Homeಮುಖಪುಟಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಹರಿಯಾಣದ ವಿವಿಧ ಕಡೆ ರೈತ ಮಹಿಳೆಯರಿಗೆ ಈಗ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ತಮ್ಮ ಬೇಡಿಕೆ ಈಡೇರದಿದ್ದರೆ ಜನವರಿ 26ರ ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿದ ಬೆನ್ನಲ್ಲೇ ಹರಿಯಾಣದ ರೈತ ಮಹಿಳೆಯರು ಈಗ ನೂರಾರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿದ್ದಾರೆ.

ಹರಿಯಾಣದ ಹಲವು ಕಡೆ ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದ್ದು, ಸೋಮವಾರ ಜಿಂದ್ ಜಿಲ್ಲೆಯ ಖತ್ಕರ್ ಎಂಬಲ್ಲಿ ಇಂತಹ ಒಂದು ಕಾರ್ಯಾಗಾರ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡನೆ ತಿಂಗಳಿಗೆ ಹೆಜ್ಜೆ ಇಟ್ಟಿರುವ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಜನವರಿ 26ರಂದು ರಾಜಧಾನಿಯಲ್ಲಿ ನಡೆಯುವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಮಹಿಳೆಯರು ಟ್ರ್ಯಾಕ್ಟರ್ ನಡೆಸುವ ಮೂಲಕ ಹರಿಯಾಣದ ಪುರುಷ ಪ್ರಧಾನ ಸಮಾಜದಲ್ಲಿ ಹೊಸ ಬದಲಾವಣೆಯನ್ನು ಸೂಚಿಸಲಿದ್ದಾರೆ.

‘ತಖ್ತರ್‌ನ ಟೋಲ್ ಪ್ಲಾಜಾ ಬಳಿಯ ಹೆದ್ದಾರಿಯಲ್ಲಿ ನಮ್ಮ ಜಿಲ್ಲೆಯ ನೂರಕ್ಕೂ ಹೆಚ್ಚು ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದೇವೆ. ರೈತ ಪ್ರತಿಭಟನೆಯ ರ‍್ಯಾಲಿಯಲ್ಲಿ ನಾವು ಟ್ರ್ಯಾಕ್ಟರ್ ಚಲಾಯಿಸಿ ನಮ್ಮ ಪ್ರತಿರೋಧ ದಾಖಲಿಸಲಿದ್ದೇವೆ’ ಎನ್ನುತ್ತಾರೆ ಸಫಾ ಖೇರಿ ಗ್ರಾಮದ ಸಿಕ್ಕಿಂ ನೈನ್ ಎಂಬ ಮಹಿಳೆ.

‘ಪ್ರತಿಭಟನೆಯಲ್ಲಿ ಈಗ ಮಹಿಳಾ ಶಕ್ತಿಯೂ ಸೇರಿಕೊಂಡಿದೆ. ನಾವು ಹಿಂದಕ್ಕೆ ಹೆಜ್ಜೆ ಇಡುವುದಿಲ್ಲ. ನಮ್ಮನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ಈಗ ನಾವು ಪ್ರತಿಭಟನೆ ಮಾಡದೇ ಹೋದರೆ ನಮ್ಮ ಮುಂದಿನ ತಲೆಮಾರಿಗೆ ಏನಂತ ಉತ್ತರಿಸಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಖತ್ಕರ್ ಗ್ರಾಮದ ಸರಜಾ ರಾಜಪಾಲಾ ಎನ್ನುವ 35 ವರ್ಷದ ಮಹಿಳೆ, “ನಾನು ರೈತರ ಮಗಳು. ಇಲ್ಲಿವರೆಗೆ ಸರ್ಕಾರಗಳು ರೈತರ ಮೇಲೆ ಸಾಕಷ್ಟು ದೌರ್ಜನ್ಯ ನಡೆಸಿವೆ. ಇನ್ನು ಮುಂದೆ ನಾವು ಇದನ್ನು ಸಹಿಸೆವು. ಎದೆ ಸೆಟೆಸಿ ಹೋರಾಡುವೆವು” ಎಂದಿದ್ದಾರೆ.

‘ಖತ್ಕರ್, ಸಫಾ ಖೇರಿ, ಬರ್ಸೊಲಾ, ಪೌಕ್ರಿ ಖೇರಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯಲು ಬರುತ್ತಿದ್ದಾರೆ’ ಎಂದು ರೈತ ವಿಜೇಂದರ್ ಸಂಧು ಹೇಳಿದ್ದಾರೆ.

ಮಹಿಳೆಯರು ಈ ಕ್ರಮಕ್ಕೆ ಮುಂದಾಗಿರುವುದು ಹೋರಾಟದಲ್ಲಿ ಒಂದು ದೊಡ್ಡ ನೆಗೆತವಾಗಿದೆ, ಇದು ಅನಿವಾರ್ಯವೂ ಆಗಿದೆ ಎಂದು ಹಿರಿಯ ರೈತ ಸತ್ಬೀರ್ ಪೆಹ್ಲವಾಲಾ ತಿಳಿಸಿದ್ದಾರೆ. ‘ನಮ್ಮ ಮಕ್ಕಳು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪ್ರತಿಭಟಿಸುತ್ತಿದ್ದಾರೆ, ನಮ್ಮ ಜನರು ದೇಶದ ರಾಜಧಾನಿಗೆ ಘೇರಾವ್ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಪ್ ಮುಖ್ಯಸ್ಥ ಅಜಾದ್ ಸಿಂಗ್ ಕೂಡ ಮಹಿಳೆಯರ ಹೋರಾಟ ಬೆಂಬಲಿಸಿದ್ದು, ಗಣರಾಜ್ಯೋತ್ಸವದಂದು ನಡೆಯುವ ಸೈನಿಕರ ಪರೇಡ್‌ನಂತೆಯೇ ನಮ್ಮ ಪರೇಡ್ ಕೂಡ ನಡೆಯಲಿದೆ ಎಂದಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...