Homeಚಳವಳಿಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧದ ಹೋರಾಟ ನಮ್ಮ ಹಕ್ಕು ಮತ್ತು ಭೂಮಿ ಉಳಿಸಿಕೊಳ್ಳುವುದಕ್ಕಾಗಿದೆ ಹಾಗಾಗಿ ಇನ್ನು 8 ತಿಂಗಳು ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ರೈತರು ಈಗ ಗೋಧಿ ಬೆಳೆಯನ್ನು ಕೊಯ್ಲು ಮಾಡುವಲ್ಲಿ ನಿರತರಾಗಿದ್ದಾರೆ. ಬೆಳೆ ಕೊಯ್ಲು ಮೇ 10ರ ವರೆಗೆ ನಡೆಯಬಹುದು ಎಂದು ಅಂದಾಜು ಮಾಡಲಾಗಿದೆ. ಹಾಗಾಗಿ ಮೇ 10 ರ ನಂತರ ಈ ಆಂದೋಲನವು ಇನ್ನು ತೀವ್ರಗೊಳ್ಳಲಿದೆ ಎಂದು ಟಿಕಾಯತ್ ತಿಳಿಸಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ರೈತರು ನಡೆಸುತ್ತಿರುವ ಹೋರಾಟ ನಾಲ್ಕು ತಿಂಗಳನ್ನೂ ದಾಟಿದೆ. ದೆಹಲಿಯ ಸುತ್ತ ಎಲ್ಲಾ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮಹಾಪಂಚಾಯತ್ ಮೂಲಕ ದೇಶದ ಇತರ ರಾಜ್ಯಗಳನ್ನು ತಲುಪುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ವಿವಾದಿತ ಮೂರು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ವರು ಸದಸ್ಯರ ಸ್ಥಾಯಿ ಸಮಿತಿಯು ಕಾನೂನುಗಳ ಬಗ್ಗೆ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೆ ಸಮಿತಿಯ ವರದಿಯನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ರೈತ ಮುಖಂಡರು ಈಗಾಗಲೇ ತಿಳಿಸಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಪ್ರತ್ಯೇಕ ಶಾಸನವನ್ನು ಜಾರಿಗೆ ತರುವವರೆಗೆ ಅವರು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದಿದ್ದರು.

ಬುಧವಾರ (ಮಾರ್ಚ್ 31) ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅಲ್ಲೂ ಕೂಡ ಮುಂದಿನ 8 ತಿಂಗಳು ಈ ಹೋರಾಟ ನಡೆಯಲಿದೆ ಸಿದ್ಧರಾಗಿರಿ ಎಂದು ಕರೆ ನೀಡಿದ್ದರು.

“ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ” ಎಂದಿದ್ದರು.


ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...