Homeಫ್ಯಾಕ್ಟ್‌ಚೆಕ್ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021 ರಂದು ಮುಜಾಫರ್ ನಗರದಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸಿದ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ  ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು

ಫ್ಯಾಕ್ಟ್‌ಚೆಕ್

ಪೋಸ್ಟ್‌ನಲ್ಲಿ ಷೇರ್ ಮಾಡಿದ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡುವು ಟ್ರಾಕ್ಟರ್ ಟು ಟ್ವಿಟರ್ ಖಾತೆಯ ಟ್ವೀಟ್ ಒಂದು ಕಂಡುಬಂದಿದೆ. ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಮದ್ಯಕ್ಕಾಗಿ ಪರಾದಾಡುತ್ತಿರುವ ದೃಶ್ಯಗಳೆಂದು ತಪ್ಪಾಗಿ  ಹಂಚಿಕೊಳ್ಳುತ್ತಿರುವುದಾಗಿ ಆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಎರಡು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳು ಇರುವುದನ್ನು ನಾವು ಗಮನಿಸಬಹುದು.  ಮೇಲಿನ ವಿವರಗಳ ಆಧಾರವಾಗಿ ಈ ವಿಡಿಯೋ ಕ್ಲಿಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೊಂದಾಗಿ ತಿಳಿದಿಕೊಳ್ಳೋಣ.

ವಿಡಿಯೋ ಕ್ಲಿಪ್ -1

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ಗುಗೂಲ್‌ನಲ್ಲಿ ಹುಡುಕಿದಾಗ. ಇವೇ ದೃಶ್ಯಗಳು ಇರುವ ವಿಡಿಯೋವನ್ನು ಬಳಕೆದಾರನೊಬ್ಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ‘‘ಬಾಬಾ ರೋಡ್ ಷಾ ಜಿ’ ಮೇಳದಲ್ಲಿ ಎಲ್ಲೆಂದರಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ದೃಶ್ಯಗಳೆಂದು” ವಿಡಿಯೋ ವಿವರಣೆಯಲ್ಲಿ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ಕೌಂಕೆ ಕಲಾನ್ ಎನ್ನುವ ಗ್ರಾಮದಲ್ಲಿ ಪ್ರತಿ ವರ್ಷ ಈ ‘ಬಾಬಾ ರೋಡ್ ಷಾ ಜಿ’ ಮೇಳಾ ನಡೆಸುತ್ತಾರೆ. 06 ಸೆಪ್ಟೆಂಬರ್ 2021 ರಂದು ನಡೆದ ‘ ಬಾಬಾ ರೋಡ್ ಷಾ ಜಿ’ ಮೇಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ತಿ ವಿಡಿಯೋವನ್ನು ‘PunjabLive1.com’ ನ್ಯೂಸ್ ಚಾನೆಲ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿನ ಒಬ್ಬ ವ್ಯಕ್ತಿ, ಈ ವಿಡಿಯೋದಲ್ಲಿಯೂ ಸಹ ಕಾಣಿಸುತ್ತಿರುವುದನ್ನು ನಾವು ಗಮನಿಸಬಹುದು. ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿ ಹಂಚಿಕೊಂಡಿರುವ ಮತ್ತೊಂದು ವಿಡಿಯೋದಲ್ಲಿಯೂ ಸಹ ಈ ವ್ಯಕ್ತಿ ಕಾಣಿಸುತ್ತಿರುವುದರ ಆದಾರದ ಮೇಲೆ ಈ ವಿಡಿಯೋ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವುದೆಂದು ಖಚಿತವಾಗಿ ಹೇಳಬಹುದು.

ವಿಡಿಯೋ ಕ್ಲಿಪ್ -2

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವಾಗಿ ಹಂಚಿಕೊಂಡಿರುವುದಾಗಿ ತಿಳಿಯಿತು. ಆ ವಿಡಿಯೋಗಳನ್ನು ಇಲ್ಲಿ, ಇಲ್ಲಿ ನೋಡಬಹುದು. ಇವೇ ದೃಶ್ಯಗಳೊಂದಿಗೆ ಹೋಲಿಕೆ ಇರುವ ವಿಡಿಯೋವನ್ನು ‘Daily News Punjab’ ವಾಹಿನಿ 07 ಸೆಬ್ಟಂಬರ್ 2021ರಂದು ಪ್ರಕಟಿಸಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವವೆಂದು ವಿಡಿಯೋ ವಿವರಣೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದ ಹೆಸರಿನಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂದೀಪ್ ಸಿಂಗ್ ಎನ್ನುವ ಸ್ವತಂತ್ರ ಪತ್ರಕರ್ತ, ಕೌಂಕೆ ಕಲಾನ್ ಗ್ರಾಮಸ್ಥರನ್ನು ವಿಡಿಯೋದ ಸ್ಪಷ್ಟತೆಗಾಗಿ ಸಂದರ್ಶಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ 06 ಸೆಪ್ಟೆಂಬರ್ 2021 ರಂದು ನಡೆದ ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಕೌಂಕೆ ಕಲಾನ್ ಗ್ರಾಮಸ್ಥರು ಸಂದೀಪ್ ಸಿಂಗ್ ಅವರಿಗೆ ಹೇಳಿದ್ದಾರೆ. ಈ ತನಿಖಾ ವೀಡಿಯೋದಲ್ಲಿ ಕಾಣುವ ಕಟ್ಟಡಗಳು ಮತ್ತು ಬಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣುವ ದೃಶ್ಯಗಳನ್ನು ಹೋಲುತ್ತವೆ. ಇದರ ಜೊತೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋ, ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಜನ ಶಕ್ತಿ ನ್ಯೂಸ್ ಪಂಜಾಬ್ ಸುದ್ದಿ ವಾಹಿನಿ ಸ್ಪಷ್ಟಪಡಿಸಿದೆ. ಈ ವಿವರಗಳ ಆಧಾರದ ಮೇಲೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿಲ್ಲ ಎಂದು ಖಚಿತವಾಗಿ ಹೇಳಬಹುದು.

ಒಟ್ಟಿನಲ್ಲಿ, ‘ಬಾಬಾ ರೋಡ್ ಷಾ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿರುವ ದೃಶ್ಯವೆಂದು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...