Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...