Homeಚಳವಳಿರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ - ಹೋರಾಟದ ಮುಂದೇನು ದಾರಿ?

ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 41 ನೇ ದಿನಕ್ಕೆ ಕಾಲಿಟ್ಟಿದೆ. ರೈತರೊಂದಿಗೆ ನಡೆಸಿದ ಏಳನೇ ಸುತ್ತಿನ ಮಾತುಕತೆಯು ವಿಫಲವಾಗಿದೆ. ಒಕ್ಕೂಟ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಈ ಹಿನ್ನಲೆಯಲ್ಲಿ ಎಲ್ಲರ ಚಿತ್ರ ಸುಪ್ರೀಂ ಕೋರ್ಟ್‌ನತ್ತ ತಿರುಗಿದೆ.

ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಹಾಗೂ ಅದಕ್ಕೆ ಸಂಬಂಧಿಸಿ ಒಟ್ಟು ಎಂಟು ಅರ್ಜಿಗಳು ಸಲ್ಲಿಕೆಯಾಗಿದೆ. ಮಂಗಳವಾರ(ಇಂದು) ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ಸು‌ಪ್ರೀಂ ಕೋರ್ಟ್‌ ಅರ್ಜಿಗಳಲ್ಲಿ ರೈತ ಸಂಘಟನೆಗಳನ್ನು ಕೂಡಾ ಕಕ್ಷಿದಾರರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಆದರೆ ರೈತ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ’ನಮಗೆ ಕಾನೂನು ಪರಿಹಾರ ಬೇಕಿಲ್ಲ, ಸರ್ಕಾರದಿಂದ ಪರಿಹಾರ ಬೇಕಿದೆ’ ಎಂದು ಹೇಳಿದ್ದವು.

ಇದನ್ನೂ ಓದಿ: ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ – ಜನವರಿ 8 ಕ್ಕೆ ಮತ್ತೊಂದು ಸಭೆ

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ ಎಂದ ರೈತರು

ರೈತರು ಪ್ರತಿಭಟನೆ ನಡೆಸಿದ ದಿನದಿಂದಲೂ ಅವರೊಂದಿಗೆ ಕಠಿಣವಾಗಿ ವರ್ತಿಸಿದ್ದ ಒಕ್ಕೂಟ ಸರ್ಕಾರ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ತುಸು ಮಂಡಿಯೂರತೊಡಗಿದೆ. ಮೊದಲಿಗೆ ರೈತರ ಮೇಲೆ ಅಶ್ರುವಾಯು, ಜಲಫಿರಂಗಿ, ಲಾಠಿ ಚಾರ್ಜ್ ಮಾಡಿ ತನ್ನ ದರ್ಪ ಮೆರೆದಿತ್ತು. ಆದರೆ ನಂತರದಲ್ಲಿ ಈ ವಿಧಾನವನ್ನು ಕೈಚೆಲ್ಲಿ ಬೇರೆಯೆ ರೀತಿಯಲ್ಲಿ ತನ್ನ ತಂತ್ರವನ್ನು ಪ್ರಾರಂಭಿಸಿತ್ತು. ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿಗಳು ಎಂದಿದ್ದ ಒಕ್ಕೂಟ ಸರ್ಕಾರ, ನಂತರದಲ್ಲಿ ಖಾಲಿಸ್ತಾನಿಗಳು ಎಂದು ಕೆರೆದಿದ್ದಕ್ಕೆ ವಿಷಾಧ ವ್ಯಕ್ತಪಡಿಸಿತ್ತು.

ಯಾವುದೇ ಪ್ರತಿಭಟನೆಗೂ ಜಗ್ಗುವುದಿಲ್ಲ ಎಂಬಂತಿದ್ದ ಸರ್ಕಾರ ಆರನೇ ಸುತ್ತಿನ ಮಾತುಕತೆಯಲ್ಲಿ ಎರಡು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದೆ. ಜೊತೆಗೆ ಆರನೇ ಸುತ್ತಿನ ಮಾತುಕತೆಯ ಸಮಯದಲ್ಲಿ ಸಚಿವರು ರೈತರೊಂದಿಗೆ ಜೊತೆಗೂಡಿ ಊಟ ಮಾಡಿದ್ದರು. ಏಳನೇ ಸುತ್ತಿನಲ್ಲಿ ಮಾತುಕತೆಯ ಸಮಯದಲ್ಲಿ ಸಭೆಯ ಪ್ರಾರಂಭಕ್ಕೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಕೋರಲಾಗಿತ್ತು.

ಅದಾಗ್ಯೂ ಏಳನೇ ಸುತ್ತಿನ ಮಾತುಕತೆಗೂ ಮುನ್ನ ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಆಶ್ರುವಾಯು ದಾಳಿ ನಡೆಸಿದೆ. ಆರನೇ ಸುತ್ತಿನಲ್ಲಿ ರೈತರೊಂದಿಗೆ ಊಟ ಮಾಡಿದ್ದ ಸಚಿವರು ಏಳನೇ ಸುತ್ತಿನ ಮಾತುಕತೆಯ ಸಮಯದಲ್ಲಿ ರೈತರೊಂದಿಗೆ ಊಟಕ್ಕೆ ಸೇರಲಿಲ್ಲ. ಅಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ - ಜನವರಿ 8 ಕ್ಕೆ ಮತ್ತೊಂದು ಸಭೆ
PC : Zee News

ಪ್ರತಿಭಟನೆಗಳನ್ನು ಬಲಪ್ರಯೋಗಿಸಿಯೇ ಬಗ್ಗಿಸಿ ಅಭ್ಯಾಸವಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಇನ್ನೇನೋ ತಂತ್ರ ಹೂಡುತ್ತಿದೆ ಎಂಬ ಸಂಶಯ ವ್ಯಾಪಕವಾಗಿದೆ. ಆದರೆ ಬೇರೆ ಹೋರಾಟಗಳನ್ನು ದಮನಿಸಿದಂತೆ ಈ ಆಂದೋಲನವನ್ನು ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ ಪ್ರತಿಭಟನೆಯ ಭಾಗವಾಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗಟ್ಟಾಗಿದೆ. ಇವರನ್ನು ಒಡೆಯಲು ಆರಂಭದಲ್ಲಿ ಸರ್ಕಾರ ಪ್ರಯತ್ನಿಸಿತ್ತಾದರೂ ಅದು ಯಶಸ್ವಿಯಾಗಿಲ್ಲ. ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ.

ಈ ನಡುವೆ ಏಳನೇ ಮಾತುಕತೆ ವಿಫಲವಾದರೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಪಂಜಾಬ್‌ನ ರೈತರು ತಮ್ಮ ರಾಜ್ಯದ ಯುವಜನರಲ್ಲಿ ಮನವಿ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ. ದಕ್ಷಿಣ ಭಾರತದಿಂದಲೂ ಹಲವಾರು ಸಂಘಟನೆಗಳು ದೆಹಲಿಯತ್ತ ಮುಖ ಮಾಡಿವೆ. ಒಟ್ಟಿನಲ್ಲಿ, ಕೊರೆಯುತ್ತಿರುವ ದೆಹಲಿಯ ಚಳಿ, ಮಳೆಗೆ ಜಗ್ಗದೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಒಕ್ಕೂಟ ಸರ್ಕಾರ ಎಂಟನೇ ಸುತ್ತಿನ ಮಾತುಕತೆ ಜನವರಿ 8 ಕ್ಕೆ ನಿಗದಿಯಾಗಿದೆ. ರೈತರು ತಮ್ಮ ನಿಲುವಲ್ಲಿ ಗಟ್ಟಿಯಾಗಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ವಾಪಾಸು ಪಡೆಯುವುದಿಲ್ಲ ಎಂದು ಅಚಲ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಅನ್ನ ನೀಡಿ, ಗಡಿ ಕಾಯಲು ನಮ್ಮ ಮಕ್ಕಳನ್ನು ನೀಡಿ, ಈಗ ನಮ್ಮ ಜೀವವನ್ನೂ ನೀಡುತ್ತಿದ್ದೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...