Homeಮುಖಪುಟಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಹರಿಯಾಣದ ವಿವಿಧ ಕಡೆ ರೈತ ಮಹಿಳೆಯರಿಗೆ ಈಗ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ತಮ್ಮ ಬೇಡಿಕೆ ಈಡೇರದಿದ್ದರೆ ಜನವರಿ 26ರ ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿದ ಬೆನ್ನಲ್ಲೇ ಹರಿಯಾಣದ ರೈತ ಮಹಿಳೆಯರು ಈಗ ನೂರಾರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿದ್ದಾರೆ.

ಹರಿಯಾಣದ ಹಲವು ಕಡೆ ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದ್ದು, ಸೋಮವಾರ ಜಿಂದ್ ಜಿಲ್ಲೆಯ ಖತ್ಕರ್ ಎಂಬಲ್ಲಿ ಇಂತಹ ಒಂದು ಕಾರ್ಯಾಗಾರ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡನೆ ತಿಂಗಳಿಗೆ ಹೆಜ್ಜೆ ಇಟ್ಟಿರುವ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಜನವರಿ 26ರಂದು ರಾಜಧಾನಿಯಲ್ಲಿ ನಡೆಯುವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಮಹಿಳೆಯರು ಟ್ರ್ಯಾಕ್ಟರ್ ನಡೆಸುವ ಮೂಲಕ ಹರಿಯಾಣದ ಪುರುಷ ಪ್ರಧಾನ ಸಮಾಜದಲ್ಲಿ ಹೊಸ ಬದಲಾವಣೆಯನ್ನು ಸೂಚಿಸಲಿದ್ದಾರೆ.

‘ತಖ್ತರ್‌ನ ಟೋಲ್ ಪ್ಲಾಜಾ ಬಳಿಯ ಹೆದ್ದಾರಿಯಲ್ಲಿ ನಮ್ಮ ಜಿಲ್ಲೆಯ ನೂರಕ್ಕೂ ಹೆಚ್ಚು ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದೇವೆ. ರೈತ ಪ್ರತಿಭಟನೆಯ ರ‍್ಯಾಲಿಯಲ್ಲಿ ನಾವು ಟ್ರ್ಯಾಕ್ಟರ್ ಚಲಾಯಿಸಿ ನಮ್ಮ ಪ್ರತಿರೋಧ ದಾಖಲಿಸಲಿದ್ದೇವೆ’ ಎನ್ನುತ್ತಾರೆ ಸಫಾ ಖೇರಿ ಗ್ರಾಮದ ಸಿಕ್ಕಿಂ ನೈನ್ ಎಂಬ ಮಹಿಳೆ.

‘ಪ್ರತಿಭಟನೆಯಲ್ಲಿ ಈಗ ಮಹಿಳಾ ಶಕ್ತಿಯೂ ಸೇರಿಕೊಂಡಿದೆ. ನಾವು ಹಿಂದಕ್ಕೆ ಹೆಜ್ಜೆ ಇಡುವುದಿಲ್ಲ. ನಮ್ಮನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ಈಗ ನಾವು ಪ್ರತಿಭಟನೆ ಮಾಡದೇ ಹೋದರೆ ನಮ್ಮ ಮುಂದಿನ ತಲೆಮಾರಿಗೆ ಏನಂತ ಉತ್ತರಿಸಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಖತ್ಕರ್ ಗ್ರಾಮದ ಸರಜಾ ರಾಜಪಾಲಾ ಎನ್ನುವ 35 ವರ್ಷದ ಮಹಿಳೆ, “ನಾನು ರೈತರ ಮಗಳು. ಇಲ್ಲಿವರೆಗೆ ಸರ್ಕಾರಗಳು ರೈತರ ಮೇಲೆ ಸಾಕಷ್ಟು ದೌರ್ಜನ್ಯ ನಡೆಸಿವೆ. ಇನ್ನು ಮುಂದೆ ನಾವು ಇದನ್ನು ಸಹಿಸೆವು. ಎದೆ ಸೆಟೆಸಿ ಹೋರಾಡುವೆವು” ಎಂದಿದ್ದಾರೆ.

‘ಖತ್ಕರ್, ಸಫಾ ಖೇರಿ, ಬರ್ಸೊಲಾ, ಪೌಕ್ರಿ ಖೇರಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯಲು ಬರುತ್ತಿದ್ದಾರೆ’ ಎಂದು ರೈತ ವಿಜೇಂದರ್ ಸಂಧು ಹೇಳಿದ್ದಾರೆ.

ಮಹಿಳೆಯರು ಈ ಕ್ರಮಕ್ಕೆ ಮುಂದಾಗಿರುವುದು ಹೋರಾಟದಲ್ಲಿ ಒಂದು ದೊಡ್ಡ ನೆಗೆತವಾಗಿದೆ, ಇದು ಅನಿವಾರ್ಯವೂ ಆಗಿದೆ ಎಂದು ಹಿರಿಯ ರೈತ ಸತ್ಬೀರ್ ಪೆಹ್ಲವಾಲಾ ತಿಳಿಸಿದ್ದಾರೆ. ‘ನಮ್ಮ ಮಕ್ಕಳು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪ್ರತಿಭಟಿಸುತ್ತಿದ್ದಾರೆ, ನಮ್ಮ ಜನರು ದೇಶದ ರಾಜಧಾನಿಗೆ ಘೇರಾವ್ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಪ್ ಮುಖ್ಯಸ್ಥ ಅಜಾದ್ ಸಿಂಗ್ ಕೂಡ ಮಹಿಳೆಯರ ಹೋರಾಟ ಬೆಂಬಲಿಸಿದ್ದು, ಗಣರಾಜ್ಯೋತ್ಸವದಂದು ನಡೆಯುವ ಸೈನಿಕರ ಪರೇಡ್‌ನಂತೆಯೇ ನಮ್ಮ ಪರೇಡ್ ಕೂಡ ನಡೆಯಲಿದೆ ಎಂದಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...