Homeಮುಖಪುಟಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಪೊಲೀಸರು ಹಾಕಿರುವ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳುಗಳನ್ನು ತೆಗೆದುಹಾಕಿ ಮತ್ತು ಗಣರಾಜ್ಯೋತ್ಸವದ ಟ್ರಾಕ್ಟರ್ ರ್ಯಾಲಿಯ ನಂತರ ನಡೆಯುತ್ತಿರುವ ರೈತರ ಅನಿಯಂತ್ರಿತ ಬಂಧನ ನಿಲ್ಲಿಸುವಂತೆ ಜಾಗತಿಕ ಮಾನವ ಹಕ್ಕುಗಳ ಸಂಘಟನೆಯಾದ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗವು ಒತ್ತಾಯಿಸಿದೆ.

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದ್ದು, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ.

ಎರಡು ತಿಂಗಳನಿಂದಲೂ ಶಾಂತಿಯುತ ಹೋರಾಟ ನಡೆಸುತ್ತಿರುವ ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜಿಪುರ್ ಗಡಿಗಳಲ್ಲಿ ಪೊಲೀಸರು ಫೆಬ್ರವರಿ ಆರಂಭದಿಂದಲೆ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳು‌ಗಳನ್ನು ನೆಟ್ಟಿದೆ. ಅಲ್ಲಿಗೆ ಬೇರೆ ಯಾವುದೇ ವಾಹನಗಳು ಮತ್ತು ಜನರು ಬರದಂತೆ ತಡೆಗಟ್ಟಲು ಹೀಗೆ ಮಾಡಿದ್ದಾಗಿ ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ, “ಇದು ಪ್ರತಿಭಟನಾ ಸ್ಥಳದಲ್ಲಿ ರೈತರು ಪರಸ್ಪರ ಭೇಟಿಯಾಗಲು ಅಡ್ಡಿಯಾಗಿದೆ. ಪ್ರತಿಭಟನೆಗೆ ಬೆಂಬಲ ಸೂಚಿಸದಂತೆ ತಡೆಯುವ ಉದ್ದೇಶದಿಂದ ಕೂಡಿದೆ. ಈ ಬ್ಯಾರಿಕೇಡ್‌ಗಳಿಂದ ರೈತರು ಮತ್ತು ಅವರ ಕುಟುಂಬಗಳು, ಮಹಿಳೆಯರು ಮಕ್ಕಳು ಸೇರಿದಂತೆ, ನೀರು ಮತ್ತು ನೈರ್ಮಲ್ಯ ಸೌಲಭ್ಯಗಳಿಗೆ ಪರದಾಡುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಕರ್ತರ ಮೇಲಿನ ದೌರ್ಜನ್ಯ ಮತ್ತು ಕಾಣೆಯಾದ ಪ್ರತಿಭಟನಾಕಾರರ ಬಗ್ಗೆ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ ಕಳವಳ ವ್ಯಕ್ತಪಡಿಸಿದೆ. “ಸತ್ಯವನ್ನು ವರದಿ ಮಾಡಿದ್ದಕ್ಕಾಗಿ ಇಬ್ಬರು ಪತ್ರಕರ್ತರನ್ನು (ಮಂದೀಪ್ ಪುನಿಯಾ ಮತ್ತು ಧರ್ಮೇಂದರ್ ಸಿಂಗ್) ಬಂಧಿಸಿ, ಹಲ್ಲೆ ನಡೆಸಲಾಯಿತು. ಒಂಬತ್ತು ಹಿರಿಯ ಪತ್ರಕರ್ತರ ಮೇಲೆ ಭಾರತ ಸರ್ಕಾರವು ದೇಶದ್ರೋಹ ಆರೋಪ ಸೇರಿದಂತೆ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿದೆ. ಜನವರಿ 26, 2021 ರಂದು ಸಂಭವಿಸಿದ ಹಿಂಸಾತ್ಮಕ ಘರ್ಷಣೆಗೆ ಪ್ರತಿಕ್ರಿಯೆಯಾಗಿ ರೈತರು ಮತ್ತು ಸಾಮಾನ್ಯ ಜನರನ್ನು ಸೇರಿದಂತೆ 125 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ 21 ರೈತರು ಕಾಣೆಯಾಗಿದ್ದಾರೆಂದು ವರದಿಯಾಗಿದೆ” ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಸಿಎಎ, ಎನ್‌ಆರ್‌ಸಿ ವಿರುದ್ಧದ ಆಂದೋಲನದ ಸಮಯದಲ್ಲಿನ ಸಾಮೂಹಿಕ ಬಂಧನಗಳನ್ನು ಪ್ರಸ್ತಾಪಿಸಿದ ಆಯೋಗವು ಒಂದೇ ಮಾದರಿಯಲ್ಲಿ ಭಾರತದಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಿಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದೆ. ರೈತರ ಪ್ರತಿಭಟನೆಯ ಹಕ್ಕನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ ಎಂದು ಅದು ಉಲ್ಲೇಖಿಸಿದೆ.

ಹಾಗಾಗಿ ಕೂಡಲೇ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು ಎಂದು ಆಯೋಗವು ಆಗ್ರಹಿಸಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...