Homeಫ್ಯಾಕ್ಟ್‌ಚೆಕ್ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021 ರಂದು ಮುಜಾಫರ್ ನಗರದಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸಿದ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ  ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು

ಫ್ಯಾಕ್ಟ್‌ಚೆಕ್

ಪೋಸ್ಟ್‌ನಲ್ಲಿ ಷೇರ್ ಮಾಡಿದ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡುವು ಟ್ರಾಕ್ಟರ್ ಟು ಟ್ವಿಟರ್ ಖಾತೆಯ ಟ್ವೀಟ್ ಒಂದು ಕಂಡುಬಂದಿದೆ. ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಮದ್ಯಕ್ಕಾಗಿ ಪರಾದಾಡುತ್ತಿರುವ ದೃಶ್ಯಗಳೆಂದು ತಪ್ಪಾಗಿ  ಹಂಚಿಕೊಳ್ಳುತ್ತಿರುವುದಾಗಿ ಆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಎರಡು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳು ಇರುವುದನ್ನು ನಾವು ಗಮನಿಸಬಹುದು.  ಮೇಲಿನ ವಿವರಗಳ ಆಧಾರವಾಗಿ ಈ ವಿಡಿಯೋ ಕ್ಲಿಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೊಂದಾಗಿ ತಿಳಿದಿಕೊಳ್ಳೋಣ.

ವಿಡಿಯೋ ಕ್ಲಿಪ್ -1

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ಗುಗೂಲ್‌ನಲ್ಲಿ ಹುಡುಕಿದಾಗ. ಇವೇ ದೃಶ್ಯಗಳು ಇರುವ ವಿಡಿಯೋವನ್ನು ಬಳಕೆದಾರನೊಬ್ಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ‘‘ಬಾಬಾ ರೋಡ್ ಷಾ ಜಿ’ ಮೇಳದಲ್ಲಿ ಎಲ್ಲೆಂದರಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ದೃಶ್ಯಗಳೆಂದು” ವಿಡಿಯೋ ವಿವರಣೆಯಲ್ಲಿ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ಕೌಂಕೆ ಕಲಾನ್ ಎನ್ನುವ ಗ್ರಾಮದಲ್ಲಿ ಪ್ರತಿ ವರ್ಷ ಈ ‘ಬಾಬಾ ರೋಡ್ ಷಾ ಜಿ’ ಮೇಳಾ ನಡೆಸುತ್ತಾರೆ. 06 ಸೆಪ್ಟೆಂಬರ್ 2021 ರಂದು ನಡೆದ ‘ ಬಾಬಾ ರೋಡ್ ಷಾ ಜಿ’ ಮೇಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ತಿ ವಿಡಿಯೋವನ್ನು ‘PunjabLive1.com’ ನ್ಯೂಸ್ ಚಾನೆಲ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿನ ಒಬ್ಬ ವ್ಯಕ್ತಿ, ಈ ವಿಡಿಯೋದಲ್ಲಿಯೂ ಸಹ ಕಾಣಿಸುತ್ತಿರುವುದನ್ನು ನಾವು ಗಮನಿಸಬಹುದು. ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿ ಹಂಚಿಕೊಂಡಿರುವ ಮತ್ತೊಂದು ವಿಡಿಯೋದಲ್ಲಿಯೂ ಸಹ ಈ ವ್ಯಕ್ತಿ ಕಾಣಿಸುತ್ತಿರುವುದರ ಆದಾರದ ಮೇಲೆ ಈ ವಿಡಿಯೋ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವುದೆಂದು ಖಚಿತವಾಗಿ ಹೇಳಬಹುದು.

ವಿಡಿಯೋ ಕ್ಲಿಪ್ -2

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವಾಗಿ ಹಂಚಿಕೊಂಡಿರುವುದಾಗಿ ತಿಳಿಯಿತು. ಆ ವಿಡಿಯೋಗಳನ್ನು ಇಲ್ಲಿ, ಇಲ್ಲಿ ನೋಡಬಹುದು. ಇವೇ ದೃಶ್ಯಗಳೊಂದಿಗೆ ಹೋಲಿಕೆ ಇರುವ ವಿಡಿಯೋವನ್ನು ‘Daily News Punjab’ ವಾಹಿನಿ 07 ಸೆಬ್ಟಂಬರ್ 2021ರಂದು ಪ್ರಕಟಿಸಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವವೆಂದು ವಿಡಿಯೋ ವಿವರಣೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದ ಹೆಸರಿನಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂದೀಪ್ ಸಿಂಗ್ ಎನ್ನುವ ಸ್ವತಂತ್ರ ಪತ್ರಕರ್ತ, ಕೌಂಕೆ ಕಲಾನ್ ಗ್ರಾಮಸ್ಥರನ್ನು ವಿಡಿಯೋದ ಸ್ಪಷ್ಟತೆಗಾಗಿ ಸಂದರ್ಶಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ 06 ಸೆಪ್ಟೆಂಬರ್ 2021 ರಂದು ನಡೆದ ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಕೌಂಕೆ ಕಲಾನ್ ಗ್ರಾಮಸ್ಥರು ಸಂದೀಪ್ ಸಿಂಗ್ ಅವರಿಗೆ ಹೇಳಿದ್ದಾರೆ. ಈ ತನಿಖಾ ವೀಡಿಯೋದಲ್ಲಿ ಕಾಣುವ ಕಟ್ಟಡಗಳು ಮತ್ತು ಬಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣುವ ದೃಶ್ಯಗಳನ್ನು ಹೋಲುತ್ತವೆ. ಇದರ ಜೊತೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋ, ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಜನ ಶಕ್ತಿ ನ್ಯೂಸ್ ಪಂಜಾಬ್ ಸುದ್ದಿ ವಾಹಿನಿ ಸ್ಪಷ್ಟಪಡಿಸಿದೆ. ಈ ವಿವರಗಳ ಆಧಾರದ ಮೇಲೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿಲ್ಲ ಎಂದು ಖಚಿತವಾಗಿ ಹೇಳಬಹುದು.

ಒಟ್ಟಿನಲ್ಲಿ, ‘ಬಾಬಾ ರೋಡ್ ಷಾ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿರುವ ದೃಶ್ಯವೆಂದು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...