Homeಮುಖಪುಟಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಹರಿಯಾಣದ ವಿವಿಧ ಕಡೆ ರೈತ ಮಹಿಳೆಯರಿಗೆ ಈಗ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ತಮ್ಮ ಬೇಡಿಕೆ ಈಡೇರದಿದ್ದರೆ ಜನವರಿ 26ರ ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿದ ಬೆನ್ನಲ್ಲೇ ಹರಿಯಾಣದ ರೈತ ಮಹಿಳೆಯರು ಈಗ ನೂರಾರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿದ್ದಾರೆ.

ಹರಿಯಾಣದ ಹಲವು ಕಡೆ ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದ್ದು, ಸೋಮವಾರ ಜಿಂದ್ ಜಿಲ್ಲೆಯ ಖತ್ಕರ್ ಎಂಬಲ್ಲಿ ಇಂತಹ ಒಂದು ಕಾರ್ಯಾಗಾರ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡನೆ ತಿಂಗಳಿಗೆ ಹೆಜ್ಜೆ ಇಟ್ಟಿರುವ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಜನವರಿ 26ರಂದು ರಾಜಧಾನಿಯಲ್ಲಿ ನಡೆಯುವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಮಹಿಳೆಯರು ಟ್ರ್ಯಾಕ್ಟರ್ ನಡೆಸುವ ಮೂಲಕ ಹರಿಯಾಣದ ಪುರುಷ ಪ್ರಧಾನ ಸಮಾಜದಲ್ಲಿ ಹೊಸ ಬದಲಾವಣೆಯನ್ನು ಸೂಚಿಸಲಿದ್ದಾರೆ.

‘ತಖ್ತರ್‌ನ ಟೋಲ್ ಪ್ಲಾಜಾ ಬಳಿಯ ಹೆದ್ದಾರಿಯಲ್ಲಿ ನಮ್ಮ ಜಿಲ್ಲೆಯ ನೂರಕ್ಕೂ ಹೆಚ್ಚು ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದೇವೆ. ರೈತ ಪ್ರತಿಭಟನೆಯ ರ‍್ಯಾಲಿಯಲ್ಲಿ ನಾವು ಟ್ರ್ಯಾಕ್ಟರ್ ಚಲಾಯಿಸಿ ನಮ್ಮ ಪ್ರತಿರೋಧ ದಾಖಲಿಸಲಿದ್ದೇವೆ’ ಎನ್ನುತ್ತಾರೆ ಸಫಾ ಖೇರಿ ಗ್ರಾಮದ ಸಿಕ್ಕಿಂ ನೈನ್ ಎಂಬ ಮಹಿಳೆ.

‘ಪ್ರತಿಭಟನೆಯಲ್ಲಿ ಈಗ ಮಹಿಳಾ ಶಕ್ತಿಯೂ ಸೇರಿಕೊಂಡಿದೆ. ನಾವು ಹಿಂದಕ್ಕೆ ಹೆಜ್ಜೆ ಇಡುವುದಿಲ್ಲ. ನಮ್ಮನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ಈಗ ನಾವು ಪ್ರತಿಭಟನೆ ಮಾಡದೇ ಹೋದರೆ ನಮ್ಮ ಮುಂದಿನ ತಲೆಮಾರಿಗೆ ಏನಂತ ಉತ್ತರಿಸಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಖತ್ಕರ್ ಗ್ರಾಮದ ಸರಜಾ ರಾಜಪಾಲಾ ಎನ್ನುವ 35 ವರ್ಷದ ಮಹಿಳೆ, “ನಾನು ರೈತರ ಮಗಳು. ಇಲ್ಲಿವರೆಗೆ ಸರ್ಕಾರಗಳು ರೈತರ ಮೇಲೆ ಸಾಕಷ್ಟು ದೌರ್ಜನ್ಯ ನಡೆಸಿವೆ. ಇನ್ನು ಮುಂದೆ ನಾವು ಇದನ್ನು ಸಹಿಸೆವು. ಎದೆ ಸೆಟೆಸಿ ಹೋರಾಡುವೆವು” ಎಂದಿದ್ದಾರೆ.

‘ಖತ್ಕರ್, ಸಫಾ ಖೇರಿ, ಬರ್ಸೊಲಾ, ಪೌಕ್ರಿ ಖೇರಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯಲು ಬರುತ್ತಿದ್ದಾರೆ’ ಎಂದು ರೈತ ವಿಜೇಂದರ್ ಸಂಧು ಹೇಳಿದ್ದಾರೆ.

ಮಹಿಳೆಯರು ಈ ಕ್ರಮಕ್ಕೆ ಮುಂದಾಗಿರುವುದು ಹೋರಾಟದಲ್ಲಿ ಒಂದು ದೊಡ್ಡ ನೆಗೆತವಾಗಿದೆ, ಇದು ಅನಿವಾರ್ಯವೂ ಆಗಿದೆ ಎಂದು ಹಿರಿಯ ರೈತ ಸತ್ಬೀರ್ ಪೆಹ್ಲವಾಲಾ ತಿಳಿಸಿದ್ದಾರೆ. ‘ನಮ್ಮ ಮಕ್ಕಳು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪ್ರತಿಭಟಿಸುತ್ತಿದ್ದಾರೆ, ನಮ್ಮ ಜನರು ದೇಶದ ರಾಜಧಾನಿಗೆ ಘೇರಾವ್ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಪ್ ಮುಖ್ಯಸ್ಥ ಅಜಾದ್ ಸಿಂಗ್ ಕೂಡ ಮಹಿಳೆಯರ ಹೋರಾಟ ಬೆಂಬಲಿಸಿದ್ದು, ಗಣರಾಜ್ಯೋತ್ಸವದಂದು ನಡೆಯುವ ಸೈನಿಕರ ಪರೇಡ್‌ನಂತೆಯೇ ನಮ್ಮ ಪರೇಡ್ ಕೂಡ ನಡೆಯಲಿದೆ ಎಂದಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...