Homeಚಳವಳಿರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರವ್ಯಾಪಿ ನಡೆಯುತ್ತಿರುವ ರೈತರ ಹೋರಾಟ 132 ನೇ ದಿನಕ್ಕೆ ಕಾಲಿಟ್ಟಿದ್ದು ಮತ್ತಷ್ಟು ತೀವ್ರಗೊಂಡಿದೆ. ದೆಹಲಿಯ ಗಡಿಗಳನ್ನೂ ಸುತ್ತುವರೆದಿರುವ ರೈತರು ಹೋರಾಟ ಸಮಯದಲ್ಲಿ ಹುತಾತ್ಮರಾದ ರೈತರ ಹುತಾತ್ಮ ಸ್ಮಾರಕ ನಿರ್ಮಾಣ ಮಾಡಿದ್ದಾರೆ.

ಸ್ಮಾರಕ ನಿರ್ಮಾಣಕ್ಕೆ ಮಣ್ಣು ಸಂಗ್ರಹಿಸಲು ಹೋರಾಟಗಾರರ ಒಂದು ತಂಡ ಮಾರ್ಚ್ 30 ರಂದು ಮಿಟ್ಟಿ ಯಾತ್ರೆ ಆರಂಭ ಮಾಡಿತ್ತು. ಗುಜರಾತ್‌ನ ದಂಡಿಯಿಂದ ಪ್ರಾರಂಭವಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್ ಮೂಲಕ ದೆಹಲಿ ಗಡಿ ತಲುಪಿದೆ. ಮಿಟ್ಟಿ ಸತ್ಯಾಗ್ರಹ ಯಾತ್ರೆಯಲ್ಲಿ 23 ರಾಜ್ಯಗಳ 1500 ಹಳ್ಳಿಗಳಿಂದ ಮಣ್ಣು ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಮಿಟ್ಟಿ ಸತ್ಯಾಗ್ರಹ ಯಾತ್ರೆಯನ್ನು ದೇಶದ ಹಲವು ರಾಜ್ಯಗಳಲ್ಲಿ ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ್, ಅಸ್ಸಾಂ ಮತ್ತು ಪಂಜಾಬ್‌ನಲ್ಲಿ ಆಯೋಜಿಸಲಾಗಿತ್ತು.

ಗುಜರಾತ್‌ನ ಕಲಾವಿದರು, ಮಿಟ್ಟಿ ಸತ್ಯಾಗ್ರಹದಲ್ಲಿದ್ದವರು ಮತ್ತು ರೈತರ ತಂಡ ಹುತಾತ್ಮ ಸ್ಮಾರಕವನ್ನು ದೇಶದಾದ್ಯಂತ ಸಂಗ್ರಹಿಸಿದ್ದ ಮಣ್ಣಿನಿಂದ ದೆಹಲಿ-ಗಾಝಿಪುರ್ ಗಡಿಯಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರತಿಭಟನೆ ನಡೆಯುತ್ತಿರುವ ಪ್ರತಿ ಗಡಿಯಲ್ಲಿಯೂ ಹುತಾತ್ಮ ರೈತರ ಸ್ಮಾರಕಗಳನ್ನು ನಿರ್ಮಿಸಲಾಗಿದೆ.

ಮಿಟ್ಟಿ ಸತ್ಯಾಗ್ರಹ ಯಾತ್ರೆಯಲ್ಲಿ ತೆಲಂಗಾಣದ ಸಾವಿರಾರು ರೈತರು ವಿಶೇಷವಾಗಿ ಭಾಗವಹಿಸಿದ್ದರು. ಪ್ರತಿಭಟನೆಯ ಭಾಗವಾಗಿ, ರಾಜ್ಯದ ವಿವಿಧ ಭಾಗಗಳ ರೈತರು ತಮ್ಮ ಹೊಲಗಳಿಂದ ಮಣ್ಣನ್ನು ಸಂಗ್ರಹಿಸಿ ದೆಹಲಿಯ ಗಾಜಿಪುರ ಗಡಿ ಮತ್ತು ಸಿಂಗು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಕಳುಹಿಸಿದ್ದರು.

ಹುತಾತ್ಮ ಭಗತ್ ಸಿಂಗ್ ಅವರ ಗ್ರಾಮ ಖಟ್ಖಾದ್ ಕಲಾನ್, ಹುತಾತ್ಮ ಸುಖದೇವ್ ಅವರ ಗ್ರಾಮ ನೌಘರಾ ಜಿಲ್ಲೆ ಲೂಧಿಯಾನ, ಉಧಮ್ ಸಿಂಗ್ ಅವರ ಗ್ರಾಮ ಸುನಮ್ ಜಿಲ್ಲೆ ಸಂಗ್ರೂರ್, ಹುತಾತ್ಮ ಚಂದ್ರಶೇಖರ್ ಆಜಾದ್ ಅವರ ಜನ್ಮಸ್ಥಳ ಭಭಾರಗಳಿಂದಲೂ ಈ ಸ್ಮಾರಕಕ್ಕೆ ಮಣ್ಣು ಸೇರಿದೆ.

ಕರ್ನಾಟಕದ ಬಸವ ಕಲ್ಯಾಣ ಮತ್ತು ಬಳ್ಳಾರಿ, ಗುಜರಾತ್‌ನ 33 ಜಿಲ್ಲೆಗಳ 800 ಗ್ರಾಮಗಳು, ಮಹಾರಾಷ್ಟ್ರದ 150 ಗ್ರಾಮಗಳು, ರಾಜಸ್ಥಾನದ 150 ಗ್ರಾಮಗಳು, ಆಂಧ್ರಪ್ರದೇಶ ಮತ್ತು ತೆಲಂಗಾಣ ಗ್ರಾಮಗಳು, ಉತ್ತರ ಪ್ರದೇಶದ 75 ಗ್ರಾಮಗಳು, ಬಿಹಾರದ 30 ಗ್ರಾಮಗಳು, ಹರಿಯಾಣದ 60 ಗ್ರಾಮಗಳು, ಪಂಜಾಬ್‌ನ 78 ಗ್ರಾಮಗಳ ಮಣ್ಣು ‘ಮಿಟ್ಟಿ ಸತ್ಯಾಗ್ರಹ’ಕ್ಕೆ ಬಂದಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...