Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....