Homeಮುಖಪುಟಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

ಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

’ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಆರು ತಿಂಗಳಾಗಿದ್ದು, ಬೇಡಿಕೆಗಳನ್ನು ಪ್ರಜಾತಾಂತ್ರಿಕವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

“ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರಹೊಣೆ. ಜಗತ್ತಿನ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

’ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಸಂಬಂಧವಿರುವವರು. ಇಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ. ದೇಶದ ಎಲ್ಲ ರಂಗಗಳು ವಿಫಲವಾಗಿದ್ದಾಗ ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೂ ತೊಗರಿ, ಹೆಸರು, ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಬೆಳೆಗಳಿಗೆ ಒಳ್ಳೆ ಬೆಲೆ ಏಕೆ ಸಿಗಲಿಲ್ಲ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

 

’ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ. 120 ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ.16 ಹೆಚ್ಚಾಗಿದೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು..?. ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿ ಮತ್ತು ಅದಾನಿ ವಿಲ್ಮಾರ್ ಕಂಪೆನಿ. ದೇಶದಲ್ಲಿ ಸುಮಾರು 5 ಮಿಲಿಯನ್ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ 30 ರೂಗಳಷ್ಟು ಹೆಚ್ಚಾದರೆ ಈ ಕಂಪೆನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿಯಷ್ಟು ಹೆಚ್ಚಿನ ಲಾಭ ಸಿಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ತೊಗರಿಬೇಳೆಯ ಬೆಲೆ ಕಳೆದ ಕೆಲವು ತಿಂಗಳಿಂದ ಈಚೆಗೆ ಸರಾಸರಿ 100 ರೂಪಾಯಿಗಳಷ್ಟು ಹೆಚ್ಚಾಗಿದೆ. ಅನೇಕ ಕಡೆ ಕೆಜಿಗೆ 180 ರೂ.ವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷ ಇದು 80-90 ರೂ. ಮಾತ್ರ ಇತ್ತು. ಪರಿಸ್ಥಿತಿ ಹೀಗೆ ಇದ್ದರೆ ರೈತರ ಉದ್ಧಾರ ಹೇಗೆ ಸಾಧ್ಯ..? ವಿದೇಶಿ ಆಮದನ್ನು ನಿಲ್ಲಿಸಿ, ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾವು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿದ್ದ ಪತ್ರ ಬಗ್ಗೆಯೂ ಸಿದ್ದರಾಮಯ್ಯ ನೆನಪಿಸಿದ್ದಾರೆ. ’ಹಿಂದೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ, “ ರೈತರು ನಡೆಸುತ್ತಿರುವ ಹೋರಾಟ ತಮಗಾಗಿ ಮಾತ್ರವಲ್ಲ. ರೈತರ ಉತ್ಪನ್ನಗಳನ್ನು ಕೊಂಡುಕೊಳ್ಳುತ್ತಿರುವ ಗ್ರಾಹಕರ ಪರವಾಗಿ ನಡೆಸುತ್ತಿರುವ ಹೋರಾಟವು ಆಗಿದೆ”.  ಇದು ದೇಶ ಉಳಿಸುವ ಹೋರಾಟವು ಹೌದು’ ಎಂದಿದ್ದಾರೆ.

 

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

’ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯಿದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯಿದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿಯನ್ನು ರಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...