Homeಚಳವಳಿಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧದ ಹೋರಾಟ ನಮ್ಮ ಹಕ್ಕು ಮತ್ತು ಭೂಮಿ ಉಳಿಸಿಕೊಳ್ಳುವುದಕ್ಕಾಗಿದೆ ಹಾಗಾಗಿ ಇನ್ನು 8 ತಿಂಗಳು ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ರೈತರು ಈಗ ಗೋಧಿ ಬೆಳೆಯನ್ನು ಕೊಯ್ಲು ಮಾಡುವಲ್ಲಿ ನಿರತರಾಗಿದ್ದಾರೆ. ಬೆಳೆ ಕೊಯ್ಲು ಮೇ 10ರ ವರೆಗೆ ನಡೆಯಬಹುದು ಎಂದು ಅಂದಾಜು ಮಾಡಲಾಗಿದೆ. ಹಾಗಾಗಿ ಮೇ 10 ರ ನಂತರ ಈ ಆಂದೋಲನವು ಇನ್ನು ತೀವ್ರಗೊಳ್ಳಲಿದೆ ಎಂದು ಟಿಕಾಯತ್ ತಿಳಿಸಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ರೈತರು ನಡೆಸುತ್ತಿರುವ ಹೋರಾಟ ನಾಲ್ಕು ತಿಂಗಳನ್ನೂ ದಾಟಿದೆ. ದೆಹಲಿಯ ಸುತ್ತ ಎಲ್ಲಾ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮಹಾಪಂಚಾಯತ್ ಮೂಲಕ ದೇಶದ ಇತರ ರಾಜ್ಯಗಳನ್ನು ತಲುಪುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ವಿವಾದಿತ ಮೂರು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ವರು ಸದಸ್ಯರ ಸ್ಥಾಯಿ ಸಮಿತಿಯು ಕಾನೂನುಗಳ ಬಗ್ಗೆ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೆ ಸಮಿತಿಯ ವರದಿಯನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ರೈತ ಮುಖಂಡರು ಈಗಾಗಲೇ ತಿಳಿಸಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಪ್ರತ್ಯೇಕ ಶಾಸನವನ್ನು ಜಾರಿಗೆ ತರುವವರೆಗೆ ಅವರು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದಿದ್ದರು.

ಬುಧವಾರ (ಮಾರ್ಚ್ 31) ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅಲ್ಲೂ ಕೂಡ ಮುಂದಿನ 8 ತಿಂಗಳು ಈ ಹೋರಾಟ ನಡೆಯಲಿದೆ ಸಿದ್ಧರಾಗಿರಿ ಎಂದು ಕರೆ ನೀಡಿದ್ದರು.

“ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ” ಎಂದಿದ್ದರು.


ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...