Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...