Homeಮುಖಪುಟಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

ಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

’ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಆರು ತಿಂಗಳಾಗಿದ್ದು, ಬೇಡಿಕೆಗಳನ್ನು ಪ್ರಜಾತಾಂತ್ರಿಕವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

“ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರಹೊಣೆ. ಜಗತ್ತಿನ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

’ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಸಂಬಂಧವಿರುವವರು. ಇಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ. ದೇಶದ ಎಲ್ಲ ರಂಗಗಳು ವಿಫಲವಾಗಿದ್ದಾಗ ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೂ ತೊಗರಿ, ಹೆಸರು, ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಬೆಳೆಗಳಿಗೆ ಒಳ್ಳೆ ಬೆಲೆ ಏಕೆ ಸಿಗಲಿಲ್ಲ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

 

’ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ. 120 ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ.16 ಹೆಚ್ಚಾಗಿದೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು..?. ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿ ಮತ್ತು ಅದಾನಿ ವಿಲ್ಮಾರ್ ಕಂಪೆನಿ. ದೇಶದಲ್ಲಿ ಸುಮಾರು 5 ಮಿಲಿಯನ್ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ 30 ರೂಗಳಷ್ಟು ಹೆಚ್ಚಾದರೆ ಈ ಕಂಪೆನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿಯಷ್ಟು ಹೆಚ್ಚಿನ ಲಾಭ ಸಿಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ತೊಗರಿಬೇಳೆಯ ಬೆಲೆ ಕಳೆದ ಕೆಲವು ತಿಂಗಳಿಂದ ಈಚೆಗೆ ಸರಾಸರಿ 100 ರೂಪಾಯಿಗಳಷ್ಟು ಹೆಚ್ಚಾಗಿದೆ. ಅನೇಕ ಕಡೆ ಕೆಜಿಗೆ 180 ರೂ.ವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷ ಇದು 80-90 ರೂ. ಮಾತ್ರ ಇತ್ತು. ಪರಿಸ್ಥಿತಿ ಹೀಗೆ ಇದ್ದರೆ ರೈತರ ಉದ್ಧಾರ ಹೇಗೆ ಸಾಧ್ಯ..? ವಿದೇಶಿ ಆಮದನ್ನು ನಿಲ್ಲಿಸಿ, ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾವು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿದ್ದ ಪತ್ರ ಬಗ್ಗೆಯೂ ಸಿದ್ದರಾಮಯ್ಯ ನೆನಪಿಸಿದ್ದಾರೆ. ’ಹಿಂದೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ, “ ರೈತರು ನಡೆಸುತ್ತಿರುವ ಹೋರಾಟ ತಮಗಾಗಿ ಮಾತ್ರವಲ್ಲ. ರೈತರ ಉತ್ಪನ್ನಗಳನ್ನು ಕೊಂಡುಕೊಳ್ಳುತ್ತಿರುವ ಗ್ರಾಹಕರ ಪರವಾಗಿ ನಡೆಸುತ್ತಿರುವ ಹೋರಾಟವು ಆಗಿದೆ”.  ಇದು ದೇಶ ಉಳಿಸುವ ಹೋರಾಟವು ಹೌದು’ ಎಂದಿದ್ದಾರೆ.

 

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

’ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯಿದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯಿದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿಯನ್ನು ರಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...