ ತಮ್ಮದೇ ಸರ್ಕಾರ ಅವರನ್ನು ಭಯೋತ್ಪಾದಕರ ರೀತಿ ನಡೆಸಿಕೊಳ್ಳುತ್ತಿದೆ. ಅರ್ಜಿಯಲ್ಲಿ ಕೇಂದ್ರ ಸರಕಾರ, ನಾಲ್ಕು ರಾಜ್ಯಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಪ್ರತಿಭಟಿಸುವ ರೈತರನ್ನು ನ್ಯಾಯಯುತ ಮತ್ತು ಗೌರವಯುತವಾಗಿ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡುವಂತೆ ಆಗ್ರಹಿಸಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಆರೋಪಿಸಲಾಗಿದ್ದು, ಸಂತ್ರಸ್ತ ರೈತರು ಮತ್ತು ಅವರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡುವಂತೆ ಕೂಡ ಆಗ್ರಹಿಸಲಾಗಿದೆ.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...