Homeಚಳವಳಿರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ - ಹೋರಾಟದ ಮುಂದೇನು ದಾರಿ?

ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 41 ನೇ ದಿನಕ್ಕೆ ಕಾಲಿಟ್ಟಿದೆ. ರೈತರೊಂದಿಗೆ ನಡೆಸಿದ ಏಳನೇ ಸುತ್ತಿನ ಮಾತುಕತೆಯು ವಿಫಲವಾಗಿದೆ. ಒಕ್ಕೂಟ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಈ ಹಿನ್ನಲೆಯಲ್ಲಿ ಎಲ್ಲರ ಚಿತ್ರ ಸುಪ್ರೀಂ ಕೋರ್ಟ್‌ನತ್ತ ತಿರುಗಿದೆ.

ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಹಾಗೂ ಅದಕ್ಕೆ ಸಂಬಂಧಿಸಿ ಒಟ್ಟು ಎಂಟು ಅರ್ಜಿಗಳು ಸಲ್ಲಿಕೆಯಾಗಿದೆ. ಮಂಗಳವಾರ(ಇಂದು) ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ಸು‌ಪ್ರೀಂ ಕೋರ್ಟ್‌ ಅರ್ಜಿಗಳಲ್ಲಿ ರೈತ ಸಂಘಟನೆಗಳನ್ನು ಕೂಡಾ ಕಕ್ಷಿದಾರರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಆದರೆ ರೈತ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ’ನಮಗೆ ಕಾನೂನು ಪರಿಹಾರ ಬೇಕಿಲ್ಲ, ಸರ್ಕಾರದಿಂದ ಪರಿಹಾರ ಬೇಕಿದೆ’ ಎಂದು ಹೇಳಿದ್ದವು.

ಇದನ್ನೂ ಓದಿ: ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ – ಜನವರಿ 8 ಕ್ಕೆ ಮತ್ತೊಂದು ಸಭೆ

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ ಎಂದ ರೈತರು

ರೈತರು ಪ್ರತಿಭಟನೆ ನಡೆಸಿದ ದಿನದಿಂದಲೂ ಅವರೊಂದಿಗೆ ಕಠಿಣವಾಗಿ ವರ್ತಿಸಿದ್ದ ಒಕ್ಕೂಟ ಸರ್ಕಾರ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ತುಸು ಮಂಡಿಯೂರತೊಡಗಿದೆ. ಮೊದಲಿಗೆ ರೈತರ ಮೇಲೆ ಅಶ್ರುವಾಯು, ಜಲಫಿರಂಗಿ, ಲಾಠಿ ಚಾರ್ಜ್ ಮಾಡಿ ತನ್ನ ದರ್ಪ ಮೆರೆದಿತ್ತು. ಆದರೆ ನಂತರದಲ್ಲಿ ಈ ವಿಧಾನವನ್ನು ಕೈಚೆಲ್ಲಿ ಬೇರೆಯೆ ರೀತಿಯಲ್ಲಿ ತನ್ನ ತಂತ್ರವನ್ನು ಪ್ರಾರಂಭಿಸಿತ್ತು. ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿಗಳು ಎಂದಿದ್ದ ಒಕ್ಕೂಟ ಸರ್ಕಾರ, ನಂತರದಲ್ಲಿ ಖಾಲಿಸ್ತಾನಿಗಳು ಎಂದು ಕೆರೆದಿದ್ದಕ್ಕೆ ವಿಷಾಧ ವ್ಯಕ್ತಪಡಿಸಿತ್ತು.

ಯಾವುದೇ ಪ್ರತಿಭಟನೆಗೂ ಜಗ್ಗುವುದಿಲ್ಲ ಎಂಬಂತಿದ್ದ ಸರ್ಕಾರ ಆರನೇ ಸುತ್ತಿನ ಮಾತುಕತೆಯಲ್ಲಿ ಎರಡು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದೆ. ಜೊತೆಗೆ ಆರನೇ ಸುತ್ತಿನ ಮಾತುಕತೆಯ ಸಮಯದಲ್ಲಿ ಸಚಿವರು ರೈತರೊಂದಿಗೆ ಜೊತೆಗೂಡಿ ಊಟ ಮಾಡಿದ್ದರು. ಏಳನೇ ಸುತ್ತಿನಲ್ಲಿ ಮಾತುಕತೆಯ ಸಮಯದಲ್ಲಿ ಸಭೆಯ ಪ್ರಾರಂಭಕ್ಕೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಕೋರಲಾಗಿತ್ತು.

ಅದಾಗ್ಯೂ ಏಳನೇ ಸುತ್ತಿನ ಮಾತುಕತೆಗೂ ಮುನ್ನ ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಆಶ್ರುವಾಯು ದಾಳಿ ನಡೆಸಿದೆ. ಆರನೇ ಸುತ್ತಿನಲ್ಲಿ ರೈತರೊಂದಿಗೆ ಊಟ ಮಾಡಿದ್ದ ಸಚಿವರು ಏಳನೇ ಸುತ್ತಿನ ಮಾತುಕತೆಯ ಸಮಯದಲ್ಲಿ ರೈತರೊಂದಿಗೆ ಊಟಕ್ಕೆ ಸೇರಲಿಲ್ಲ. ಅಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ - ಜನವರಿ 8 ಕ್ಕೆ ಮತ್ತೊಂದು ಸಭೆ
PC : Zee News

ಪ್ರತಿಭಟನೆಗಳನ್ನು ಬಲಪ್ರಯೋಗಿಸಿಯೇ ಬಗ್ಗಿಸಿ ಅಭ್ಯಾಸವಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಇನ್ನೇನೋ ತಂತ್ರ ಹೂಡುತ್ತಿದೆ ಎಂಬ ಸಂಶಯ ವ್ಯಾಪಕವಾಗಿದೆ. ಆದರೆ ಬೇರೆ ಹೋರಾಟಗಳನ್ನು ದಮನಿಸಿದಂತೆ ಈ ಆಂದೋಲನವನ್ನು ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ ಪ್ರತಿಭಟನೆಯ ಭಾಗವಾಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗಟ್ಟಾಗಿದೆ. ಇವರನ್ನು ಒಡೆಯಲು ಆರಂಭದಲ್ಲಿ ಸರ್ಕಾರ ಪ್ರಯತ್ನಿಸಿತ್ತಾದರೂ ಅದು ಯಶಸ್ವಿಯಾಗಿಲ್ಲ. ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ.

ಈ ನಡುವೆ ಏಳನೇ ಮಾತುಕತೆ ವಿಫಲವಾದರೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಪಂಜಾಬ್‌ನ ರೈತರು ತಮ್ಮ ರಾಜ್ಯದ ಯುವಜನರಲ್ಲಿ ಮನವಿ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ. ದಕ್ಷಿಣ ಭಾರತದಿಂದಲೂ ಹಲವಾರು ಸಂಘಟನೆಗಳು ದೆಹಲಿಯತ್ತ ಮುಖ ಮಾಡಿವೆ. ಒಟ್ಟಿನಲ್ಲಿ, ಕೊರೆಯುತ್ತಿರುವ ದೆಹಲಿಯ ಚಳಿ, ಮಳೆಗೆ ಜಗ್ಗದೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಒಕ್ಕೂಟ ಸರ್ಕಾರ ಎಂಟನೇ ಸುತ್ತಿನ ಮಾತುಕತೆ ಜನವರಿ 8 ಕ್ಕೆ ನಿಗದಿಯಾಗಿದೆ. ರೈತರು ತಮ್ಮ ನಿಲುವಲ್ಲಿ ಗಟ್ಟಿಯಾಗಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ವಾಪಾಸು ಪಡೆಯುವುದಿಲ್ಲ ಎಂದು ಅಚಲ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಅನ್ನ ನೀಡಿ, ಗಡಿ ಕಾಯಲು ನಮ್ಮ ಮಕ್ಕಳನ್ನು ನೀಡಿ, ಈಗ ನಮ್ಮ ಜೀವವನ್ನೂ ನೀಡುತ್ತಿದ್ದೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...