Homeಚಳವಳಿರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರವ್ಯಾಪಿ ನಡೆಯುತ್ತಿರುವ ರೈತರ ಹೋರಾಟ 132 ನೇ ದಿನಕ್ಕೆ ಕಾಲಿಟ್ಟಿದ್ದು ಮತ್ತಷ್ಟು ತೀವ್ರಗೊಂಡಿದೆ. ದೆಹಲಿಯ ಗಡಿಗಳನ್ನೂ ಸುತ್ತುವರೆದಿರುವ ರೈತರು ಹೋರಾಟ ಸಮಯದಲ್ಲಿ ಹುತಾತ್ಮರಾದ ರೈತರ ಹುತಾತ್ಮ ಸ್ಮಾರಕ ನಿರ್ಮಾಣ ಮಾಡಿದ್ದಾರೆ.

ಸ್ಮಾರಕ ನಿರ್ಮಾಣಕ್ಕೆ ಮಣ್ಣು ಸಂಗ್ರಹಿಸಲು ಹೋರಾಟಗಾರರ ಒಂದು ತಂಡ ಮಾರ್ಚ್ 30 ರಂದು ಮಿಟ್ಟಿ ಯಾತ್ರೆ ಆರಂಭ ಮಾಡಿತ್ತು. ಗುಜರಾತ್‌ನ ದಂಡಿಯಿಂದ ಪ್ರಾರಂಭವಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್ ಮೂಲಕ ದೆಹಲಿ ಗಡಿ ತಲುಪಿದೆ. ಮಿಟ್ಟಿ ಸತ್ಯಾಗ್ರಹ ಯಾತ್ರೆಯಲ್ಲಿ 23 ರಾಜ್ಯಗಳ 1500 ಹಳ್ಳಿಗಳಿಂದ ಮಣ್ಣು ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಮಿಟ್ಟಿ ಸತ್ಯಾಗ್ರಹ ಯಾತ್ರೆಯನ್ನು ದೇಶದ ಹಲವು ರಾಜ್ಯಗಳಲ್ಲಿ ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ್, ಅಸ್ಸಾಂ ಮತ್ತು ಪಂಜಾಬ್‌ನಲ್ಲಿ ಆಯೋಜಿಸಲಾಗಿತ್ತು.

ಗುಜರಾತ್‌ನ ಕಲಾವಿದರು, ಮಿಟ್ಟಿ ಸತ್ಯಾಗ್ರಹದಲ್ಲಿದ್ದವರು ಮತ್ತು ರೈತರ ತಂಡ ಹುತಾತ್ಮ ಸ್ಮಾರಕವನ್ನು ದೇಶದಾದ್ಯಂತ ಸಂಗ್ರಹಿಸಿದ್ದ ಮಣ್ಣಿನಿಂದ ದೆಹಲಿ-ಗಾಝಿಪುರ್ ಗಡಿಯಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರತಿಭಟನೆ ನಡೆಯುತ್ತಿರುವ ಪ್ರತಿ ಗಡಿಯಲ್ಲಿಯೂ ಹುತಾತ್ಮ ರೈತರ ಸ್ಮಾರಕಗಳನ್ನು ನಿರ್ಮಿಸಲಾಗಿದೆ.

ಮಿಟ್ಟಿ ಸತ್ಯಾಗ್ರಹ ಯಾತ್ರೆಯಲ್ಲಿ ತೆಲಂಗಾಣದ ಸಾವಿರಾರು ರೈತರು ವಿಶೇಷವಾಗಿ ಭಾಗವಹಿಸಿದ್ದರು. ಪ್ರತಿಭಟನೆಯ ಭಾಗವಾಗಿ, ರಾಜ್ಯದ ವಿವಿಧ ಭಾಗಗಳ ರೈತರು ತಮ್ಮ ಹೊಲಗಳಿಂದ ಮಣ್ಣನ್ನು ಸಂಗ್ರಹಿಸಿ ದೆಹಲಿಯ ಗಾಜಿಪುರ ಗಡಿ ಮತ್ತು ಸಿಂಗು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಕಳುಹಿಸಿದ್ದರು.

ಹುತಾತ್ಮ ಭಗತ್ ಸಿಂಗ್ ಅವರ ಗ್ರಾಮ ಖಟ್ಖಾದ್ ಕಲಾನ್, ಹುತಾತ್ಮ ಸುಖದೇವ್ ಅವರ ಗ್ರಾಮ ನೌಘರಾ ಜಿಲ್ಲೆ ಲೂಧಿಯಾನ, ಉಧಮ್ ಸಿಂಗ್ ಅವರ ಗ್ರಾಮ ಸುನಮ್ ಜಿಲ್ಲೆ ಸಂಗ್ರೂರ್, ಹುತಾತ್ಮ ಚಂದ್ರಶೇಖರ್ ಆಜಾದ್ ಅವರ ಜನ್ಮಸ್ಥಳ ಭಭಾರಗಳಿಂದಲೂ ಈ ಸ್ಮಾರಕಕ್ಕೆ ಮಣ್ಣು ಸೇರಿದೆ.

ಕರ್ನಾಟಕದ ಬಸವ ಕಲ್ಯಾಣ ಮತ್ತು ಬಳ್ಳಾರಿ, ಗುಜರಾತ್‌ನ 33 ಜಿಲ್ಲೆಗಳ 800 ಗ್ರಾಮಗಳು, ಮಹಾರಾಷ್ಟ್ರದ 150 ಗ್ರಾಮಗಳು, ರಾಜಸ್ಥಾನದ 150 ಗ್ರಾಮಗಳು, ಆಂಧ್ರಪ್ರದೇಶ ಮತ್ತು ತೆಲಂಗಾಣ ಗ್ರಾಮಗಳು, ಉತ್ತರ ಪ್ರದೇಶದ 75 ಗ್ರಾಮಗಳು, ಬಿಹಾರದ 30 ಗ್ರಾಮಗಳು, ಹರಿಯಾಣದ 60 ಗ್ರಾಮಗಳು, ಪಂಜಾಬ್‌ನ 78 ಗ್ರಾಮಗಳ ಮಣ್ಣು ‘ಮಿಟ್ಟಿ ಸತ್ಯಾಗ್ರಹ’ಕ್ಕೆ ಬಂದಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...