Homeಮುಖಪುಟಬೇಡಿಕೆಗಳು ಈಡೇರುವವರೆಗೂ 'ದಿಲ್ಲಿ ಚಲೋ' ಮುಂದುವರಿಯಲಿದೆ: ಪುನರುಚ್ಚರಿಸಿದ ರೈತರು

ಬೇಡಿಕೆಗಳು ಈಡೇರುವವರೆಗೂ ‘ದಿಲ್ಲಿ ಚಲೋ’ ಮುಂದುವರಿಯಲಿದೆ: ಪುನರುಚ್ಚರಿಸಿದ ರೈತರು

- Advertisement -
- Advertisement -

ತಮ್ಮ ಬೇಡಿಕೆಗಳು ಈಡೇರುವವರೆಗೂ ‘ದಿಲ್ಲಿ ಚಲೋ’ ಪ್ರತಿಭಟನೆ ಮುಂದುವರಿಯಲಿದೆ ಎಂದು ಶನಿವಾರ ಪುನರುಚ್ಚರಿಸಿರುವ ರೈತರು, ಫೆಬ್ರವರಿ 21ರಂದು ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಸಾವನ್ನಪ್ಪಿದ ಶುಭಕರನ್ ಸಿಂಗ್ ಅವರ ಕೊನೆಯ ಪ್ರಾರ್ಥನಾ ಸಭೆ ಮಾರ್ಚ್ 3ರಂದು ನಡೆಯಲಿದೆ. ಆ ಬಳಿಕ ಮುಂದಿನ ಹೋರಾಟದ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಪಂಜಾಬ್‌-ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲಾಗುವುದು. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

“ಗಡಿಯಲ್ಲಿ ಹರಿಯಾಣ ಪೊಲೀಸರು ಯಾವುದೇ ದಬ್ಬಾಳಿಕೆ ನಡೆಸದಿದ್ದರೆ ನಾವು ಶಾಂತಿಯುತ ರೀತಿಯಲ್ಲಿ ದೆಹಲಿಗೆ ಮೆರವಣಿಗೆ ನಡೆಸುತ್ತೇವೆ. ಇಲ್ಲದಿದ್ದರೆ, ಪ್ರಸ್ತುತ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲಾಗುವುದು. ಪಂಜಾಬ್‌ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಗ್ಗೂಡಿಸುತ್ತೇವೆ” ಎಂದು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಸದಸ್ಯ ರಮಣದೀಪ್ ಸಿಂಗ್ ಮಾನ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಶಂಭು ಮತ್ತು ಖಾನೌರಿಯಲ್ಲಿ ನಮ್ಮ ಒಕ್ಕೂಟಗಳು ಹೋರಾಟ ಮುಂದುವರೆಸಿದೆ. ನಾವು ಹೆಚ್ಚಿನ ಟಾರ್ಪಾಲಿನ್ ಶೀಟ್‌ಗಳು ಮತ್ತು ತಾತ್ಕಾಲಿಕ ಟೆಂಟ್‌ಗಳನ್ನು ಹಾಕಿದ್ದೇವೆ. ಭಾನುವಾರ ಮಧ್ಯಾಹ್ನ ಶುಭಕರನ್ ಅವರ ಪ್ರಾರ್ಥನಾ ಸಭೆಯ ನಂತರ ಮುಂದಿನ ಹೋರಾಟದ ರೂಪುರೇಷೆ ಸಿದ್ದಪಡಿಸಲಾಗುವುದು. ಪಂಜಾಬ್‌ನ ಪ್ರತಿಯೊಬ್ಬ ವ್ಯಕ್ತಿಯೂ ಶುಭಕರನ್ ಅವರ ಊರು ಬಟಿಂಡಾ ಜಿಲ್ಲೆಯ ಬಲ್ಲೋಹ್‌ನಲ್ಲಿ ಕೊನೆಯ ಪ್ರಾರ್ಥನಾ ಸಭೆಗೆ ಸೇರುವಂತೆ ನಾನು ಮನವಿ ಮಾಡುತ್ತೇನೆ” ಎಂದು ಕೆಎಂಎಂ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ನೇತೃತ್ವದಲ್ಲಿ ಭಾನುವಾರ ಪ್ರಾರ್ಥನಾ ಸಭೆ ನಡೆಯಲಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಭಕರನ್ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಗುರುವಾರ ಅವರ ಸ್ವಗ್ರಾಮ ಬಲ್ಲೋಗೆ ಕೊಂಡೊಯ್ಯಲಾಗಿದೆ.

“ಮುಂದಿನ ದಿನಗಳಲ್ಲಿ ಮಧ್ಯಪ್ರದೇಶ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮುಂತಾದ ರಾಜ್ಯಗಳ ಪ್ರತಿಭಟನಾಕಾರರು ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ. ಅವರನ್ನು ಎಲ್ಲಿ ತಡೆದು ನಿಲ್ಲಿಸಲಾಗುತ್ತದೋ, ಅಲ್ಲಿಯೇ ಕುಳಿತುಕೊಂಡು ಪ್ರತಿಭಟನೆ ನಡೆಸಲಿದ್ದಾರೆ” ಎಂದು ರಮಣದೀಪ್ ಸಿಂಗ್ ಮಾನ್ ಹೇಳಿದ್ದಾರೆ.

ಬಿಕೆಯು (ಕ್ರಾಂತಿಕಾರಿ) ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಅವರು, “ನಮ್ಮ ದಿಲ್ಲಿ ಚಲೋ ಕರೆ ಮುಂದುವರೆಯಲಿದೆ. ಆದರೆ, ಭದ್ರತಾ ಪಡೆಗಳ ಕೈಯಲ್ಲಿ ಇನ್ನು ಮುಂದೆ ಯಾವುದೇ ಶುಭಕರನ್‌ಗಳು ಸಾಯುವುದನ್ನು ನಾವು ಬಯಸುವುದಿಲ್ಲ. ಅವರು ನಮಗೆ ಶಾಂತಿಯುತವಾಗಿ ದೆಹಲಿಗೆ ತೆರಳಲು ಅವಕಾಶ ನೀಡಿದರೆ, ನಾವು ದೆಹಲಿಗೆ ಮೆರವಣಿಗೆ ಮಾಡುತ್ತೇವೆ. ಇಲ್ಲದಿದ್ದರೆ ಗಡಿಯಲ್ಲಿ ನಮ್ಮ ಧರಣಿ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

“ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ದಬ್ಬಾಳಿಕೆಯ ವಿಧಾನಗಳನ್ನು ಬಳಸುತ್ತಿರುವ ಕೇಂದ್ರ ಮತ್ತು ಹರಿಯಾಣ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಕೆಯು-ಏಕ್ತಾ (ಆಜಾದ್) ಅಧ್ಯಕ್ಷ ಜಸ್ವಿಂದರ್ ಸಿಂಗ್ ಲೊಂಗೊವಾಲ್, “ಇದು ಕೇವಲ ಅಶ್ರುವಾಯು ಅಥವಾ ಲಘು ಲಾಠಿ ಚಾರ್ಜ್ ಅನ್ನು ಬಳಸುವ ಪ್ರಶ್ನೆಯಲ್ಲ. ಪೊಲೀಸರು ವಿಷಕಾರಿ ಅನಿಲಗಳನ್ನು ಬಳಸಿರುವುದನ್ನು ನಾವು ನೋಡಿದ್ದೇವೆ. ನಾವು ಶುಭಕರನ್ ಅನ್ನು ಹೇಗೆ ಕಳೆದುಕೊಂಡೆವು ಎಂಬುದು ಎಲ್ಲರಿಗೂ ಗೊತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರತಿಭಟನಾ ನಿರತ ರೈತರ ಪಾಸ್‌ಪೋರ್ಟ್‌ ರದ್ದತಿಗೆ ಮುಂದಾದ ಹರಿಯಾಣ ಸರ್ಕಾರ; ಕಾನೂನು ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...