Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...