Homeಮುಖಪುಟದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹಿಸಿ ದೆಹಲಿಯಲ್ಲಿ ದೇಶದ ರೈತರು ನಡೆಸುತ್ತಿರುವ ಪ್ರತಿಭಟನೆ 6 ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ಪ್ರತಿಭಟನೆ ಉಗ್ರ ರೂಪ ಪಡೆದುಕೊಳ್ಳುತ್ತಿದ್ದು ಕೇಂದ್ರದ ಮಾತುಕತೆ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಮೂರು ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದಲ್ಲಿ ದೆಹಲಿ ಪ್ರವೇಶಿಸುವ ಮೂರು ಮುಖ್ಯ ಸ್ಥಳಗಳನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ. ಸರ್ಕಾರ ನಮ್ಮ ಪ್ರತಿಭಟನೆಯನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರೆ ದೆಹಲಿ ಪ್ರವೇಶಿಸುವ 5 ಮುಖ್ಯ ಸ್ಥಳಗಳನ್ನು ಬಂದ್ ಮಾಡುವ ಮೂಲಕ ಬಿಸಿ ಮುಟ್ಟಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಬುರಾರಿ ಮೈದಾನದಲ್ಲಿ ಪ್ರತಿಭಟನೆ ನಡೆಸಿ ಎಂದು ಹೇಳುತ್ತಿದೆ. ಆದರೆ ಅದೊಂದು ಬಹಿರಂಗ ಬಂಧಿಖಾನೆ ಅಷ್ಟೇ. ನಾವು ಆ ಮೈದಾನ ಪ್ರವೇಶಿಸಿದರೆ ನಮ್ಮನ್ನು ಬಂಧಿಸಿ ಕಿರುಕುಳ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಹಾಗಾಗಿ ನಾವು ಆ ಮೈದಾನಕ್ಕೆ ಹೋಗುವುದಿಲ್ಲ. ಬದಲಿಗೆ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡಲಿ. ಇಲ್ಲದಿದ್ದಲ್ಲಿ ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬುರಾರಿ ಮೈದಾನಕ್ಕೆ ಕಳಿಸಿ ಅದನ್ನು ಜೈಲಾಗಿ ಪರಿವರ್ತನೆ ಮಾಡಲು ಪೊಲೀಸರು ಕುತಂತ್ರ ನಡೆಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಎಷ್ಟು ದಿನವಾದರೂ ಸರಿಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಕೇಂದ್ರ ಸಮಿತಿ ನಿರ್ಣಯ ತೆಗೆದುಕೊಳ್ಳುತ್ತದೆ. ನಮ್ಮ ಚಿತ್ತವೇನಿದ್ದರೂ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮಾತ್ರ ಎಂದು ರೈತರು ತಿಳಿಸಿದ್ದಾರೆ.

ರೈತರು ಮಾತುಕತೆ ಪ್ರಸ್ತಾಪ ತಿರಸ್ಕರಿಸಿದ ನಂತರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಹಿರಿಯ ಬಿಜೆಪಿ ಮುಖಂಡರ ಸಭೆ ನಡೆಸಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾರವರ ಮನೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ್ ಭಾಗವಹಿಸಿದ್ದರು ಎನ್ನಲಾಗಿದೆ. ಸಭೆಯಲ್ಲಿ ಏನು ತೀರ್ಮಾನವಾಗಿದೆ ಎಂಬುದು ತಿಳಿದುಬಂದಿಲ್ಲ.

ನವೆಂಬರ್ 25 ರಂದು ರೈತರು ದೆಹಲಿ ಚಲೋ ನಡೆಸಲು ದೆಹಲಿ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಅಲ್ಲಿಂದ ಈ ಐದು ದಿನಗಳಲ್ಲಿ ನೂರಾರು ಬಾರಿ ರೈತರ ಮೇಲೆ ಲಾಠೀಚಾರ್ಜ್ ಮಾಡಲಾಗಿದೆ. ಜಲಫಿರಂಗಿ, ಅಶ್ರುವಾಯು ಸಿಡಿಸಲಾಗಿದೆ. ನೂರಾರು ಕಡೆ ರೈತರನ್ನು ತಡೆಯಲಾಗಿದೆ. ಮಾತ್ರವಲ್ಲದೇ ಇಡೀ ಬಿಜೆಪಿ ಮತ್ತು ಹಲವು ಮಾಧ್ಯಮಗಳು ಇದು ಕಾಂಗ್ರೆಸ್ ರೈತರ ಹೋರಾಟ, ಇವರೆಲ್ಲಾ ರೈತರಲ್ಲ ಎಂದು ಪ್ರಚಾರ ಮಾಡುವ ಮೂಲಕ ಅವಮಾನಿಸಲಾಗಿದೆ. ಆದರೆ ರೈತರು ಮಾತ್ರ ಎದೆಗುಂದಿಲ್ಲ. ಈ ಹೋರಾಟವನ್ನು ಜೀವನ್ಮರಣದ ಪ್ರಶ್ನೆಯನ್ನಾಗಿ ರೈತರು ಭಾವಿಸಿದ್ದಾರೆ. ಹಾಗಾಗಿ ಈ ಕಾಯ್ದೆಗಳನ್ನು ವಾಪಸ್ ಕಳಿಸಿಯೇ ಮನೆಗೆ ತೆರಳುವ ಶಪಥ ಮಾಡಿದ್ದಾರೆ.

ಮಹಿಳಾ ರೈತರು ಹೋರಾಟದಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಾರೆ. ಟ್ರಾಕ್ಟರ್‌ಗಳಲ್ಲಿ ಮಲಗಿ, ರಸ್ತೆ ಬದಿಯೇ ಸ್ನಾನ ಮಾಡಿದರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರ ಆರಂಭದಲ್ಲಿ ಈ ರೈತರ ಹೋರಾಟವನ್ನು ದಮನ ಮಾಡಲು ಯತ್ನಿಸಿತು. ಆದರೆ ಪಂಜಾಬ್, ಹರಿಯಾಣದ ರೈತರು ಸಾಕಷ್ಟು ಸಂಖ್ಯೆಯಲ್ಲಿ ದೆಹಲಿ ಪ್ರವೇಶಿಸಿ ಹೋರಾಟವನ್ನು ತೀವ್ರಗೊಳಿಸಿದರು. ಈಗ ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ. ಆದರೆ ರೈತರು ದೆಹಲಿ ಬಿಟ್ಟು ಕದಲುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಈ ಹೋರಾಟ ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...