Homeಮುಖಪುಟಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಹರಿಯಾಣದ ವಿವಿಧ ಕಡೆ ರೈತ ಮಹಿಳೆಯರಿಗೆ ಈಗ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ತಮ್ಮ ಬೇಡಿಕೆ ಈಡೇರದಿದ್ದರೆ ಜನವರಿ 26ರ ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿದ ಬೆನ್ನಲ್ಲೇ ಹರಿಯಾಣದ ರೈತ ಮಹಿಳೆಯರು ಈಗ ನೂರಾರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿದ್ದಾರೆ.

ಹರಿಯಾಣದ ಹಲವು ಕಡೆ ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದ್ದು, ಸೋಮವಾರ ಜಿಂದ್ ಜಿಲ್ಲೆಯ ಖತ್ಕರ್ ಎಂಬಲ್ಲಿ ಇಂತಹ ಒಂದು ಕಾರ್ಯಾಗಾರ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡನೆ ತಿಂಗಳಿಗೆ ಹೆಜ್ಜೆ ಇಟ್ಟಿರುವ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಜನವರಿ 26ರಂದು ರಾಜಧಾನಿಯಲ್ಲಿ ನಡೆಯುವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಮಹಿಳೆಯರು ಟ್ರ್ಯಾಕ್ಟರ್ ನಡೆಸುವ ಮೂಲಕ ಹರಿಯಾಣದ ಪುರುಷ ಪ್ರಧಾನ ಸಮಾಜದಲ್ಲಿ ಹೊಸ ಬದಲಾವಣೆಯನ್ನು ಸೂಚಿಸಲಿದ್ದಾರೆ.

‘ತಖ್ತರ್‌ನ ಟೋಲ್ ಪ್ಲಾಜಾ ಬಳಿಯ ಹೆದ್ದಾರಿಯಲ್ಲಿ ನಮ್ಮ ಜಿಲ್ಲೆಯ ನೂರಕ್ಕೂ ಹೆಚ್ಚು ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದೇವೆ. ರೈತ ಪ್ರತಿಭಟನೆಯ ರ‍್ಯಾಲಿಯಲ್ಲಿ ನಾವು ಟ್ರ್ಯಾಕ್ಟರ್ ಚಲಾಯಿಸಿ ನಮ್ಮ ಪ್ರತಿರೋಧ ದಾಖಲಿಸಲಿದ್ದೇವೆ’ ಎನ್ನುತ್ತಾರೆ ಸಫಾ ಖೇರಿ ಗ್ರಾಮದ ಸಿಕ್ಕಿಂ ನೈನ್ ಎಂಬ ಮಹಿಳೆ.

‘ಪ್ರತಿಭಟನೆಯಲ್ಲಿ ಈಗ ಮಹಿಳಾ ಶಕ್ತಿಯೂ ಸೇರಿಕೊಂಡಿದೆ. ನಾವು ಹಿಂದಕ್ಕೆ ಹೆಜ್ಜೆ ಇಡುವುದಿಲ್ಲ. ನಮ್ಮನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ಈಗ ನಾವು ಪ್ರತಿಭಟನೆ ಮಾಡದೇ ಹೋದರೆ ನಮ್ಮ ಮುಂದಿನ ತಲೆಮಾರಿಗೆ ಏನಂತ ಉತ್ತರಿಸಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಖತ್ಕರ್ ಗ್ರಾಮದ ಸರಜಾ ರಾಜಪಾಲಾ ಎನ್ನುವ 35 ವರ್ಷದ ಮಹಿಳೆ, “ನಾನು ರೈತರ ಮಗಳು. ಇಲ್ಲಿವರೆಗೆ ಸರ್ಕಾರಗಳು ರೈತರ ಮೇಲೆ ಸಾಕಷ್ಟು ದೌರ್ಜನ್ಯ ನಡೆಸಿವೆ. ಇನ್ನು ಮುಂದೆ ನಾವು ಇದನ್ನು ಸಹಿಸೆವು. ಎದೆ ಸೆಟೆಸಿ ಹೋರಾಡುವೆವು” ಎಂದಿದ್ದಾರೆ.

‘ಖತ್ಕರ್, ಸಫಾ ಖೇರಿ, ಬರ್ಸೊಲಾ, ಪೌಕ್ರಿ ಖೇರಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯಲು ಬರುತ್ತಿದ್ದಾರೆ’ ಎಂದು ರೈತ ವಿಜೇಂದರ್ ಸಂಧು ಹೇಳಿದ್ದಾರೆ.

ಮಹಿಳೆಯರು ಈ ಕ್ರಮಕ್ಕೆ ಮುಂದಾಗಿರುವುದು ಹೋರಾಟದಲ್ಲಿ ಒಂದು ದೊಡ್ಡ ನೆಗೆತವಾಗಿದೆ, ಇದು ಅನಿವಾರ್ಯವೂ ಆಗಿದೆ ಎಂದು ಹಿರಿಯ ರೈತ ಸತ್ಬೀರ್ ಪೆಹ್ಲವಾಲಾ ತಿಳಿಸಿದ್ದಾರೆ. ‘ನಮ್ಮ ಮಕ್ಕಳು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪ್ರತಿಭಟಿಸುತ್ತಿದ್ದಾರೆ, ನಮ್ಮ ಜನರು ದೇಶದ ರಾಜಧಾನಿಗೆ ಘೇರಾವ್ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಪ್ ಮುಖ್ಯಸ್ಥ ಅಜಾದ್ ಸಿಂಗ್ ಕೂಡ ಮಹಿಳೆಯರ ಹೋರಾಟ ಬೆಂಬಲಿಸಿದ್ದು, ಗಣರಾಜ್ಯೋತ್ಸವದಂದು ನಡೆಯುವ ಸೈನಿಕರ ಪರೇಡ್‌ನಂತೆಯೇ ನಮ್ಮ ಪರೇಡ್ ಕೂಡ ನಡೆಯಲಿದೆ ಎಂದಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...