Homeಫ್ಯಾಕ್ಟ್‌ಚೆಕ್ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021 ರಂದು ಮುಜಾಫರ್ ನಗರದಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸಿದ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ  ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು

ಫ್ಯಾಕ್ಟ್‌ಚೆಕ್

ಪೋಸ್ಟ್‌ನಲ್ಲಿ ಷೇರ್ ಮಾಡಿದ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡುವು ಟ್ರಾಕ್ಟರ್ ಟು ಟ್ವಿಟರ್ ಖಾತೆಯ ಟ್ವೀಟ್ ಒಂದು ಕಂಡುಬಂದಿದೆ. ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಮದ್ಯಕ್ಕಾಗಿ ಪರಾದಾಡುತ್ತಿರುವ ದೃಶ್ಯಗಳೆಂದು ತಪ್ಪಾಗಿ  ಹಂಚಿಕೊಳ್ಳುತ್ತಿರುವುದಾಗಿ ಆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಎರಡು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳು ಇರುವುದನ್ನು ನಾವು ಗಮನಿಸಬಹುದು.  ಮೇಲಿನ ವಿವರಗಳ ಆಧಾರವಾಗಿ ಈ ವಿಡಿಯೋ ಕ್ಲಿಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೊಂದಾಗಿ ತಿಳಿದಿಕೊಳ್ಳೋಣ.

ವಿಡಿಯೋ ಕ್ಲಿಪ್ -1

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ಗುಗೂಲ್‌ನಲ್ಲಿ ಹುಡುಕಿದಾಗ. ಇವೇ ದೃಶ್ಯಗಳು ಇರುವ ವಿಡಿಯೋವನ್ನು ಬಳಕೆದಾರನೊಬ್ಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ‘‘ಬಾಬಾ ರೋಡ್ ಷಾ ಜಿ’ ಮೇಳದಲ್ಲಿ ಎಲ್ಲೆಂದರಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ದೃಶ್ಯಗಳೆಂದು” ವಿಡಿಯೋ ವಿವರಣೆಯಲ್ಲಿ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ಕೌಂಕೆ ಕಲಾನ್ ಎನ್ನುವ ಗ್ರಾಮದಲ್ಲಿ ಪ್ರತಿ ವರ್ಷ ಈ ‘ಬಾಬಾ ರೋಡ್ ಷಾ ಜಿ’ ಮೇಳಾ ನಡೆಸುತ್ತಾರೆ. 06 ಸೆಪ್ಟೆಂಬರ್ 2021 ರಂದು ನಡೆದ ‘ ಬಾಬಾ ರೋಡ್ ಷಾ ಜಿ’ ಮೇಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ತಿ ವಿಡಿಯೋವನ್ನು ‘PunjabLive1.com’ ನ್ಯೂಸ್ ಚಾನೆಲ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿನ ಒಬ್ಬ ವ್ಯಕ್ತಿ, ಈ ವಿಡಿಯೋದಲ್ಲಿಯೂ ಸಹ ಕಾಣಿಸುತ್ತಿರುವುದನ್ನು ನಾವು ಗಮನಿಸಬಹುದು. ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿ ಹಂಚಿಕೊಂಡಿರುವ ಮತ್ತೊಂದು ವಿಡಿಯೋದಲ್ಲಿಯೂ ಸಹ ಈ ವ್ಯಕ್ತಿ ಕಾಣಿಸುತ್ತಿರುವುದರ ಆದಾರದ ಮೇಲೆ ಈ ವಿಡಿಯೋ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವುದೆಂದು ಖಚಿತವಾಗಿ ಹೇಳಬಹುದು.

ವಿಡಿಯೋ ಕ್ಲಿಪ್ -2

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವಾಗಿ ಹಂಚಿಕೊಂಡಿರುವುದಾಗಿ ತಿಳಿಯಿತು. ಆ ವಿಡಿಯೋಗಳನ್ನು ಇಲ್ಲಿ, ಇಲ್ಲಿ ನೋಡಬಹುದು. ಇವೇ ದೃಶ್ಯಗಳೊಂದಿಗೆ ಹೋಲಿಕೆ ಇರುವ ವಿಡಿಯೋವನ್ನು ‘Daily News Punjab’ ವಾಹಿನಿ 07 ಸೆಬ್ಟಂಬರ್ 2021ರಂದು ಪ್ರಕಟಿಸಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವವೆಂದು ವಿಡಿಯೋ ವಿವರಣೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದ ಹೆಸರಿನಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂದೀಪ್ ಸಿಂಗ್ ಎನ್ನುವ ಸ್ವತಂತ್ರ ಪತ್ರಕರ್ತ, ಕೌಂಕೆ ಕಲಾನ್ ಗ್ರಾಮಸ್ಥರನ್ನು ವಿಡಿಯೋದ ಸ್ಪಷ್ಟತೆಗಾಗಿ ಸಂದರ್ಶಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ 06 ಸೆಪ್ಟೆಂಬರ್ 2021 ರಂದು ನಡೆದ ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಕೌಂಕೆ ಕಲಾನ್ ಗ್ರಾಮಸ್ಥರು ಸಂದೀಪ್ ಸಿಂಗ್ ಅವರಿಗೆ ಹೇಳಿದ್ದಾರೆ. ಈ ತನಿಖಾ ವೀಡಿಯೋದಲ್ಲಿ ಕಾಣುವ ಕಟ್ಟಡಗಳು ಮತ್ತು ಬಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣುವ ದೃಶ್ಯಗಳನ್ನು ಹೋಲುತ್ತವೆ. ಇದರ ಜೊತೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋ, ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಜನ ಶಕ್ತಿ ನ್ಯೂಸ್ ಪಂಜಾಬ್ ಸುದ್ದಿ ವಾಹಿನಿ ಸ್ಪಷ್ಟಪಡಿಸಿದೆ. ಈ ವಿವರಗಳ ಆಧಾರದ ಮೇಲೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿಲ್ಲ ಎಂದು ಖಚಿತವಾಗಿ ಹೇಳಬಹುದು.

ಒಟ್ಟಿನಲ್ಲಿ, ‘ಬಾಬಾ ರೋಡ್ ಷಾ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿರುವ ದೃಶ್ಯವೆಂದು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...