Homeಫ್ಯಾಕ್ಟ್‌ಚೆಕ್ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021 ರಂದು ಮುಜಾಫರ್ ನಗರದಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸಿದ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ  ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು

ಫ್ಯಾಕ್ಟ್‌ಚೆಕ್

ಪೋಸ್ಟ್‌ನಲ್ಲಿ ಷೇರ್ ಮಾಡಿದ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡುವು ಟ್ರಾಕ್ಟರ್ ಟು ಟ್ವಿಟರ್ ಖಾತೆಯ ಟ್ವೀಟ್ ಒಂದು ಕಂಡುಬಂದಿದೆ. ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಮದ್ಯಕ್ಕಾಗಿ ಪರಾದಾಡುತ್ತಿರುವ ದೃಶ್ಯಗಳೆಂದು ತಪ್ಪಾಗಿ  ಹಂಚಿಕೊಳ್ಳುತ್ತಿರುವುದಾಗಿ ಆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಎರಡು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳು ಇರುವುದನ್ನು ನಾವು ಗಮನಿಸಬಹುದು.  ಮೇಲಿನ ವಿವರಗಳ ಆಧಾರವಾಗಿ ಈ ವಿಡಿಯೋ ಕ್ಲಿಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೊಂದಾಗಿ ತಿಳಿದಿಕೊಳ್ಳೋಣ.

ವಿಡಿಯೋ ಕ್ಲಿಪ್ -1

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ಗುಗೂಲ್‌ನಲ್ಲಿ ಹುಡುಕಿದಾಗ. ಇವೇ ದೃಶ್ಯಗಳು ಇರುವ ವಿಡಿಯೋವನ್ನು ಬಳಕೆದಾರನೊಬ್ಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ‘‘ಬಾಬಾ ರೋಡ್ ಷಾ ಜಿ’ ಮೇಳದಲ್ಲಿ ಎಲ್ಲೆಂದರಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ದೃಶ್ಯಗಳೆಂದು” ವಿಡಿಯೋ ವಿವರಣೆಯಲ್ಲಿ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ಕೌಂಕೆ ಕಲಾನ್ ಎನ್ನುವ ಗ್ರಾಮದಲ್ಲಿ ಪ್ರತಿ ವರ್ಷ ಈ ‘ಬಾಬಾ ರೋಡ್ ಷಾ ಜಿ’ ಮೇಳಾ ನಡೆಸುತ್ತಾರೆ. 06 ಸೆಪ್ಟೆಂಬರ್ 2021 ರಂದು ನಡೆದ ‘ ಬಾಬಾ ರೋಡ್ ಷಾ ಜಿ’ ಮೇಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ತಿ ವಿಡಿಯೋವನ್ನು ‘PunjabLive1.com’ ನ್ಯೂಸ್ ಚಾನೆಲ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿನ ಒಬ್ಬ ವ್ಯಕ್ತಿ, ಈ ವಿಡಿಯೋದಲ್ಲಿಯೂ ಸಹ ಕಾಣಿಸುತ್ತಿರುವುದನ್ನು ನಾವು ಗಮನಿಸಬಹುದು. ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿ ಹಂಚಿಕೊಂಡಿರುವ ಮತ್ತೊಂದು ವಿಡಿಯೋದಲ್ಲಿಯೂ ಸಹ ಈ ವ್ಯಕ್ತಿ ಕಾಣಿಸುತ್ತಿರುವುದರ ಆದಾರದ ಮೇಲೆ ಈ ವಿಡಿಯೋ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವುದೆಂದು ಖಚಿತವಾಗಿ ಹೇಳಬಹುದು.

ವಿಡಿಯೋ ಕ್ಲಿಪ್ -2

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವಾಗಿ ಹಂಚಿಕೊಂಡಿರುವುದಾಗಿ ತಿಳಿಯಿತು. ಆ ವಿಡಿಯೋಗಳನ್ನು ಇಲ್ಲಿ, ಇಲ್ಲಿ ನೋಡಬಹುದು. ಇವೇ ದೃಶ್ಯಗಳೊಂದಿಗೆ ಹೋಲಿಕೆ ಇರುವ ವಿಡಿಯೋವನ್ನು ‘Daily News Punjab’ ವಾಹಿನಿ 07 ಸೆಬ್ಟಂಬರ್ 2021ರಂದು ಪ್ರಕಟಿಸಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವವೆಂದು ವಿಡಿಯೋ ವಿವರಣೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದ ಹೆಸರಿನಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂದೀಪ್ ಸಿಂಗ್ ಎನ್ನುವ ಸ್ವತಂತ್ರ ಪತ್ರಕರ್ತ, ಕೌಂಕೆ ಕಲಾನ್ ಗ್ರಾಮಸ್ಥರನ್ನು ವಿಡಿಯೋದ ಸ್ಪಷ್ಟತೆಗಾಗಿ ಸಂದರ್ಶಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ 06 ಸೆಪ್ಟೆಂಬರ್ 2021 ರಂದು ನಡೆದ ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಕೌಂಕೆ ಕಲಾನ್ ಗ್ರಾಮಸ್ಥರು ಸಂದೀಪ್ ಸಿಂಗ್ ಅವರಿಗೆ ಹೇಳಿದ್ದಾರೆ. ಈ ತನಿಖಾ ವೀಡಿಯೋದಲ್ಲಿ ಕಾಣುವ ಕಟ್ಟಡಗಳು ಮತ್ತು ಬಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣುವ ದೃಶ್ಯಗಳನ್ನು ಹೋಲುತ್ತವೆ. ಇದರ ಜೊತೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋ, ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಜನ ಶಕ್ತಿ ನ್ಯೂಸ್ ಪಂಜಾಬ್ ಸುದ್ದಿ ವಾಹಿನಿ ಸ್ಪಷ್ಟಪಡಿಸಿದೆ. ಈ ವಿವರಗಳ ಆಧಾರದ ಮೇಲೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿಲ್ಲ ಎಂದು ಖಚಿತವಾಗಿ ಹೇಳಬಹುದು.

ಒಟ್ಟಿನಲ್ಲಿ, ‘ಬಾಬಾ ರೋಡ್ ಷಾ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿರುವ ದೃಶ್ಯವೆಂದು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...