Homeಮುಖಪುಟತಾಯ್ನೆಲ ತಲುಪಿದ ರೈತರು: ಪಂಜಾಬ್‌ನ ಪ್ರತಿ ಹಳ್ಳಿಗಳಲ್ಲಿ ಹಬ್ಬದ ಸಂಭ್ರಮ

ತಾಯ್ನೆಲ ತಲುಪಿದ ರೈತರು: ಪಂಜಾಬ್‌ನ ಪ್ರತಿ ಹಳ್ಳಿಗಳಲ್ಲಿ ಹಬ್ಬದ ಸಂಭ್ರಮ

- Advertisement -
- Advertisement -

ಐತಿಹಾಸಿಕ ಗೆಲುವು ಸಾಧಿಸಿದ ರೈತ ಹೋರಾಟವನ್ನು ಇಡೀ ದೇಶವೇ ಮೆಚ್ಚಿದೆ. ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನೆಲೆನಿಂತು, ಪಟ್ಟುಬಿಡದೇ ಹೋರಾಡಿ ತಮ್ಮ ಹಕ್ಕುಗಳನ್ನು ಪಡೆದುಕೊಂಡ ರೈತರು ತಮ್ಮ ಹಳ್ಳಿಗಳಿಗೆ ವಿಜಯ ಯಾತ್ರೆ ಮೂಲಕ ಹೊರಟಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಜನರು ಹೂಮಳೆ ಸುರಿಸುತ್ತಾ, ಸಂಭ್ರಮಿಸುತ್ತ ಹೋರಾಟಗಾರರನ್ನು ಬರಮಾಡಿಕೊಳ್ಳುತ್ತಿದ್ದಾರೆ. ಪಂಜಾಬ್‌ನ ಪ್ರತಿ ಹಳ್ಳಿಗಳಲ್ಲಿಯೂ ಈಗ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದು ಹಳ್ಳಿಗಳ ಕತೆಯಾದರೆ ಇನ್ನು ನಗರಗಳಲ್ಲಿಯೂ ಜನರು ರೈತರ ಹೋರಾಟವನ್ನು ಶ್ಲಾಘಿಸುತ್ತಿದ್ದು, ಮೊಂಬತ್ತಿ ಹಾಗೂ ದೀಪ ಬೆಳಗುವ ಮೂಲಕ ಸಂಭ್ರಮಾಚರಿಸುತ್ತಿದ್ದಾರೆ.

ಸರಭ್ ನಗರದ ನಿವಾಸಿ ಶಂಶೇರ್ ಸಿಂಗ್, ‘ರೈತರು ತಮ್ಮ ಹೋರಾಟದಲ್ಲಿ ಗೆದ್ದು ಮನೆಗೆ ಮರಳುತ್ತಿರುವುದು ಸಂಭ್ರಮದ ಕ್ಷಣವಾಗಿದೆ. ಈ ದಿನವನ್ನು ದೀಪಾವಳಿಯಂತೆ ಆಚರಿಸಲು, ನಾನು ನನ್ನ ಮನೆಯ ಹೊರಗೆ ಮೇಣದಬತ್ತಿ ಮತ್ತು ದೀಪಗಳನ್ನು ಬೆಳಗಿಸಿದ್ದೇನೆ. ಡಿಸೆಂಬರ್ 13 ರಂದು ಎಲ್ಲ ರೈತರು ಸ್ವರ್ಣ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಲಿರುವುದರಿಂದ ಮೂರು ದಿನಗಳ ಕಾಲ ದೀಪ ಬೆಳಗಿಸುತ್ತೇನೆ’ಎಂದಿದ್ದಾರೆ.

 ‘ರೈತರು ಇಡೀ ರಾಷ್ಟ್ರಕ್ಕೆ ಆಹಾರವನ್ನು ಬೆಳೆಯುವವರು. ನಾನು ಅವರಿಗೆ ಧನ್ಯವಾದ ಸೂಚಿಸಲು ನನ್ನ ಮನೆ ಮತ್ತು ಗುರುದ್ವಾರದಲ್ಲಿ ಮೇಣದಬತ್ತಿಗಳನ್ನು ಬೆಳಗಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ಸರಭ್ ನಗರದ ಇನ್ನೊಬ್ಬ ನಿವಾಸಿ ಗುರುಪ್ರೀತ್ ಸಿಂಗ್, ದೆಹಲಿಯಿಂದ ವಿಜಯ ಯಾತ್ರೆ ನಡೆಸುತ್ತಿರುವ ರೈತರಿಗೆ ಫತೇಘರ್ ಸಾಹಿಬ್ ಗುರುದ್ವಾರದ ಬಳಿ ಬಿಸಿ ಚಹಾ ಮತ್ತು ಪಕೋಡಗಳನ್ನು ಬಡಿಸುವ ಲಂಗರ್ ಅನ್ನು ಆಯೋಜಿಸಿದ್ದಾರೆ. ‘ಡಿಸೆಂಬರ್ 13 ರಂದು ಸ್ವರ್ಣ ಮಂದಿರಕ್ಕೆ ಹೋಗುವ ಮೊದಲು ಕೆಲವು ರೈತರು ಗುರುದ್ವಾರದಲ್ಲಿ ಉಳಿಯುವ ಕಾರಣ, ನಾನು ಅವರಿಗಾಗಿ ದಾರಿಯಲ್ಲಿ ಲಂಗರ್ ಅನ್ನು ಆಯೋಜಿಸಿದ್ದೇನೆ’ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ವರ್ಷದಿಂದ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇತ್ತೀಚೆಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದೆ. ಎಂಎಸ್ಪಿ ಸೇರಿದಂತೆ ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರವು ಲಿಖಿತ ಭರವಸೆ ನೀಡಿದ ನಂತರ ರೈತರು ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟವನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...