Homeಮುಖಪುಟಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಪೊಲೀಸರು ಹಾಕಿರುವ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳುಗಳನ್ನು ತೆಗೆದುಹಾಕಿ ಮತ್ತು ಗಣರಾಜ್ಯೋತ್ಸವದ ಟ್ರಾಕ್ಟರ್ ರ್ಯಾಲಿಯ ನಂತರ ನಡೆಯುತ್ತಿರುವ ರೈತರ ಅನಿಯಂತ್ರಿತ ಬಂಧನ ನಿಲ್ಲಿಸುವಂತೆ ಜಾಗತಿಕ ಮಾನವ ಹಕ್ಕುಗಳ ಸಂಘಟನೆಯಾದ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗವು ಒತ್ತಾಯಿಸಿದೆ.

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದ್ದು, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ.

ಎರಡು ತಿಂಗಳನಿಂದಲೂ ಶಾಂತಿಯುತ ಹೋರಾಟ ನಡೆಸುತ್ತಿರುವ ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜಿಪುರ್ ಗಡಿಗಳಲ್ಲಿ ಪೊಲೀಸರು ಫೆಬ್ರವರಿ ಆರಂಭದಿಂದಲೆ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳು‌ಗಳನ್ನು ನೆಟ್ಟಿದೆ. ಅಲ್ಲಿಗೆ ಬೇರೆ ಯಾವುದೇ ವಾಹನಗಳು ಮತ್ತು ಜನರು ಬರದಂತೆ ತಡೆಗಟ್ಟಲು ಹೀಗೆ ಮಾಡಿದ್ದಾಗಿ ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ, “ಇದು ಪ್ರತಿಭಟನಾ ಸ್ಥಳದಲ್ಲಿ ರೈತರು ಪರಸ್ಪರ ಭೇಟಿಯಾಗಲು ಅಡ್ಡಿಯಾಗಿದೆ. ಪ್ರತಿಭಟನೆಗೆ ಬೆಂಬಲ ಸೂಚಿಸದಂತೆ ತಡೆಯುವ ಉದ್ದೇಶದಿಂದ ಕೂಡಿದೆ. ಈ ಬ್ಯಾರಿಕೇಡ್‌ಗಳಿಂದ ರೈತರು ಮತ್ತು ಅವರ ಕುಟುಂಬಗಳು, ಮಹಿಳೆಯರು ಮಕ್ಕಳು ಸೇರಿದಂತೆ, ನೀರು ಮತ್ತು ನೈರ್ಮಲ್ಯ ಸೌಲಭ್ಯಗಳಿಗೆ ಪರದಾಡುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಕರ್ತರ ಮೇಲಿನ ದೌರ್ಜನ್ಯ ಮತ್ತು ಕಾಣೆಯಾದ ಪ್ರತಿಭಟನಾಕಾರರ ಬಗ್ಗೆ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ ಕಳವಳ ವ್ಯಕ್ತಪಡಿಸಿದೆ. “ಸತ್ಯವನ್ನು ವರದಿ ಮಾಡಿದ್ದಕ್ಕಾಗಿ ಇಬ್ಬರು ಪತ್ರಕರ್ತರನ್ನು (ಮಂದೀಪ್ ಪುನಿಯಾ ಮತ್ತು ಧರ್ಮೇಂದರ್ ಸಿಂಗ್) ಬಂಧಿಸಿ, ಹಲ್ಲೆ ನಡೆಸಲಾಯಿತು. ಒಂಬತ್ತು ಹಿರಿಯ ಪತ್ರಕರ್ತರ ಮೇಲೆ ಭಾರತ ಸರ್ಕಾರವು ದೇಶದ್ರೋಹ ಆರೋಪ ಸೇರಿದಂತೆ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿದೆ. ಜನವರಿ 26, 2021 ರಂದು ಸಂಭವಿಸಿದ ಹಿಂಸಾತ್ಮಕ ಘರ್ಷಣೆಗೆ ಪ್ರತಿಕ್ರಿಯೆಯಾಗಿ ರೈತರು ಮತ್ತು ಸಾಮಾನ್ಯ ಜನರನ್ನು ಸೇರಿದಂತೆ 125 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ 21 ರೈತರು ಕಾಣೆಯಾಗಿದ್ದಾರೆಂದು ವರದಿಯಾಗಿದೆ” ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಸಿಎಎ, ಎನ್‌ಆರ್‌ಸಿ ವಿರುದ್ಧದ ಆಂದೋಲನದ ಸಮಯದಲ್ಲಿನ ಸಾಮೂಹಿಕ ಬಂಧನಗಳನ್ನು ಪ್ರಸ್ತಾಪಿಸಿದ ಆಯೋಗವು ಒಂದೇ ಮಾದರಿಯಲ್ಲಿ ಭಾರತದಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಿಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದೆ. ರೈತರ ಪ್ರತಿಭಟನೆಯ ಹಕ್ಕನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ ಎಂದು ಅದು ಉಲ್ಲೇಖಿಸಿದೆ.

ಹಾಗಾಗಿ ಕೂಡಲೇ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು ಎಂದು ಆಯೋಗವು ಆಗ್ರಹಿಸಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...