Homeಮುಖಪುಟಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಪೊಲೀಸರು ಹಾಕಿರುವ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳುಗಳನ್ನು ತೆಗೆದುಹಾಕಿ ಮತ್ತು ಗಣರಾಜ್ಯೋತ್ಸವದ ಟ್ರಾಕ್ಟರ್ ರ್ಯಾಲಿಯ ನಂತರ ನಡೆಯುತ್ತಿರುವ ರೈತರ ಅನಿಯಂತ್ರಿತ ಬಂಧನ ನಿಲ್ಲಿಸುವಂತೆ ಜಾಗತಿಕ ಮಾನವ ಹಕ್ಕುಗಳ ಸಂಘಟನೆಯಾದ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗವು ಒತ್ತಾಯಿಸಿದೆ.

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದ್ದು, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ.

ಎರಡು ತಿಂಗಳನಿಂದಲೂ ಶಾಂತಿಯುತ ಹೋರಾಟ ನಡೆಸುತ್ತಿರುವ ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜಿಪುರ್ ಗಡಿಗಳಲ್ಲಿ ಪೊಲೀಸರು ಫೆಬ್ರವರಿ ಆರಂಭದಿಂದಲೆ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳು‌ಗಳನ್ನು ನೆಟ್ಟಿದೆ. ಅಲ್ಲಿಗೆ ಬೇರೆ ಯಾವುದೇ ವಾಹನಗಳು ಮತ್ತು ಜನರು ಬರದಂತೆ ತಡೆಗಟ್ಟಲು ಹೀಗೆ ಮಾಡಿದ್ದಾಗಿ ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ, “ಇದು ಪ್ರತಿಭಟನಾ ಸ್ಥಳದಲ್ಲಿ ರೈತರು ಪರಸ್ಪರ ಭೇಟಿಯಾಗಲು ಅಡ್ಡಿಯಾಗಿದೆ. ಪ್ರತಿಭಟನೆಗೆ ಬೆಂಬಲ ಸೂಚಿಸದಂತೆ ತಡೆಯುವ ಉದ್ದೇಶದಿಂದ ಕೂಡಿದೆ. ಈ ಬ್ಯಾರಿಕೇಡ್‌ಗಳಿಂದ ರೈತರು ಮತ್ತು ಅವರ ಕುಟುಂಬಗಳು, ಮಹಿಳೆಯರು ಮಕ್ಕಳು ಸೇರಿದಂತೆ, ನೀರು ಮತ್ತು ನೈರ್ಮಲ್ಯ ಸೌಲಭ್ಯಗಳಿಗೆ ಪರದಾಡುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಕರ್ತರ ಮೇಲಿನ ದೌರ್ಜನ್ಯ ಮತ್ತು ಕಾಣೆಯಾದ ಪ್ರತಿಭಟನಾಕಾರರ ಬಗ್ಗೆ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ ಕಳವಳ ವ್ಯಕ್ತಪಡಿಸಿದೆ. “ಸತ್ಯವನ್ನು ವರದಿ ಮಾಡಿದ್ದಕ್ಕಾಗಿ ಇಬ್ಬರು ಪತ್ರಕರ್ತರನ್ನು (ಮಂದೀಪ್ ಪುನಿಯಾ ಮತ್ತು ಧರ್ಮೇಂದರ್ ಸಿಂಗ್) ಬಂಧಿಸಿ, ಹಲ್ಲೆ ನಡೆಸಲಾಯಿತು. ಒಂಬತ್ತು ಹಿರಿಯ ಪತ್ರಕರ್ತರ ಮೇಲೆ ಭಾರತ ಸರ್ಕಾರವು ದೇಶದ್ರೋಹ ಆರೋಪ ಸೇರಿದಂತೆ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿದೆ. ಜನವರಿ 26, 2021 ರಂದು ಸಂಭವಿಸಿದ ಹಿಂಸಾತ್ಮಕ ಘರ್ಷಣೆಗೆ ಪ್ರತಿಕ್ರಿಯೆಯಾಗಿ ರೈತರು ಮತ್ತು ಸಾಮಾನ್ಯ ಜನರನ್ನು ಸೇರಿದಂತೆ 125 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ 21 ರೈತರು ಕಾಣೆಯಾಗಿದ್ದಾರೆಂದು ವರದಿಯಾಗಿದೆ” ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಸಿಎಎ, ಎನ್‌ಆರ್‌ಸಿ ವಿರುದ್ಧದ ಆಂದೋಲನದ ಸಮಯದಲ್ಲಿನ ಸಾಮೂಹಿಕ ಬಂಧನಗಳನ್ನು ಪ್ರಸ್ತಾಪಿಸಿದ ಆಯೋಗವು ಒಂದೇ ಮಾದರಿಯಲ್ಲಿ ಭಾರತದಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಿಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದೆ. ರೈತರ ಪ್ರತಿಭಟನೆಯ ಹಕ್ಕನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ ಎಂದು ಅದು ಉಲ್ಲೇಖಿಸಿದೆ.

ಹಾಗಾಗಿ ಕೂಡಲೇ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು ಎಂದು ಆಯೋಗವು ಆಗ್ರಹಿಸಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...