Homeಮುಖಪುಟಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

ಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

’ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಆರು ತಿಂಗಳಾಗಿದ್ದು, ಬೇಡಿಕೆಗಳನ್ನು ಪ್ರಜಾತಾಂತ್ರಿಕವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

“ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರಹೊಣೆ. ಜಗತ್ತಿನ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

’ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಸಂಬಂಧವಿರುವವರು. ಇಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ. ದೇಶದ ಎಲ್ಲ ರಂಗಗಳು ವಿಫಲವಾಗಿದ್ದಾಗ ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೂ ತೊಗರಿ, ಹೆಸರು, ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಬೆಳೆಗಳಿಗೆ ಒಳ್ಳೆ ಬೆಲೆ ಏಕೆ ಸಿಗಲಿಲ್ಲ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

 

’ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ. 120 ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ.16 ಹೆಚ್ಚಾಗಿದೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು..?. ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿ ಮತ್ತು ಅದಾನಿ ವಿಲ್ಮಾರ್ ಕಂಪೆನಿ. ದೇಶದಲ್ಲಿ ಸುಮಾರು 5 ಮಿಲಿಯನ್ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ 30 ರೂಗಳಷ್ಟು ಹೆಚ್ಚಾದರೆ ಈ ಕಂಪೆನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿಯಷ್ಟು ಹೆಚ್ಚಿನ ಲಾಭ ಸಿಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ತೊಗರಿಬೇಳೆಯ ಬೆಲೆ ಕಳೆದ ಕೆಲವು ತಿಂಗಳಿಂದ ಈಚೆಗೆ ಸರಾಸರಿ 100 ರೂಪಾಯಿಗಳಷ್ಟು ಹೆಚ್ಚಾಗಿದೆ. ಅನೇಕ ಕಡೆ ಕೆಜಿಗೆ 180 ರೂ.ವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷ ಇದು 80-90 ರೂ. ಮಾತ್ರ ಇತ್ತು. ಪರಿಸ್ಥಿತಿ ಹೀಗೆ ಇದ್ದರೆ ರೈತರ ಉದ್ಧಾರ ಹೇಗೆ ಸಾಧ್ಯ..? ವಿದೇಶಿ ಆಮದನ್ನು ನಿಲ್ಲಿಸಿ, ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾವು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿದ್ದ ಪತ್ರ ಬಗ್ಗೆಯೂ ಸಿದ್ದರಾಮಯ್ಯ ನೆನಪಿಸಿದ್ದಾರೆ. ’ಹಿಂದೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ, “ ರೈತರು ನಡೆಸುತ್ತಿರುವ ಹೋರಾಟ ತಮಗಾಗಿ ಮಾತ್ರವಲ್ಲ. ರೈತರ ಉತ್ಪನ್ನಗಳನ್ನು ಕೊಂಡುಕೊಳ್ಳುತ್ತಿರುವ ಗ್ರಾಹಕರ ಪರವಾಗಿ ನಡೆಸುತ್ತಿರುವ ಹೋರಾಟವು ಆಗಿದೆ”.  ಇದು ದೇಶ ಉಳಿಸುವ ಹೋರಾಟವು ಹೌದು’ ಎಂದಿದ್ದಾರೆ.

 

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

’ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯಿದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯಿದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿಯನ್ನು ರಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...