Homeಮುಖಪುಟಬೇಡಿಕೆಗಳು ಈಡೇರುವವರೆಗೂ 'ದಿಲ್ಲಿ ಚಲೋ' ಮುಂದುವರಿಯಲಿದೆ: ಪುನರುಚ್ಚರಿಸಿದ ರೈತರು

ಬೇಡಿಕೆಗಳು ಈಡೇರುವವರೆಗೂ ‘ದಿಲ್ಲಿ ಚಲೋ’ ಮುಂದುವರಿಯಲಿದೆ: ಪುನರುಚ್ಚರಿಸಿದ ರೈತರು

- Advertisement -
- Advertisement -

ತಮ್ಮ ಬೇಡಿಕೆಗಳು ಈಡೇರುವವರೆಗೂ ‘ದಿಲ್ಲಿ ಚಲೋ’ ಪ್ರತಿಭಟನೆ ಮುಂದುವರಿಯಲಿದೆ ಎಂದು ಶನಿವಾರ ಪುನರುಚ್ಚರಿಸಿರುವ ರೈತರು, ಫೆಬ್ರವರಿ 21ರಂದು ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಸಾವನ್ನಪ್ಪಿದ ಶುಭಕರನ್ ಸಿಂಗ್ ಅವರ ಕೊನೆಯ ಪ್ರಾರ್ಥನಾ ಸಭೆ ಮಾರ್ಚ್ 3ರಂದು ನಡೆಯಲಿದೆ. ಆ ಬಳಿಕ ಮುಂದಿನ ಹೋರಾಟದ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಪಂಜಾಬ್‌-ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲಾಗುವುದು. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

“ಗಡಿಯಲ್ಲಿ ಹರಿಯಾಣ ಪೊಲೀಸರು ಯಾವುದೇ ದಬ್ಬಾಳಿಕೆ ನಡೆಸದಿದ್ದರೆ ನಾವು ಶಾಂತಿಯುತ ರೀತಿಯಲ್ಲಿ ದೆಹಲಿಗೆ ಮೆರವಣಿಗೆ ನಡೆಸುತ್ತೇವೆ. ಇಲ್ಲದಿದ್ದರೆ, ಪ್ರಸ್ತುತ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲಾಗುವುದು. ಪಂಜಾಬ್‌ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಗ್ಗೂಡಿಸುತ್ತೇವೆ” ಎಂದು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಸದಸ್ಯ ರಮಣದೀಪ್ ಸಿಂಗ್ ಮಾನ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಶಂಭು ಮತ್ತು ಖಾನೌರಿಯಲ್ಲಿ ನಮ್ಮ ಒಕ್ಕೂಟಗಳು ಹೋರಾಟ ಮುಂದುವರೆಸಿದೆ. ನಾವು ಹೆಚ್ಚಿನ ಟಾರ್ಪಾಲಿನ್ ಶೀಟ್‌ಗಳು ಮತ್ತು ತಾತ್ಕಾಲಿಕ ಟೆಂಟ್‌ಗಳನ್ನು ಹಾಕಿದ್ದೇವೆ. ಭಾನುವಾರ ಮಧ್ಯಾಹ್ನ ಶುಭಕರನ್ ಅವರ ಪ್ರಾರ್ಥನಾ ಸಭೆಯ ನಂತರ ಮುಂದಿನ ಹೋರಾಟದ ರೂಪುರೇಷೆ ಸಿದ್ದಪಡಿಸಲಾಗುವುದು. ಪಂಜಾಬ್‌ನ ಪ್ರತಿಯೊಬ್ಬ ವ್ಯಕ್ತಿಯೂ ಶುಭಕರನ್ ಅವರ ಊರು ಬಟಿಂಡಾ ಜಿಲ್ಲೆಯ ಬಲ್ಲೋಹ್‌ನಲ್ಲಿ ಕೊನೆಯ ಪ್ರಾರ್ಥನಾ ಸಭೆಗೆ ಸೇರುವಂತೆ ನಾನು ಮನವಿ ಮಾಡುತ್ತೇನೆ” ಎಂದು ಕೆಎಂಎಂ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ನೇತೃತ್ವದಲ್ಲಿ ಭಾನುವಾರ ಪ್ರಾರ್ಥನಾ ಸಭೆ ನಡೆಯಲಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಭಕರನ್ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಗುರುವಾರ ಅವರ ಸ್ವಗ್ರಾಮ ಬಲ್ಲೋಗೆ ಕೊಂಡೊಯ್ಯಲಾಗಿದೆ.

“ಮುಂದಿನ ದಿನಗಳಲ್ಲಿ ಮಧ್ಯಪ್ರದೇಶ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮುಂತಾದ ರಾಜ್ಯಗಳ ಪ್ರತಿಭಟನಾಕಾರರು ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ. ಅವರನ್ನು ಎಲ್ಲಿ ತಡೆದು ನಿಲ್ಲಿಸಲಾಗುತ್ತದೋ, ಅಲ್ಲಿಯೇ ಕುಳಿತುಕೊಂಡು ಪ್ರತಿಭಟನೆ ನಡೆಸಲಿದ್ದಾರೆ” ಎಂದು ರಮಣದೀಪ್ ಸಿಂಗ್ ಮಾನ್ ಹೇಳಿದ್ದಾರೆ.

ಬಿಕೆಯು (ಕ್ರಾಂತಿಕಾರಿ) ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಅವರು, “ನಮ್ಮ ದಿಲ್ಲಿ ಚಲೋ ಕರೆ ಮುಂದುವರೆಯಲಿದೆ. ಆದರೆ, ಭದ್ರತಾ ಪಡೆಗಳ ಕೈಯಲ್ಲಿ ಇನ್ನು ಮುಂದೆ ಯಾವುದೇ ಶುಭಕರನ್‌ಗಳು ಸಾಯುವುದನ್ನು ನಾವು ಬಯಸುವುದಿಲ್ಲ. ಅವರು ನಮಗೆ ಶಾಂತಿಯುತವಾಗಿ ದೆಹಲಿಗೆ ತೆರಳಲು ಅವಕಾಶ ನೀಡಿದರೆ, ನಾವು ದೆಹಲಿಗೆ ಮೆರವಣಿಗೆ ಮಾಡುತ್ತೇವೆ. ಇಲ್ಲದಿದ್ದರೆ ಗಡಿಯಲ್ಲಿ ನಮ್ಮ ಧರಣಿ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

“ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ದಬ್ಬಾಳಿಕೆಯ ವಿಧಾನಗಳನ್ನು ಬಳಸುತ್ತಿರುವ ಕೇಂದ್ರ ಮತ್ತು ಹರಿಯಾಣ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಕೆಯು-ಏಕ್ತಾ (ಆಜಾದ್) ಅಧ್ಯಕ್ಷ ಜಸ್ವಿಂದರ್ ಸಿಂಗ್ ಲೊಂಗೊವಾಲ್, “ಇದು ಕೇವಲ ಅಶ್ರುವಾಯು ಅಥವಾ ಲಘು ಲಾಠಿ ಚಾರ್ಜ್ ಅನ್ನು ಬಳಸುವ ಪ್ರಶ್ನೆಯಲ್ಲ. ಪೊಲೀಸರು ವಿಷಕಾರಿ ಅನಿಲಗಳನ್ನು ಬಳಸಿರುವುದನ್ನು ನಾವು ನೋಡಿದ್ದೇವೆ. ನಾವು ಶುಭಕರನ್ ಅನ್ನು ಹೇಗೆ ಕಳೆದುಕೊಂಡೆವು ಎಂಬುದು ಎಲ್ಲರಿಗೂ ಗೊತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರತಿಭಟನಾ ನಿರತ ರೈತರ ಪಾಸ್‌ಪೋರ್ಟ್‌ ರದ್ದತಿಗೆ ಮುಂದಾದ ಹರಿಯಾಣ ಸರ್ಕಾರ; ಕಾನೂನು ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...