Homeಚಳವಳಿರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ - ಹೋರಾಟದ ಮುಂದೇನು ದಾರಿ?

ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 41 ನೇ ದಿನಕ್ಕೆ ಕಾಲಿಟ್ಟಿದೆ. ರೈತರೊಂದಿಗೆ ನಡೆಸಿದ ಏಳನೇ ಸುತ್ತಿನ ಮಾತುಕತೆಯು ವಿಫಲವಾಗಿದೆ. ಒಕ್ಕೂಟ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಈ ಹಿನ್ನಲೆಯಲ್ಲಿ ಎಲ್ಲರ ಚಿತ್ರ ಸುಪ್ರೀಂ ಕೋರ್ಟ್‌ನತ್ತ ತಿರುಗಿದೆ.

ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಹಾಗೂ ಅದಕ್ಕೆ ಸಂಬಂಧಿಸಿ ಒಟ್ಟು ಎಂಟು ಅರ್ಜಿಗಳು ಸಲ್ಲಿಕೆಯಾಗಿದೆ. ಮಂಗಳವಾರ(ಇಂದು) ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ಸು‌ಪ್ರೀಂ ಕೋರ್ಟ್‌ ಅರ್ಜಿಗಳಲ್ಲಿ ರೈತ ಸಂಘಟನೆಗಳನ್ನು ಕೂಡಾ ಕಕ್ಷಿದಾರರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಆದರೆ ರೈತ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ’ನಮಗೆ ಕಾನೂನು ಪರಿಹಾರ ಬೇಕಿಲ್ಲ, ಸರ್ಕಾರದಿಂದ ಪರಿಹಾರ ಬೇಕಿದೆ’ ಎಂದು ಹೇಳಿದ್ದವು.

ಇದನ್ನೂ ಓದಿ: ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ – ಜನವರಿ 8 ಕ್ಕೆ ಮತ್ತೊಂದು ಸಭೆ

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ ಎಂದ ರೈತರು

ರೈತರು ಪ್ರತಿಭಟನೆ ನಡೆಸಿದ ದಿನದಿಂದಲೂ ಅವರೊಂದಿಗೆ ಕಠಿಣವಾಗಿ ವರ್ತಿಸಿದ್ದ ಒಕ್ಕೂಟ ಸರ್ಕಾರ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ತುಸು ಮಂಡಿಯೂರತೊಡಗಿದೆ. ಮೊದಲಿಗೆ ರೈತರ ಮೇಲೆ ಅಶ್ರುವಾಯು, ಜಲಫಿರಂಗಿ, ಲಾಠಿ ಚಾರ್ಜ್ ಮಾಡಿ ತನ್ನ ದರ್ಪ ಮೆರೆದಿತ್ತು. ಆದರೆ ನಂತರದಲ್ಲಿ ಈ ವಿಧಾನವನ್ನು ಕೈಚೆಲ್ಲಿ ಬೇರೆಯೆ ರೀತಿಯಲ್ಲಿ ತನ್ನ ತಂತ್ರವನ್ನು ಪ್ರಾರಂಭಿಸಿತ್ತು. ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿಗಳು ಎಂದಿದ್ದ ಒಕ್ಕೂಟ ಸರ್ಕಾರ, ನಂತರದಲ್ಲಿ ಖಾಲಿಸ್ತಾನಿಗಳು ಎಂದು ಕೆರೆದಿದ್ದಕ್ಕೆ ವಿಷಾಧ ವ್ಯಕ್ತಪಡಿಸಿತ್ತು.

ಯಾವುದೇ ಪ್ರತಿಭಟನೆಗೂ ಜಗ್ಗುವುದಿಲ್ಲ ಎಂಬಂತಿದ್ದ ಸರ್ಕಾರ ಆರನೇ ಸುತ್ತಿನ ಮಾತುಕತೆಯಲ್ಲಿ ಎರಡು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದೆ. ಜೊತೆಗೆ ಆರನೇ ಸುತ್ತಿನ ಮಾತುಕತೆಯ ಸಮಯದಲ್ಲಿ ಸಚಿವರು ರೈತರೊಂದಿಗೆ ಜೊತೆಗೂಡಿ ಊಟ ಮಾಡಿದ್ದರು. ಏಳನೇ ಸುತ್ತಿನಲ್ಲಿ ಮಾತುಕತೆಯ ಸಮಯದಲ್ಲಿ ಸಭೆಯ ಪ್ರಾರಂಭಕ್ಕೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಕೋರಲಾಗಿತ್ತು.

ಅದಾಗ್ಯೂ ಏಳನೇ ಸುತ್ತಿನ ಮಾತುಕತೆಗೂ ಮುನ್ನ ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಆಶ್ರುವಾಯು ದಾಳಿ ನಡೆಸಿದೆ. ಆರನೇ ಸುತ್ತಿನಲ್ಲಿ ರೈತರೊಂದಿಗೆ ಊಟ ಮಾಡಿದ್ದ ಸಚಿವರು ಏಳನೇ ಸುತ್ತಿನ ಮಾತುಕತೆಯ ಸಮಯದಲ್ಲಿ ರೈತರೊಂದಿಗೆ ಊಟಕ್ಕೆ ಸೇರಲಿಲ್ಲ. ಅಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ - ಜನವರಿ 8 ಕ್ಕೆ ಮತ್ತೊಂದು ಸಭೆ
PC : Zee News

ಪ್ರತಿಭಟನೆಗಳನ್ನು ಬಲಪ್ರಯೋಗಿಸಿಯೇ ಬಗ್ಗಿಸಿ ಅಭ್ಯಾಸವಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಇನ್ನೇನೋ ತಂತ್ರ ಹೂಡುತ್ತಿದೆ ಎಂಬ ಸಂಶಯ ವ್ಯಾಪಕವಾಗಿದೆ. ಆದರೆ ಬೇರೆ ಹೋರಾಟಗಳನ್ನು ದಮನಿಸಿದಂತೆ ಈ ಆಂದೋಲನವನ್ನು ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ ಪ್ರತಿಭಟನೆಯ ಭಾಗವಾಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗಟ್ಟಾಗಿದೆ. ಇವರನ್ನು ಒಡೆಯಲು ಆರಂಭದಲ್ಲಿ ಸರ್ಕಾರ ಪ್ರಯತ್ನಿಸಿತ್ತಾದರೂ ಅದು ಯಶಸ್ವಿಯಾಗಿಲ್ಲ. ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ.

ಈ ನಡುವೆ ಏಳನೇ ಮಾತುಕತೆ ವಿಫಲವಾದರೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಪಂಜಾಬ್‌ನ ರೈತರು ತಮ್ಮ ರಾಜ್ಯದ ಯುವಜನರಲ್ಲಿ ಮನವಿ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ. ದಕ್ಷಿಣ ಭಾರತದಿಂದಲೂ ಹಲವಾರು ಸಂಘಟನೆಗಳು ದೆಹಲಿಯತ್ತ ಮುಖ ಮಾಡಿವೆ. ಒಟ್ಟಿನಲ್ಲಿ, ಕೊರೆಯುತ್ತಿರುವ ದೆಹಲಿಯ ಚಳಿ, ಮಳೆಗೆ ಜಗ್ಗದೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಒಕ್ಕೂಟ ಸರ್ಕಾರ ಎಂಟನೇ ಸುತ್ತಿನ ಮಾತುಕತೆ ಜನವರಿ 8 ಕ್ಕೆ ನಿಗದಿಯಾಗಿದೆ. ರೈತರು ತಮ್ಮ ನಿಲುವಲ್ಲಿ ಗಟ್ಟಿಯಾಗಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ವಾಪಾಸು ಪಡೆಯುವುದಿಲ್ಲ ಎಂದು ಅಚಲ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಅನ್ನ ನೀಡಿ, ಗಡಿ ಕಾಯಲು ನಮ್ಮ ಮಕ್ಕಳನ್ನು ನೀಡಿ, ಈಗ ನಮ್ಮ ಜೀವವನ್ನೂ ನೀಡುತ್ತಿದ್ದೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...