Homeಮುಖಪುಟಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

ಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

’ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಆರು ತಿಂಗಳಾಗಿದ್ದು, ಬೇಡಿಕೆಗಳನ್ನು ಪ್ರಜಾತಾಂತ್ರಿಕವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

“ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರಹೊಣೆ. ಜಗತ್ತಿನ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

’ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಸಂಬಂಧವಿರುವವರು. ಇಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ. ದೇಶದ ಎಲ್ಲ ರಂಗಗಳು ವಿಫಲವಾಗಿದ್ದಾಗ ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೂ ತೊಗರಿ, ಹೆಸರು, ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಬೆಳೆಗಳಿಗೆ ಒಳ್ಳೆ ಬೆಲೆ ಏಕೆ ಸಿಗಲಿಲ್ಲ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

 

’ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ. 120 ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ.16 ಹೆಚ್ಚಾಗಿದೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು..?. ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿ ಮತ್ತು ಅದಾನಿ ವಿಲ್ಮಾರ್ ಕಂಪೆನಿ. ದೇಶದಲ್ಲಿ ಸುಮಾರು 5 ಮಿಲಿಯನ್ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ 30 ರೂಗಳಷ್ಟು ಹೆಚ್ಚಾದರೆ ಈ ಕಂಪೆನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿಯಷ್ಟು ಹೆಚ್ಚಿನ ಲಾಭ ಸಿಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ತೊಗರಿಬೇಳೆಯ ಬೆಲೆ ಕಳೆದ ಕೆಲವು ತಿಂಗಳಿಂದ ಈಚೆಗೆ ಸರಾಸರಿ 100 ರೂಪಾಯಿಗಳಷ್ಟು ಹೆಚ್ಚಾಗಿದೆ. ಅನೇಕ ಕಡೆ ಕೆಜಿಗೆ 180 ರೂ.ವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷ ಇದು 80-90 ರೂ. ಮಾತ್ರ ಇತ್ತು. ಪರಿಸ್ಥಿತಿ ಹೀಗೆ ಇದ್ದರೆ ರೈತರ ಉದ್ಧಾರ ಹೇಗೆ ಸಾಧ್ಯ..? ವಿದೇಶಿ ಆಮದನ್ನು ನಿಲ್ಲಿಸಿ, ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾವು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿದ್ದ ಪತ್ರ ಬಗ್ಗೆಯೂ ಸಿದ್ದರಾಮಯ್ಯ ನೆನಪಿಸಿದ್ದಾರೆ. ’ಹಿಂದೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ, “ ರೈತರು ನಡೆಸುತ್ತಿರುವ ಹೋರಾಟ ತಮಗಾಗಿ ಮಾತ್ರವಲ್ಲ. ರೈತರ ಉತ್ಪನ್ನಗಳನ್ನು ಕೊಂಡುಕೊಳ್ಳುತ್ತಿರುವ ಗ್ರಾಹಕರ ಪರವಾಗಿ ನಡೆಸುತ್ತಿರುವ ಹೋರಾಟವು ಆಗಿದೆ”.  ಇದು ದೇಶ ಉಳಿಸುವ ಹೋರಾಟವು ಹೌದು’ ಎಂದಿದ್ದಾರೆ.

 

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

’ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯಿದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯಿದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿಯನ್ನು ರಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...