Homeಚಳವಳಿಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧದ ಹೋರಾಟ ನಮ್ಮ ಹಕ್ಕು ಮತ್ತು ಭೂಮಿ ಉಳಿಸಿಕೊಳ್ಳುವುದಕ್ಕಾಗಿದೆ ಹಾಗಾಗಿ ಇನ್ನು 8 ತಿಂಗಳು ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ರೈತರು ಈಗ ಗೋಧಿ ಬೆಳೆಯನ್ನು ಕೊಯ್ಲು ಮಾಡುವಲ್ಲಿ ನಿರತರಾಗಿದ್ದಾರೆ. ಬೆಳೆ ಕೊಯ್ಲು ಮೇ 10ರ ವರೆಗೆ ನಡೆಯಬಹುದು ಎಂದು ಅಂದಾಜು ಮಾಡಲಾಗಿದೆ. ಹಾಗಾಗಿ ಮೇ 10 ರ ನಂತರ ಈ ಆಂದೋಲನವು ಇನ್ನು ತೀವ್ರಗೊಳ್ಳಲಿದೆ ಎಂದು ಟಿಕಾಯತ್ ತಿಳಿಸಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ರೈತರು ನಡೆಸುತ್ತಿರುವ ಹೋರಾಟ ನಾಲ್ಕು ತಿಂಗಳನ್ನೂ ದಾಟಿದೆ. ದೆಹಲಿಯ ಸುತ್ತ ಎಲ್ಲಾ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮಹಾಪಂಚಾಯತ್ ಮೂಲಕ ದೇಶದ ಇತರ ರಾಜ್ಯಗಳನ್ನು ತಲುಪುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ವಿವಾದಿತ ಮೂರು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ವರು ಸದಸ್ಯರ ಸ್ಥಾಯಿ ಸಮಿತಿಯು ಕಾನೂನುಗಳ ಬಗ್ಗೆ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೆ ಸಮಿತಿಯ ವರದಿಯನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ರೈತ ಮುಖಂಡರು ಈಗಾಗಲೇ ತಿಳಿಸಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಪ್ರತ್ಯೇಕ ಶಾಸನವನ್ನು ಜಾರಿಗೆ ತರುವವರೆಗೆ ಅವರು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದಿದ್ದರು.

ಬುಧವಾರ (ಮಾರ್ಚ್ 31) ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅಲ್ಲೂ ಕೂಡ ಮುಂದಿನ 8 ತಿಂಗಳು ಈ ಹೋರಾಟ ನಡೆಯಲಿದೆ ಸಿದ್ಧರಾಗಿರಿ ಎಂದು ಕರೆ ನೀಡಿದ್ದರು.

“ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ” ಎಂದಿದ್ದರು.


ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...