Homeಮುಖಪುಟದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹಿಸಿ ದೆಹಲಿಯಲ್ಲಿ ದೇಶದ ರೈತರು ನಡೆಸುತ್ತಿರುವ ಪ್ರತಿಭಟನೆ 6 ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ಪ್ರತಿಭಟನೆ ಉಗ್ರ ರೂಪ ಪಡೆದುಕೊಳ್ಳುತ್ತಿದ್ದು ಕೇಂದ್ರದ ಮಾತುಕತೆ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಮೂರು ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದಲ್ಲಿ ದೆಹಲಿ ಪ್ರವೇಶಿಸುವ ಮೂರು ಮುಖ್ಯ ಸ್ಥಳಗಳನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ. ಸರ್ಕಾರ ನಮ್ಮ ಪ್ರತಿಭಟನೆಯನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರೆ ದೆಹಲಿ ಪ್ರವೇಶಿಸುವ 5 ಮುಖ್ಯ ಸ್ಥಳಗಳನ್ನು ಬಂದ್ ಮಾಡುವ ಮೂಲಕ ಬಿಸಿ ಮುಟ್ಟಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಬುರಾರಿ ಮೈದಾನದಲ್ಲಿ ಪ್ರತಿಭಟನೆ ನಡೆಸಿ ಎಂದು ಹೇಳುತ್ತಿದೆ. ಆದರೆ ಅದೊಂದು ಬಹಿರಂಗ ಬಂಧಿಖಾನೆ ಅಷ್ಟೇ. ನಾವು ಆ ಮೈದಾನ ಪ್ರವೇಶಿಸಿದರೆ ನಮ್ಮನ್ನು ಬಂಧಿಸಿ ಕಿರುಕುಳ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಹಾಗಾಗಿ ನಾವು ಆ ಮೈದಾನಕ್ಕೆ ಹೋಗುವುದಿಲ್ಲ. ಬದಲಿಗೆ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡಲಿ. ಇಲ್ಲದಿದ್ದಲ್ಲಿ ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬುರಾರಿ ಮೈದಾನಕ್ಕೆ ಕಳಿಸಿ ಅದನ್ನು ಜೈಲಾಗಿ ಪರಿವರ್ತನೆ ಮಾಡಲು ಪೊಲೀಸರು ಕುತಂತ್ರ ನಡೆಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಎಷ್ಟು ದಿನವಾದರೂ ಸರಿಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಕೇಂದ್ರ ಸಮಿತಿ ನಿರ್ಣಯ ತೆಗೆದುಕೊಳ್ಳುತ್ತದೆ. ನಮ್ಮ ಚಿತ್ತವೇನಿದ್ದರೂ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮಾತ್ರ ಎಂದು ರೈತರು ತಿಳಿಸಿದ್ದಾರೆ.

ರೈತರು ಮಾತುಕತೆ ಪ್ರಸ್ತಾಪ ತಿರಸ್ಕರಿಸಿದ ನಂತರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಹಿರಿಯ ಬಿಜೆಪಿ ಮುಖಂಡರ ಸಭೆ ನಡೆಸಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾರವರ ಮನೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ್ ಭಾಗವಹಿಸಿದ್ದರು ಎನ್ನಲಾಗಿದೆ. ಸಭೆಯಲ್ಲಿ ಏನು ತೀರ್ಮಾನವಾಗಿದೆ ಎಂಬುದು ತಿಳಿದುಬಂದಿಲ್ಲ.

ನವೆಂಬರ್ 25 ರಂದು ರೈತರು ದೆಹಲಿ ಚಲೋ ನಡೆಸಲು ದೆಹಲಿ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಅಲ್ಲಿಂದ ಈ ಐದು ದಿನಗಳಲ್ಲಿ ನೂರಾರು ಬಾರಿ ರೈತರ ಮೇಲೆ ಲಾಠೀಚಾರ್ಜ್ ಮಾಡಲಾಗಿದೆ. ಜಲಫಿರಂಗಿ, ಅಶ್ರುವಾಯು ಸಿಡಿಸಲಾಗಿದೆ. ನೂರಾರು ಕಡೆ ರೈತರನ್ನು ತಡೆಯಲಾಗಿದೆ. ಮಾತ್ರವಲ್ಲದೇ ಇಡೀ ಬಿಜೆಪಿ ಮತ್ತು ಹಲವು ಮಾಧ್ಯಮಗಳು ಇದು ಕಾಂಗ್ರೆಸ್ ರೈತರ ಹೋರಾಟ, ಇವರೆಲ್ಲಾ ರೈತರಲ್ಲ ಎಂದು ಪ್ರಚಾರ ಮಾಡುವ ಮೂಲಕ ಅವಮಾನಿಸಲಾಗಿದೆ. ಆದರೆ ರೈತರು ಮಾತ್ರ ಎದೆಗುಂದಿಲ್ಲ. ಈ ಹೋರಾಟವನ್ನು ಜೀವನ್ಮರಣದ ಪ್ರಶ್ನೆಯನ್ನಾಗಿ ರೈತರು ಭಾವಿಸಿದ್ದಾರೆ. ಹಾಗಾಗಿ ಈ ಕಾಯ್ದೆಗಳನ್ನು ವಾಪಸ್ ಕಳಿಸಿಯೇ ಮನೆಗೆ ತೆರಳುವ ಶಪಥ ಮಾಡಿದ್ದಾರೆ.

ಮಹಿಳಾ ರೈತರು ಹೋರಾಟದಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಾರೆ. ಟ್ರಾಕ್ಟರ್‌ಗಳಲ್ಲಿ ಮಲಗಿ, ರಸ್ತೆ ಬದಿಯೇ ಸ್ನಾನ ಮಾಡಿದರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರ ಆರಂಭದಲ್ಲಿ ಈ ರೈತರ ಹೋರಾಟವನ್ನು ದಮನ ಮಾಡಲು ಯತ್ನಿಸಿತು. ಆದರೆ ಪಂಜಾಬ್, ಹರಿಯಾಣದ ರೈತರು ಸಾಕಷ್ಟು ಸಂಖ್ಯೆಯಲ್ಲಿ ದೆಹಲಿ ಪ್ರವೇಶಿಸಿ ಹೋರಾಟವನ್ನು ತೀವ್ರಗೊಳಿಸಿದರು. ಈಗ ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ. ಆದರೆ ರೈತರು ದೆಹಲಿ ಬಿಟ್ಟು ಕದಲುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಈ ಹೋರಾಟ ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....