Homeಫ್ಯಾಕ್ಟ್‌ಚೆಕ್ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021 ರಂದು ಮುಜಾಫರ್ ನಗರದಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸಿದ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ  ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು

ಫ್ಯಾಕ್ಟ್‌ಚೆಕ್

ಪೋಸ್ಟ್‌ನಲ್ಲಿ ಷೇರ್ ಮಾಡಿದ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡುವು ಟ್ರಾಕ್ಟರ್ ಟು ಟ್ವಿಟರ್ ಖಾತೆಯ ಟ್ವೀಟ್ ಒಂದು ಕಂಡುಬಂದಿದೆ. ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಮದ್ಯಕ್ಕಾಗಿ ಪರಾದಾಡುತ್ತಿರುವ ದೃಶ್ಯಗಳೆಂದು ತಪ್ಪಾಗಿ  ಹಂಚಿಕೊಳ್ಳುತ್ತಿರುವುದಾಗಿ ಆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಎರಡು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳು ಇರುವುದನ್ನು ನಾವು ಗಮನಿಸಬಹುದು.  ಮೇಲಿನ ವಿವರಗಳ ಆಧಾರವಾಗಿ ಈ ವಿಡಿಯೋ ಕ್ಲಿಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೊಂದಾಗಿ ತಿಳಿದಿಕೊಳ್ಳೋಣ.

ವಿಡಿಯೋ ಕ್ಲಿಪ್ -1

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ಗುಗೂಲ್‌ನಲ್ಲಿ ಹುಡುಕಿದಾಗ. ಇವೇ ದೃಶ್ಯಗಳು ಇರುವ ವಿಡಿಯೋವನ್ನು ಬಳಕೆದಾರನೊಬ್ಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ‘‘ಬಾಬಾ ರೋಡ್ ಷಾ ಜಿ’ ಮೇಳದಲ್ಲಿ ಎಲ್ಲೆಂದರಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ದೃಶ್ಯಗಳೆಂದು” ವಿಡಿಯೋ ವಿವರಣೆಯಲ್ಲಿ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ಕೌಂಕೆ ಕಲಾನ್ ಎನ್ನುವ ಗ್ರಾಮದಲ್ಲಿ ಪ್ರತಿ ವರ್ಷ ಈ ‘ಬಾಬಾ ರೋಡ್ ಷಾ ಜಿ’ ಮೇಳಾ ನಡೆಸುತ್ತಾರೆ. 06 ಸೆಪ್ಟೆಂಬರ್ 2021 ರಂದು ನಡೆದ ‘ ಬಾಬಾ ರೋಡ್ ಷಾ ಜಿ’ ಮೇಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ತಿ ವಿಡಿಯೋವನ್ನು ‘PunjabLive1.com’ ನ್ಯೂಸ್ ಚಾನೆಲ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿನ ಒಬ್ಬ ವ್ಯಕ್ತಿ, ಈ ವಿಡಿಯೋದಲ್ಲಿಯೂ ಸಹ ಕಾಣಿಸುತ್ತಿರುವುದನ್ನು ನಾವು ಗಮನಿಸಬಹುದು. ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿ ಹಂಚಿಕೊಂಡಿರುವ ಮತ್ತೊಂದು ವಿಡಿಯೋದಲ್ಲಿಯೂ ಸಹ ಈ ವ್ಯಕ್ತಿ ಕಾಣಿಸುತ್ತಿರುವುದರ ಆದಾರದ ಮೇಲೆ ಈ ವಿಡಿಯೋ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವುದೆಂದು ಖಚಿತವಾಗಿ ಹೇಳಬಹುದು.

ವಿಡಿಯೋ ಕ್ಲಿಪ್ -2

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವಾಗಿ ಹಂಚಿಕೊಂಡಿರುವುದಾಗಿ ತಿಳಿಯಿತು. ಆ ವಿಡಿಯೋಗಳನ್ನು ಇಲ್ಲಿ, ಇಲ್ಲಿ ನೋಡಬಹುದು. ಇವೇ ದೃಶ್ಯಗಳೊಂದಿಗೆ ಹೋಲಿಕೆ ಇರುವ ವಿಡಿಯೋವನ್ನು ‘Daily News Punjab’ ವಾಹಿನಿ 07 ಸೆಬ್ಟಂಬರ್ 2021ರಂದು ಪ್ರಕಟಿಸಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವವೆಂದು ವಿಡಿಯೋ ವಿವರಣೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದ ಹೆಸರಿನಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂದೀಪ್ ಸಿಂಗ್ ಎನ್ನುವ ಸ್ವತಂತ್ರ ಪತ್ರಕರ್ತ, ಕೌಂಕೆ ಕಲಾನ್ ಗ್ರಾಮಸ್ಥರನ್ನು ವಿಡಿಯೋದ ಸ್ಪಷ್ಟತೆಗಾಗಿ ಸಂದರ್ಶಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ 06 ಸೆಪ್ಟೆಂಬರ್ 2021 ರಂದು ನಡೆದ ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಕೌಂಕೆ ಕಲಾನ್ ಗ್ರಾಮಸ್ಥರು ಸಂದೀಪ್ ಸಿಂಗ್ ಅವರಿಗೆ ಹೇಳಿದ್ದಾರೆ. ಈ ತನಿಖಾ ವೀಡಿಯೋದಲ್ಲಿ ಕಾಣುವ ಕಟ್ಟಡಗಳು ಮತ್ತು ಬಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣುವ ದೃಶ್ಯಗಳನ್ನು ಹೋಲುತ್ತವೆ. ಇದರ ಜೊತೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋ, ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಜನ ಶಕ್ತಿ ನ್ಯೂಸ್ ಪಂಜಾಬ್ ಸುದ್ದಿ ವಾಹಿನಿ ಸ್ಪಷ್ಟಪಡಿಸಿದೆ. ಈ ವಿವರಗಳ ಆಧಾರದ ಮೇಲೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿಲ್ಲ ಎಂದು ಖಚಿತವಾಗಿ ಹೇಳಬಹುದು.

ಒಟ್ಟಿನಲ್ಲಿ, ‘ಬಾಬಾ ರೋಡ್ ಷಾ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿರುವ ದೃಶ್ಯವೆಂದು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...