Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...