Homeಚಳವಳಿರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ - ಹೋರಾಟದ ಮುಂದೇನು ದಾರಿ?

ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 41 ನೇ ದಿನಕ್ಕೆ ಕಾಲಿಟ್ಟಿದೆ. ರೈತರೊಂದಿಗೆ ನಡೆಸಿದ ಏಳನೇ ಸುತ್ತಿನ ಮಾತುಕತೆಯು ವಿಫಲವಾಗಿದೆ. ಒಕ್ಕೂಟ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಈ ಹಿನ್ನಲೆಯಲ್ಲಿ ಎಲ್ಲರ ಚಿತ್ರ ಸುಪ್ರೀಂ ಕೋರ್ಟ್‌ನತ್ತ ತಿರುಗಿದೆ.

ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಹಾಗೂ ಅದಕ್ಕೆ ಸಂಬಂಧಿಸಿ ಒಟ್ಟು ಎಂಟು ಅರ್ಜಿಗಳು ಸಲ್ಲಿಕೆಯಾಗಿದೆ. ಮಂಗಳವಾರ(ಇಂದು) ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ಸು‌ಪ್ರೀಂ ಕೋರ್ಟ್‌ ಅರ್ಜಿಗಳಲ್ಲಿ ರೈತ ಸಂಘಟನೆಗಳನ್ನು ಕೂಡಾ ಕಕ್ಷಿದಾರರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಆದರೆ ರೈತ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ’ನಮಗೆ ಕಾನೂನು ಪರಿಹಾರ ಬೇಕಿಲ್ಲ, ಸರ್ಕಾರದಿಂದ ಪರಿಹಾರ ಬೇಕಿದೆ’ ಎಂದು ಹೇಳಿದ್ದವು.

ಇದನ್ನೂ ಓದಿ: ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ – ಜನವರಿ 8 ಕ್ಕೆ ಮತ್ತೊಂದು ಸಭೆ

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ ಎಂದ ರೈತರು

ರೈತರು ಪ್ರತಿಭಟನೆ ನಡೆಸಿದ ದಿನದಿಂದಲೂ ಅವರೊಂದಿಗೆ ಕಠಿಣವಾಗಿ ವರ್ತಿಸಿದ್ದ ಒಕ್ಕೂಟ ಸರ್ಕಾರ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ತುಸು ಮಂಡಿಯೂರತೊಡಗಿದೆ. ಮೊದಲಿಗೆ ರೈತರ ಮೇಲೆ ಅಶ್ರುವಾಯು, ಜಲಫಿರಂಗಿ, ಲಾಠಿ ಚಾರ್ಜ್ ಮಾಡಿ ತನ್ನ ದರ್ಪ ಮೆರೆದಿತ್ತು. ಆದರೆ ನಂತರದಲ್ಲಿ ಈ ವಿಧಾನವನ್ನು ಕೈಚೆಲ್ಲಿ ಬೇರೆಯೆ ರೀತಿಯಲ್ಲಿ ತನ್ನ ತಂತ್ರವನ್ನು ಪ್ರಾರಂಭಿಸಿತ್ತು. ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿಗಳು ಎಂದಿದ್ದ ಒಕ್ಕೂಟ ಸರ್ಕಾರ, ನಂತರದಲ್ಲಿ ಖಾಲಿಸ್ತಾನಿಗಳು ಎಂದು ಕೆರೆದಿದ್ದಕ್ಕೆ ವಿಷಾಧ ವ್ಯಕ್ತಪಡಿಸಿತ್ತು.

ಯಾವುದೇ ಪ್ರತಿಭಟನೆಗೂ ಜಗ್ಗುವುದಿಲ್ಲ ಎಂಬಂತಿದ್ದ ಸರ್ಕಾರ ಆರನೇ ಸುತ್ತಿನ ಮಾತುಕತೆಯಲ್ಲಿ ಎರಡು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದೆ. ಜೊತೆಗೆ ಆರನೇ ಸುತ್ತಿನ ಮಾತುಕತೆಯ ಸಮಯದಲ್ಲಿ ಸಚಿವರು ರೈತರೊಂದಿಗೆ ಜೊತೆಗೂಡಿ ಊಟ ಮಾಡಿದ್ದರು. ಏಳನೇ ಸುತ್ತಿನಲ್ಲಿ ಮಾತುಕತೆಯ ಸಮಯದಲ್ಲಿ ಸಭೆಯ ಪ್ರಾರಂಭಕ್ಕೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಕೋರಲಾಗಿತ್ತು.

ಅದಾಗ್ಯೂ ಏಳನೇ ಸುತ್ತಿನ ಮಾತುಕತೆಗೂ ಮುನ್ನ ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಆಶ್ರುವಾಯು ದಾಳಿ ನಡೆಸಿದೆ. ಆರನೇ ಸುತ್ತಿನಲ್ಲಿ ರೈತರೊಂದಿಗೆ ಊಟ ಮಾಡಿದ್ದ ಸಚಿವರು ಏಳನೇ ಸುತ್ತಿನ ಮಾತುಕತೆಯ ಸಮಯದಲ್ಲಿ ರೈತರೊಂದಿಗೆ ಊಟಕ್ಕೆ ಸೇರಲಿಲ್ಲ. ಅಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ - ಜನವರಿ 8 ಕ್ಕೆ ಮತ್ತೊಂದು ಸಭೆ
PC : Zee News

ಪ್ರತಿಭಟನೆಗಳನ್ನು ಬಲಪ್ರಯೋಗಿಸಿಯೇ ಬಗ್ಗಿಸಿ ಅಭ್ಯಾಸವಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಇನ್ನೇನೋ ತಂತ್ರ ಹೂಡುತ್ತಿದೆ ಎಂಬ ಸಂಶಯ ವ್ಯಾಪಕವಾಗಿದೆ. ಆದರೆ ಬೇರೆ ಹೋರಾಟಗಳನ್ನು ದಮನಿಸಿದಂತೆ ಈ ಆಂದೋಲನವನ್ನು ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ ಪ್ರತಿಭಟನೆಯ ಭಾಗವಾಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗಟ್ಟಾಗಿದೆ. ಇವರನ್ನು ಒಡೆಯಲು ಆರಂಭದಲ್ಲಿ ಸರ್ಕಾರ ಪ್ರಯತ್ನಿಸಿತ್ತಾದರೂ ಅದು ಯಶಸ್ವಿಯಾಗಿಲ್ಲ. ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ.

ಈ ನಡುವೆ ಏಳನೇ ಮಾತುಕತೆ ವಿಫಲವಾದರೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಪಂಜಾಬ್‌ನ ರೈತರು ತಮ್ಮ ರಾಜ್ಯದ ಯುವಜನರಲ್ಲಿ ಮನವಿ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ. ದಕ್ಷಿಣ ಭಾರತದಿಂದಲೂ ಹಲವಾರು ಸಂಘಟನೆಗಳು ದೆಹಲಿಯತ್ತ ಮುಖ ಮಾಡಿವೆ. ಒಟ್ಟಿನಲ್ಲಿ, ಕೊರೆಯುತ್ತಿರುವ ದೆಹಲಿಯ ಚಳಿ, ಮಳೆಗೆ ಜಗ್ಗದೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಒಕ್ಕೂಟ ಸರ್ಕಾರ ಎಂಟನೇ ಸುತ್ತಿನ ಮಾತುಕತೆ ಜನವರಿ 8 ಕ್ಕೆ ನಿಗದಿಯಾಗಿದೆ. ರೈತರು ತಮ್ಮ ನಿಲುವಲ್ಲಿ ಗಟ್ಟಿಯಾಗಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ವಾಪಾಸು ಪಡೆಯುವುದಿಲ್ಲ ಎಂದು ಅಚಲ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಅನ್ನ ನೀಡಿ, ಗಡಿ ಕಾಯಲು ನಮ್ಮ ಮಕ್ಕಳನ್ನು ನೀಡಿ, ಈಗ ನಮ್ಮ ಜೀವವನ್ನೂ ನೀಡುತ್ತಿದ್ದೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....