Homeಚಳವಳಿವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ...

ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ಕೃಷಿ ಕಾಯ್ದೆಗಳ ಪರವಾಗಿ ಕಟ್ಟರ್ ರೈತರ ಜೊತೆ ಸಂವಾದ ನಡೆಸಬೇಕಿತ್ತು.

- Advertisement -
- Advertisement -

ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಇಂದು ಕರ್ನಾಲ್ ಬಳಿಯ ಕೈಮ್ಲಾ ಎಂಬ ಗ್ರಾಮಕ್ಕೆ ಭೇಟಿ ನೀಡಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ಉಪಯೋಗಗಳ ಬಗ್ಗೆ ಭಾಷಣ ಮಾಡಬೇಕಿತ್ತು. ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ರೈತರ ಜೊತೆ ಸಂವಾದ ನಡೆಸಬೇಕಿತ್ತು. ಆದರೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ವೇದಿಕೆಗೆ ನುಗ್ಗಿದ ಕಾಯ್ದೆ ವಿರೋಧಿ ರೈತರು ಕೃಷಿ ಕಾಯ್ದೆಗಳ ವಿರುದ್ಧ, ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದ್ದಾರೆ. ಕುರ್ಚಿಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ. ಇದರಿಂದ ಸಿಎಂ ಕಾರ್ಯಕ್ರಮವನ್ನೆ ರದ್ದುಗೊಳಿಸಿ ಮುಖಭಂಗಕ್ಕೊಳಾಗಾಗಿದ್ದಾರೆ.

ಇಂದು ಬೆಳಿಗ್ಗೆಯೇ ರೈತರ ಮೇಲೆ ಮುಗಿಬಿದ್ದಿರುವ ಹರಿಯಾಣ ಪೊಲೀಸರು ಕರ್ನಾಲ್ ಟೋಲ್ ಪ್ಲಾಜಾ ಬಳಿ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು ಸಿಡಿಸಿ ಹೋರಾಟ ಹತ್ತಿಕ್ಕಲು ಮುಂದಾಗಿದ್ದರು. ಆದರೂ ಪೊಲೀಸರ ಭದ್ರಕೋಟೆ ಮುರಿದ ರೈತರು ಕೈಮ್ಲಾ ಗ್ರಾಮ ಪ್ರವೇಶಿಸಿ ತಮ್ಮ ಪ್ರತಿಭಟನೆ ದಾಖಲಿಸಿದ್ದಾರೆ.

ಈ ಹಿಂದೆ ಇದೇ ರೈತರು ಸಿಎಂ ಕಟ್ಟರ್‌ರವರಿಗೆ ಕಪ್ಪು ಬಾವುಟ ತೋರಿಸಿದ್ದಲ್ಲದೆ ಅವರು ಬೆಂಗಾವಲು ವಾಹನವನ್ನು ರೈತರು ತಡೆದಿದ್ದರು. ಇದರಿಂದ ಕೆರಳಿದ ಪೊಲೀಸರು 13 ರೈತ ಮುಖಂಡರ ಮೇಲೆ ಕೊಲೆಯತ್ನದ ದೂರು ದಾಖಲಿಸಿದ್ದರು. ಆದರೂ ತಲೆಕೆಡಿಸಿಕೊಳ್ಳದ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರ ವಿರುದ್ಧವಿದ್ದು, ಕಾರ್ಪೊರೇಟ್‌ಗಳ ಹಿತಾಸಕ್ತಿ ಕಾಪಾಡುತ್ತವೆ ಎಂದು ರೈತರು ಆರೋಪಿಸಿದ್ದಾರೆ. ಅದರಲ್ಲಿಯೂ ಪಂಜಾಬ್ ಮತ್ತು ಹರಿಯಾಣ ರೈತರು ಅತಿ ಹೆಚ್ಚು ಗೋಧಿ ಮತ್ತು ಭತ್ತ ಬೆಳೆಯುತ್ತಿದ್ದು ಎಂಎಸ್‌ಪಿಯನ್ನೇ ನಂಬಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳಲ್ಲಿ ಎಂಎಸ್‌ಪಿ ಬಗ್ಗೆ ಚಕಾರವಿಲ್ಲ. ಹಾಗಾಗಿ ಅಲ್ಲಿನ ರೈತರ ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಅಣಿಯಾಗಿದ್ದಾರೆ.

ಆದರೆ ಕೇಂದ್ರ ಕೃಷಿ ಕಾಯ್ದೆಗಳನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು ದೇಶಾದ್ಯಂತ 700 ಕಾರ್ಯಕ್ರಮಗಳ ಮೂಲಕ ಅವುಗಳ ಉಪಯೋಗಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೊರಟಿದೆ. ಅದರ ಭಾಗವಾಗಿಯೇ ಇಂದು ಹರಿಯಾಣದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ರೈತರ ಹೋರಾಟಕ್ಕೆ ಬೆದರಿ ಅದನ್ನು ರದ್ದುಗೊಳಿಸಲಾಗಿದೆ.

ಇಂದು ಬೆಳಿಗ್ಗೆ ಹರಿಯಾಣದ ರೈತರ ಮೇಲೆ ದಾಳಿಯನ್ನು ಕಾಂಗ್ರೆಸ್ ವಕ್ತಾರ ರಣ್‌ದೀಪ್‌ ಸಿಂಗ್ ಸುರ್ಜೇವಾಲ ತೀವ್ರವಾಗಿ ಖಂಡಿಸಿದ್ದಾರೆ. “ಮನೋಹರ್ ಲಾಲ್‌ ಕಟ್ಟರ್‌ಜಿ ದಯವಿಟ್ಟು ನೀವು ಇಂದು ಕೈಮ್ಲಾ ಗ್ರಾಮದ ಕಾರ್ಯಕ್ರಮವನ್ನು ಕೈಬಿಡಿ. ದೇಶಕ್ಕೆ ಅನ್ನ ಕೊಡುವ ರೈತರ ವಿಚಾರದಲ್ಲಿ ಭಾವನಾತ್ಮಕ ನಾಟಕ ಆಡಬೇಡಿ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ನೀವು ರೈತರೊಂದಿಗೆ ಮಾತನಾಡಬೇಕೆಂದಿದ್ದರೆ ಕಳೆದ 46 ದಿನಗಳಿಂದ ಹೋರಾಡುತ್ತಿರುವ ರೈತರೊಂದಿಗೆ ಮಾತನಾಡಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...