Homeಚಳವಳಿರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ - ಹೋರಾಟದ ಮುಂದೇನು ದಾರಿ?

ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 41 ನೇ ದಿನಕ್ಕೆ ಕಾಲಿಟ್ಟಿದೆ. ರೈತರೊಂದಿಗೆ ನಡೆಸಿದ ಏಳನೇ ಸುತ್ತಿನ ಮಾತುಕತೆಯು ವಿಫಲವಾಗಿದೆ. ಒಕ್ಕೂಟ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಈ ಹಿನ್ನಲೆಯಲ್ಲಿ ಎಲ್ಲರ ಚಿತ್ರ ಸುಪ್ರೀಂ ಕೋರ್ಟ್‌ನತ್ತ ತಿರುಗಿದೆ.

ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಹಾಗೂ ಅದಕ್ಕೆ ಸಂಬಂಧಿಸಿ ಒಟ್ಟು ಎಂಟು ಅರ್ಜಿಗಳು ಸಲ್ಲಿಕೆಯಾಗಿದೆ. ಮಂಗಳವಾರ(ಇಂದು) ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ಸು‌ಪ್ರೀಂ ಕೋರ್ಟ್‌ ಅರ್ಜಿಗಳಲ್ಲಿ ರೈತ ಸಂಘಟನೆಗಳನ್ನು ಕೂಡಾ ಕಕ್ಷಿದಾರರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಆದರೆ ರೈತ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ’ನಮಗೆ ಕಾನೂನು ಪರಿಹಾರ ಬೇಕಿಲ್ಲ, ಸರ್ಕಾರದಿಂದ ಪರಿಹಾರ ಬೇಕಿದೆ’ ಎಂದು ಹೇಳಿದ್ದವು.

ಇದನ್ನೂ ಓದಿ: ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ – ಜನವರಿ 8 ಕ್ಕೆ ಮತ್ತೊಂದು ಸಭೆ

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ ಎಂದ ರೈತರು

ರೈತರು ಪ್ರತಿಭಟನೆ ನಡೆಸಿದ ದಿನದಿಂದಲೂ ಅವರೊಂದಿಗೆ ಕಠಿಣವಾಗಿ ವರ್ತಿಸಿದ್ದ ಒಕ್ಕೂಟ ಸರ್ಕಾರ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ತುಸು ಮಂಡಿಯೂರತೊಡಗಿದೆ. ಮೊದಲಿಗೆ ರೈತರ ಮೇಲೆ ಅಶ್ರುವಾಯು, ಜಲಫಿರಂಗಿ, ಲಾಠಿ ಚಾರ್ಜ್ ಮಾಡಿ ತನ್ನ ದರ್ಪ ಮೆರೆದಿತ್ತು. ಆದರೆ ನಂತರದಲ್ಲಿ ಈ ವಿಧಾನವನ್ನು ಕೈಚೆಲ್ಲಿ ಬೇರೆಯೆ ರೀತಿಯಲ್ಲಿ ತನ್ನ ತಂತ್ರವನ್ನು ಪ್ರಾರಂಭಿಸಿತ್ತು. ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿಗಳು ಎಂದಿದ್ದ ಒಕ್ಕೂಟ ಸರ್ಕಾರ, ನಂತರದಲ್ಲಿ ಖಾಲಿಸ್ತಾನಿಗಳು ಎಂದು ಕೆರೆದಿದ್ದಕ್ಕೆ ವಿಷಾಧ ವ್ಯಕ್ತಪಡಿಸಿತ್ತು.

ಯಾವುದೇ ಪ್ರತಿಭಟನೆಗೂ ಜಗ್ಗುವುದಿಲ್ಲ ಎಂಬಂತಿದ್ದ ಸರ್ಕಾರ ಆರನೇ ಸುತ್ತಿನ ಮಾತುಕತೆಯಲ್ಲಿ ಎರಡು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದೆ. ಜೊತೆಗೆ ಆರನೇ ಸುತ್ತಿನ ಮಾತುಕತೆಯ ಸಮಯದಲ್ಲಿ ಸಚಿವರು ರೈತರೊಂದಿಗೆ ಜೊತೆಗೂಡಿ ಊಟ ಮಾಡಿದ್ದರು. ಏಳನೇ ಸುತ್ತಿನಲ್ಲಿ ಮಾತುಕತೆಯ ಸಮಯದಲ್ಲಿ ಸಭೆಯ ಪ್ರಾರಂಭಕ್ಕೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಕೋರಲಾಗಿತ್ತು.

ಅದಾಗ್ಯೂ ಏಳನೇ ಸುತ್ತಿನ ಮಾತುಕತೆಗೂ ಮುನ್ನ ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಆಶ್ರುವಾಯು ದಾಳಿ ನಡೆಸಿದೆ. ಆರನೇ ಸುತ್ತಿನಲ್ಲಿ ರೈತರೊಂದಿಗೆ ಊಟ ಮಾಡಿದ್ದ ಸಚಿವರು ಏಳನೇ ಸುತ್ತಿನ ಮಾತುಕತೆಯ ಸಮಯದಲ್ಲಿ ರೈತರೊಂದಿಗೆ ಊಟಕ್ಕೆ ಸೇರಲಿಲ್ಲ. ಅಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ - ಜನವರಿ 8 ಕ್ಕೆ ಮತ್ತೊಂದು ಸಭೆ
PC : Zee News

ಪ್ರತಿಭಟನೆಗಳನ್ನು ಬಲಪ್ರಯೋಗಿಸಿಯೇ ಬಗ್ಗಿಸಿ ಅಭ್ಯಾಸವಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಇನ್ನೇನೋ ತಂತ್ರ ಹೂಡುತ್ತಿದೆ ಎಂಬ ಸಂಶಯ ವ್ಯಾಪಕವಾಗಿದೆ. ಆದರೆ ಬೇರೆ ಹೋರಾಟಗಳನ್ನು ದಮನಿಸಿದಂತೆ ಈ ಆಂದೋಲನವನ್ನು ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ ಪ್ರತಿಭಟನೆಯ ಭಾಗವಾಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗಟ್ಟಾಗಿದೆ. ಇವರನ್ನು ಒಡೆಯಲು ಆರಂಭದಲ್ಲಿ ಸರ್ಕಾರ ಪ್ರಯತ್ನಿಸಿತ್ತಾದರೂ ಅದು ಯಶಸ್ವಿಯಾಗಿಲ್ಲ. ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ.

ಈ ನಡುವೆ ಏಳನೇ ಮಾತುಕತೆ ವಿಫಲವಾದರೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಪಂಜಾಬ್‌ನ ರೈತರು ತಮ್ಮ ರಾಜ್ಯದ ಯುವಜನರಲ್ಲಿ ಮನವಿ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ. ದಕ್ಷಿಣ ಭಾರತದಿಂದಲೂ ಹಲವಾರು ಸಂಘಟನೆಗಳು ದೆಹಲಿಯತ್ತ ಮುಖ ಮಾಡಿವೆ. ಒಟ್ಟಿನಲ್ಲಿ, ಕೊರೆಯುತ್ತಿರುವ ದೆಹಲಿಯ ಚಳಿ, ಮಳೆಗೆ ಜಗ್ಗದೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಒಕ್ಕೂಟ ಸರ್ಕಾರ ಎಂಟನೇ ಸುತ್ತಿನ ಮಾತುಕತೆ ಜನವರಿ 8 ಕ್ಕೆ ನಿಗದಿಯಾಗಿದೆ. ರೈತರು ತಮ್ಮ ನಿಲುವಲ್ಲಿ ಗಟ್ಟಿಯಾಗಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ವಾಪಾಸು ಪಡೆಯುವುದಿಲ್ಲ ಎಂದು ಅಚಲ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಅನ್ನ ನೀಡಿ, ಗಡಿ ಕಾಯಲು ನಮ್ಮ ಮಕ್ಕಳನ್ನು ನೀಡಿ, ಈಗ ನಮ್ಮ ಜೀವವನ್ನೂ ನೀಡುತ್ತಿದ್ದೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...