Homeಚಳವಳಿವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ...

ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ಕೃಷಿ ಕಾಯ್ದೆಗಳ ಪರವಾಗಿ ಕಟ್ಟರ್ ರೈತರ ಜೊತೆ ಸಂವಾದ ನಡೆಸಬೇಕಿತ್ತು.

- Advertisement -
- Advertisement -

ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಇಂದು ಕರ್ನಾಲ್ ಬಳಿಯ ಕೈಮ್ಲಾ ಎಂಬ ಗ್ರಾಮಕ್ಕೆ ಭೇಟಿ ನೀಡಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ಉಪಯೋಗಗಳ ಬಗ್ಗೆ ಭಾಷಣ ಮಾಡಬೇಕಿತ್ತು. ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ರೈತರ ಜೊತೆ ಸಂವಾದ ನಡೆಸಬೇಕಿತ್ತು. ಆದರೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ವೇದಿಕೆಗೆ ನುಗ್ಗಿದ ಕಾಯ್ದೆ ವಿರೋಧಿ ರೈತರು ಕೃಷಿ ಕಾಯ್ದೆಗಳ ವಿರುದ್ಧ, ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದ್ದಾರೆ. ಕುರ್ಚಿಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ. ಇದರಿಂದ ಸಿಎಂ ಕಾರ್ಯಕ್ರಮವನ್ನೆ ರದ್ದುಗೊಳಿಸಿ ಮುಖಭಂಗಕ್ಕೊಳಾಗಾಗಿದ್ದಾರೆ.

ಇಂದು ಬೆಳಿಗ್ಗೆಯೇ ರೈತರ ಮೇಲೆ ಮುಗಿಬಿದ್ದಿರುವ ಹರಿಯಾಣ ಪೊಲೀಸರು ಕರ್ನಾಲ್ ಟೋಲ್ ಪ್ಲಾಜಾ ಬಳಿ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು ಸಿಡಿಸಿ ಹೋರಾಟ ಹತ್ತಿಕ್ಕಲು ಮುಂದಾಗಿದ್ದರು. ಆದರೂ ಪೊಲೀಸರ ಭದ್ರಕೋಟೆ ಮುರಿದ ರೈತರು ಕೈಮ್ಲಾ ಗ್ರಾಮ ಪ್ರವೇಶಿಸಿ ತಮ್ಮ ಪ್ರತಿಭಟನೆ ದಾಖಲಿಸಿದ್ದಾರೆ.

ಈ ಹಿಂದೆ ಇದೇ ರೈತರು ಸಿಎಂ ಕಟ್ಟರ್‌ರವರಿಗೆ ಕಪ್ಪು ಬಾವುಟ ತೋರಿಸಿದ್ದಲ್ಲದೆ ಅವರು ಬೆಂಗಾವಲು ವಾಹನವನ್ನು ರೈತರು ತಡೆದಿದ್ದರು. ಇದರಿಂದ ಕೆರಳಿದ ಪೊಲೀಸರು 13 ರೈತ ಮುಖಂಡರ ಮೇಲೆ ಕೊಲೆಯತ್ನದ ದೂರು ದಾಖಲಿಸಿದ್ದರು. ಆದರೂ ತಲೆಕೆಡಿಸಿಕೊಳ್ಳದ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರ ವಿರುದ್ಧವಿದ್ದು, ಕಾರ್ಪೊರೇಟ್‌ಗಳ ಹಿತಾಸಕ್ತಿ ಕಾಪಾಡುತ್ತವೆ ಎಂದು ರೈತರು ಆರೋಪಿಸಿದ್ದಾರೆ. ಅದರಲ್ಲಿಯೂ ಪಂಜಾಬ್ ಮತ್ತು ಹರಿಯಾಣ ರೈತರು ಅತಿ ಹೆಚ್ಚು ಗೋಧಿ ಮತ್ತು ಭತ್ತ ಬೆಳೆಯುತ್ತಿದ್ದು ಎಂಎಸ್‌ಪಿಯನ್ನೇ ನಂಬಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳಲ್ಲಿ ಎಂಎಸ್‌ಪಿ ಬಗ್ಗೆ ಚಕಾರವಿಲ್ಲ. ಹಾಗಾಗಿ ಅಲ್ಲಿನ ರೈತರ ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಅಣಿಯಾಗಿದ್ದಾರೆ.

ಆದರೆ ಕೇಂದ್ರ ಕೃಷಿ ಕಾಯ್ದೆಗಳನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು ದೇಶಾದ್ಯಂತ 700 ಕಾರ್ಯಕ್ರಮಗಳ ಮೂಲಕ ಅವುಗಳ ಉಪಯೋಗಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೊರಟಿದೆ. ಅದರ ಭಾಗವಾಗಿಯೇ ಇಂದು ಹರಿಯಾಣದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ರೈತರ ಹೋರಾಟಕ್ಕೆ ಬೆದರಿ ಅದನ್ನು ರದ್ದುಗೊಳಿಸಲಾಗಿದೆ.

ಇಂದು ಬೆಳಿಗ್ಗೆ ಹರಿಯಾಣದ ರೈತರ ಮೇಲೆ ದಾಳಿಯನ್ನು ಕಾಂಗ್ರೆಸ್ ವಕ್ತಾರ ರಣ್‌ದೀಪ್‌ ಸಿಂಗ್ ಸುರ್ಜೇವಾಲ ತೀವ್ರವಾಗಿ ಖಂಡಿಸಿದ್ದಾರೆ. “ಮನೋಹರ್ ಲಾಲ್‌ ಕಟ್ಟರ್‌ಜಿ ದಯವಿಟ್ಟು ನೀವು ಇಂದು ಕೈಮ್ಲಾ ಗ್ರಾಮದ ಕಾರ್ಯಕ್ರಮವನ್ನು ಕೈಬಿಡಿ. ದೇಶಕ್ಕೆ ಅನ್ನ ಕೊಡುವ ರೈತರ ವಿಚಾರದಲ್ಲಿ ಭಾವನಾತ್ಮಕ ನಾಟಕ ಆಡಬೇಡಿ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ನೀವು ರೈತರೊಂದಿಗೆ ಮಾತನಾಡಬೇಕೆಂದಿದ್ದರೆ ಕಳೆದ 46 ದಿನಗಳಿಂದ ಹೋರಾಡುತ್ತಿರುವ ರೈತರೊಂದಿಗೆ ಮಾತನಾಡಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...