Homeಚಳವಳಿರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರವ್ಯಾಪಿ ನಡೆಯುತ್ತಿರುವ ರೈತರ ಹೋರಾಟ 132 ನೇ ದಿನಕ್ಕೆ ಕಾಲಿಟ್ಟಿದ್ದು ಮತ್ತಷ್ಟು ತೀವ್ರಗೊಂಡಿದೆ. ದೆಹಲಿಯ ಗಡಿಗಳನ್ನೂ ಸುತ್ತುವರೆದಿರುವ ರೈತರು ಹೋರಾಟ ಸಮಯದಲ್ಲಿ ಹುತಾತ್ಮರಾದ ರೈತರ ಹುತಾತ್ಮ ಸ್ಮಾರಕ ನಿರ್ಮಾಣ ಮಾಡಿದ್ದಾರೆ.

ಸ್ಮಾರಕ ನಿರ್ಮಾಣಕ್ಕೆ ಮಣ್ಣು ಸಂಗ್ರಹಿಸಲು ಹೋರಾಟಗಾರರ ಒಂದು ತಂಡ ಮಾರ್ಚ್ 30 ರಂದು ಮಿಟ್ಟಿ ಯಾತ್ರೆ ಆರಂಭ ಮಾಡಿತ್ತು. ಗುಜರಾತ್‌ನ ದಂಡಿಯಿಂದ ಪ್ರಾರಂಭವಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್ ಮೂಲಕ ದೆಹಲಿ ಗಡಿ ತಲುಪಿದೆ. ಮಿಟ್ಟಿ ಸತ್ಯಾಗ್ರಹ ಯಾತ್ರೆಯಲ್ಲಿ 23 ರಾಜ್ಯಗಳ 1500 ಹಳ್ಳಿಗಳಿಂದ ಮಣ್ಣು ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಮಿಟ್ಟಿ ಸತ್ಯಾಗ್ರಹ ಯಾತ್ರೆಯನ್ನು ದೇಶದ ಹಲವು ರಾಜ್ಯಗಳಲ್ಲಿ ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ್, ಅಸ್ಸಾಂ ಮತ್ತು ಪಂಜಾಬ್‌ನಲ್ಲಿ ಆಯೋಜಿಸಲಾಗಿತ್ತು.

ಗುಜರಾತ್‌ನ ಕಲಾವಿದರು, ಮಿಟ್ಟಿ ಸತ್ಯಾಗ್ರಹದಲ್ಲಿದ್ದವರು ಮತ್ತು ರೈತರ ತಂಡ ಹುತಾತ್ಮ ಸ್ಮಾರಕವನ್ನು ದೇಶದಾದ್ಯಂತ ಸಂಗ್ರಹಿಸಿದ್ದ ಮಣ್ಣಿನಿಂದ ದೆಹಲಿ-ಗಾಝಿಪುರ್ ಗಡಿಯಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರತಿಭಟನೆ ನಡೆಯುತ್ತಿರುವ ಪ್ರತಿ ಗಡಿಯಲ್ಲಿಯೂ ಹುತಾತ್ಮ ರೈತರ ಸ್ಮಾರಕಗಳನ್ನು ನಿರ್ಮಿಸಲಾಗಿದೆ.

ಮಿಟ್ಟಿ ಸತ್ಯಾಗ್ರಹ ಯಾತ್ರೆಯಲ್ಲಿ ತೆಲಂಗಾಣದ ಸಾವಿರಾರು ರೈತರು ವಿಶೇಷವಾಗಿ ಭಾಗವಹಿಸಿದ್ದರು. ಪ್ರತಿಭಟನೆಯ ಭಾಗವಾಗಿ, ರಾಜ್ಯದ ವಿವಿಧ ಭಾಗಗಳ ರೈತರು ತಮ್ಮ ಹೊಲಗಳಿಂದ ಮಣ್ಣನ್ನು ಸಂಗ್ರಹಿಸಿ ದೆಹಲಿಯ ಗಾಜಿಪುರ ಗಡಿ ಮತ್ತು ಸಿಂಗು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಕಳುಹಿಸಿದ್ದರು.

ಹುತಾತ್ಮ ಭಗತ್ ಸಿಂಗ್ ಅವರ ಗ್ರಾಮ ಖಟ್ಖಾದ್ ಕಲಾನ್, ಹುತಾತ್ಮ ಸುಖದೇವ್ ಅವರ ಗ್ರಾಮ ನೌಘರಾ ಜಿಲ್ಲೆ ಲೂಧಿಯಾನ, ಉಧಮ್ ಸಿಂಗ್ ಅವರ ಗ್ರಾಮ ಸುನಮ್ ಜಿಲ್ಲೆ ಸಂಗ್ರೂರ್, ಹುತಾತ್ಮ ಚಂದ್ರಶೇಖರ್ ಆಜಾದ್ ಅವರ ಜನ್ಮಸ್ಥಳ ಭಭಾರಗಳಿಂದಲೂ ಈ ಸ್ಮಾರಕಕ್ಕೆ ಮಣ್ಣು ಸೇರಿದೆ.

ಕರ್ನಾಟಕದ ಬಸವ ಕಲ್ಯಾಣ ಮತ್ತು ಬಳ್ಳಾರಿ, ಗುಜರಾತ್‌ನ 33 ಜಿಲ್ಲೆಗಳ 800 ಗ್ರಾಮಗಳು, ಮಹಾರಾಷ್ಟ್ರದ 150 ಗ್ರಾಮಗಳು, ರಾಜಸ್ಥಾನದ 150 ಗ್ರಾಮಗಳು, ಆಂಧ್ರಪ್ರದೇಶ ಮತ್ತು ತೆಲಂಗಾಣ ಗ್ರಾಮಗಳು, ಉತ್ತರ ಪ್ರದೇಶದ 75 ಗ್ರಾಮಗಳು, ಬಿಹಾರದ 30 ಗ್ರಾಮಗಳು, ಹರಿಯಾಣದ 60 ಗ್ರಾಮಗಳು, ಪಂಜಾಬ್‌ನ 78 ಗ್ರಾಮಗಳ ಮಣ್ಣು ‘ಮಿಟ್ಟಿ ಸತ್ಯಾಗ್ರಹ’ಕ್ಕೆ ಬಂದಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...