Homeಫ್ಯಾಕ್ಟ್‌ಚೆಕ್ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021 ರಂದು ಮುಜಾಫರ್ ನಗರದಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸಿದ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ  ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು

ಫ್ಯಾಕ್ಟ್‌ಚೆಕ್

ಪೋಸ್ಟ್‌ನಲ್ಲಿ ಷೇರ್ ಮಾಡಿದ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡುವು ಟ್ರಾಕ್ಟರ್ ಟು ಟ್ವಿಟರ್ ಖಾತೆಯ ಟ್ವೀಟ್ ಒಂದು ಕಂಡುಬಂದಿದೆ. ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಮದ್ಯಕ್ಕಾಗಿ ಪರಾದಾಡುತ್ತಿರುವ ದೃಶ್ಯಗಳೆಂದು ತಪ್ಪಾಗಿ  ಹಂಚಿಕೊಳ್ಳುತ್ತಿರುವುದಾಗಿ ಆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಎರಡು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳು ಇರುವುದನ್ನು ನಾವು ಗಮನಿಸಬಹುದು.  ಮೇಲಿನ ವಿವರಗಳ ಆಧಾರವಾಗಿ ಈ ವಿಡಿಯೋ ಕ್ಲಿಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೊಂದಾಗಿ ತಿಳಿದಿಕೊಳ್ಳೋಣ.

ವಿಡಿಯೋ ಕ್ಲಿಪ್ -1

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ಗುಗೂಲ್‌ನಲ್ಲಿ ಹುಡುಕಿದಾಗ. ಇವೇ ದೃಶ್ಯಗಳು ಇರುವ ವಿಡಿಯೋವನ್ನು ಬಳಕೆದಾರನೊಬ್ಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ‘‘ಬಾಬಾ ರೋಡ್ ಷಾ ಜಿ’ ಮೇಳದಲ್ಲಿ ಎಲ್ಲೆಂದರಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ದೃಶ್ಯಗಳೆಂದು” ವಿಡಿಯೋ ವಿವರಣೆಯಲ್ಲಿ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ಕೌಂಕೆ ಕಲಾನ್ ಎನ್ನುವ ಗ್ರಾಮದಲ್ಲಿ ಪ್ರತಿ ವರ್ಷ ಈ ‘ಬಾಬಾ ರೋಡ್ ಷಾ ಜಿ’ ಮೇಳಾ ನಡೆಸುತ್ತಾರೆ. 06 ಸೆಪ್ಟೆಂಬರ್ 2021 ರಂದು ನಡೆದ ‘ ಬಾಬಾ ರೋಡ್ ಷಾ ಜಿ’ ಮೇಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ತಿ ವಿಡಿಯೋವನ್ನು ‘PunjabLive1.com’ ನ್ಯೂಸ್ ಚಾನೆಲ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿನ ಒಬ್ಬ ವ್ಯಕ್ತಿ, ಈ ವಿಡಿಯೋದಲ್ಲಿಯೂ ಸಹ ಕಾಣಿಸುತ್ತಿರುವುದನ್ನು ನಾವು ಗಮನಿಸಬಹುದು. ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿ ಹಂಚಿಕೊಂಡಿರುವ ಮತ್ತೊಂದು ವಿಡಿಯೋದಲ್ಲಿಯೂ ಸಹ ಈ ವ್ಯಕ್ತಿ ಕಾಣಿಸುತ್ತಿರುವುದರ ಆದಾರದ ಮೇಲೆ ಈ ವಿಡಿಯೋ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವುದೆಂದು ಖಚಿತವಾಗಿ ಹೇಳಬಹುದು.

ವಿಡಿಯೋ ಕ್ಲಿಪ್ -2

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವಾಗಿ ಹಂಚಿಕೊಂಡಿರುವುದಾಗಿ ತಿಳಿಯಿತು. ಆ ವಿಡಿಯೋಗಳನ್ನು ಇಲ್ಲಿ, ಇಲ್ಲಿ ನೋಡಬಹುದು. ಇವೇ ದೃಶ್ಯಗಳೊಂದಿಗೆ ಹೋಲಿಕೆ ಇರುವ ವಿಡಿಯೋವನ್ನು ‘Daily News Punjab’ ವಾಹಿನಿ 07 ಸೆಬ್ಟಂಬರ್ 2021ರಂದು ಪ್ರಕಟಿಸಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವವೆಂದು ವಿಡಿಯೋ ವಿವರಣೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದ ಹೆಸರಿನಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂದೀಪ್ ಸಿಂಗ್ ಎನ್ನುವ ಸ್ವತಂತ್ರ ಪತ್ರಕರ್ತ, ಕೌಂಕೆ ಕಲಾನ್ ಗ್ರಾಮಸ್ಥರನ್ನು ವಿಡಿಯೋದ ಸ್ಪಷ್ಟತೆಗಾಗಿ ಸಂದರ್ಶಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ 06 ಸೆಪ್ಟೆಂಬರ್ 2021 ರಂದು ನಡೆದ ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಕೌಂಕೆ ಕಲಾನ್ ಗ್ರಾಮಸ್ಥರು ಸಂದೀಪ್ ಸಿಂಗ್ ಅವರಿಗೆ ಹೇಳಿದ್ದಾರೆ. ಈ ತನಿಖಾ ವೀಡಿಯೋದಲ್ಲಿ ಕಾಣುವ ಕಟ್ಟಡಗಳು ಮತ್ತು ಬಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣುವ ದೃಶ್ಯಗಳನ್ನು ಹೋಲುತ್ತವೆ. ಇದರ ಜೊತೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋ, ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಜನ ಶಕ್ತಿ ನ್ಯೂಸ್ ಪಂಜಾಬ್ ಸುದ್ದಿ ವಾಹಿನಿ ಸ್ಪಷ್ಟಪಡಿಸಿದೆ. ಈ ವಿವರಗಳ ಆಧಾರದ ಮೇಲೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿಲ್ಲ ಎಂದು ಖಚಿತವಾಗಿ ಹೇಳಬಹುದು.

ಒಟ್ಟಿನಲ್ಲಿ, ‘ಬಾಬಾ ರೋಡ್ ಷಾ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿರುವ ದೃಶ್ಯವೆಂದು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...