Homeಮುಖಪುಟಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಪೊಲೀಸರು ಹಾಕಿರುವ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳುಗಳನ್ನು ತೆಗೆದುಹಾಕಿ ಮತ್ತು ಗಣರಾಜ್ಯೋತ್ಸವದ ಟ್ರಾಕ್ಟರ್ ರ್ಯಾಲಿಯ ನಂತರ ನಡೆಯುತ್ತಿರುವ ರೈತರ ಅನಿಯಂತ್ರಿತ ಬಂಧನ ನಿಲ್ಲಿಸುವಂತೆ ಜಾಗತಿಕ ಮಾನವ ಹಕ್ಕುಗಳ ಸಂಘಟನೆಯಾದ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗವು ಒತ್ತಾಯಿಸಿದೆ.

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದ್ದು, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ.

ಎರಡು ತಿಂಗಳನಿಂದಲೂ ಶಾಂತಿಯುತ ಹೋರಾಟ ನಡೆಸುತ್ತಿರುವ ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜಿಪುರ್ ಗಡಿಗಳಲ್ಲಿ ಪೊಲೀಸರು ಫೆಬ್ರವರಿ ಆರಂಭದಿಂದಲೆ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳು‌ಗಳನ್ನು ನೆಟ್ಟಿದೆ. ಅಲ್ಲಿಗೆ ಬೇರೆ ಯಾವುದೇ ವಾಹನಗಳು ಮತ್ತು ಜನರು ಬರದಂತೆ ತಡೆಗಟ್ಟಲು ಹೀಗೆ ಮಾಡಿದ್ದಾಗಿ ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ, “ಇದು ಪ್ರತಿಭಟನಾ ಸ್ಥಳದಲ್ಲಿ ರೈತರು ಪರಸ್ಪರ ಭೇಟಿಯಾಗಲು ಅಡ್ಡಿಯಾಗಿದೆ. ಪ್ರತಿಭಟನೆಗೆ ಬೆಂಬಲ ಸೂಚಿಸದಂತೆ ತಡೆಯುವ ಉದ್ದೇಶದಿಂದ ಕೂಡಿದೆ. ಈ ಬ್ಯಾರಿಕೇಡ್‌ಗಳಿಂದ ರೈತರು ಮತ್ತು ಅವರ ಕುಟುಂಬಗಳು, ಮಹಿಳೆಯರು ಮಕ್ಕಳು ಸೇರಿದಂತೆ, ನೀರು ಮತ್ತು ನೈರ್ಮಲ್ಯ ಸೌಲಭ್ಯಗಳಿಗೆ ಪರದಾಡುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಕರ್ತರ ಮೇಲಿನ ದೌರ್ಜನ್ಯ ಮತ್ತು ಕಾಣೆಯಾದ ಪ್ರತಿಭಟನಾಕಾರರ ಬಗ್ಗೆ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ ಕಳವಳ ವ್ಯಕ್ತಪಡಿಸಿದೆ. “ಸತ್ಯವನ್ನು ವರದಿ ಮಾಡಿದ್ದಕ್ಕಾಗಿ ಇಬ್ಬರು ಪತ್ರಕರ್ತರನ್ನು (ಮಂದೀಪ್ ಪುನಿಯಾ ಮತ್ತು ಧರ್ಮೇಂದರ್ ಸಿಂಗ್) ಬಂಧಿಸಿ, ಹಲ್ಲೆ ನಡೆಸಲಾಯಿತು. ಒಂಬತ್ತು ಹಿರಿಯ ಪತ್ರಕರ್ತರ ಮೇಲೆ ಭಾರತ ಸರ್ಕಾರವು ದೇಶದ್ರೋಹ ಆರೋಪ ಸೇರಿದಂತೆ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿದೆ. ಜನವರಿ 26, 2021 ರಂದು ಸಂಭವಿಸಿದ ಹಿಂಸಾತ್ಮಕ ಘರ್ಷಣೆಗೆ ಪ್ರತಿಕ್ರಿಯೆಯಾಗಿ ರೈತರು ಮತ್ತು ಸಾಮಾನ್ಯ ಜನರನ್ನು ಸೇರಿದಂತೆ 125 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ 21 ರೈತರು ಕಾಣೆಯಾಗಿದ್ದಾರೆಂದು ವರದಿಯಾಗಿದೆ” ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಸಿಎಎ, ಎನ್‌ಆರ್‌ಸಿ ವಿರುದ್ಧದ ಆಂದೋಲನದ ಸಮಯದಲ್ಲಿನ ಸಾಮೂಹಿಕ ಬಂಧನಗಳನ್ನು ಪ್ರಸ್ತಾಪಿಸಿದ ಆಯೋಗವು ಒಂದೇ ಮಾದರಿಯಲ್ಲಿ ಭಾರತದಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಿಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದೆ. ರೈತರ ಪ್ರತಿಭಟನೆಯ ಹಕ್ಕನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ ಎಂದು ಅದು ಉಲ್ಲೇಖಿಸಿದೆ.

ಹಾಗಾಗಿ ಕೂಡಲೇ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು ಎಂದು ಆಯೋಗವು ಆಗ್ರಹಿಸಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...