Homeಮುಖಪುಟಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

- Advertisement -
- Advertisement -

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿರುವ ತೆರೆದ ಮೈದಾನಕ್ಕೆ ಬಿಟ್ಟಿದ್ದಾರೆ. ಈ ಮೈದಾನವು ರಾಜ್ಯದ ರಾಜಧಾನಿಯಾದ ಲಕ್ನೋದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ.

ವರದಿಗಳ ಪ್ರಕಾರ, ಮಂಗಳವಾರದಂದು ಆದಿತ್ಯನಾಥ್‌ ಅವರ ರ್‍ಯಾಲಿ ನಡೆಯಲಿರುವ ಕೆಲವೇ ಗಂಟೆಗಳ ಮೊದಲು ಬಿಡಾಡಿ ದನಗಳನ್ನು ಮೈದಾನದಲ್ಲಿ ಬಿಡಲಾಗಿದೆ. ರೈತರ ಈ ಅನಿರೀಕ್ಷಿತ ನಡೆಯಿಂದಾಗಿ ಜಿಲ್ಲೆಯ ಅಧಿಕಾರಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಅವರು ಪೊಲೀಸರ ಸಹಾಯದಿಂದ ಬ್ಯಾರಿಕೇಡ್‌ಗಳನ್ನು ಬಳಸಿ ಬೀಡಾಡಿ ದನಗಳು ರ್‍ಯಾಲಿಯ ಸ್ಥಳಕ್ಕೆ ಪ್ರವೇಶಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತೆರೆದ ಮೈದಾನದಲ್ಲಿ ನೂರಾರು ಬಿಡಾಡಿ ದನಗಳು ಇರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾತನಾಡಿರುವ ಸ್ಥಳೀಯ ರೈತರೊಬ್ಬರು, “ಬಿಡಾಡಿ ದನಗಳಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮುಖ್ಯಮಂತ್ರಿಗೆ ತಿಳಿಯಲಿ” ಎಂದು ಹೇಳಿದ್ದಾರೆ.

ಒಂದು ವೇಳೆ ದನಗಳು ರ್‍ಯಾಲಿ ನಡೆಯುವ ಸ್ಥಳಕ್ಕೆ ತಲುಪಿದ್ದರೆ ಸಭೆಗೆ ಅಡ್ಡಿಯಾಗುತ್ತಿತ್ತು ಎಂದು ವರದಿಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಳಕ್ಕೆ ಬರುವುದು ಸುಮಾರು ಒಂದು ಗಂಟೆ ತಡವಾಗಿದ್ದರಿಂದ ದನಗಳು ರ್‍ಯಾಲಿಯ ಸ್ಥಳಕ್ಕೆ ಬರದಂತೆ ತಡೆಯುವ ಪ್ರಯತ್ನದಲ್ಲಿ ಆಡಳಿತ ಯಶಸ್ವಿಯಾಗಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆ ವರದಿ ಮಾಡಿದೆ.

ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬೀಡಾಡಿ ದನಗಳ ಸಮಸ್ಯೆಯು ಪ್ರಮುಖ ವಿಷಯವಾಗಿದ್ದರಿಂದ ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ಬಿಡಾಡಿ ದನಗಳ ಹಾವಳಿಯ ಬಗ್ಗೆ ಮಾತನಾಡಿದ್ದಾರೆ. ನಾವು ಗೋಹತ್ಯೆಗೆ ಅವಕಾಶ ನೀಡುವುದಿಲ್ಲ ಮತ್ತು ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಬಾರಾಬಂಕಿಯಿಂದ ಸ್ವಲ್ಪ ದೂರದಲ್ಲಿರುವ ಬಹರೈಚ್‌ನ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ, ಬಿಡಾಡಿ ದನಗಳ ಸಮಸ್ಯೆಯ ಬಗ್ಗೆಯೂ ಮಾತನಾಡಿದ್ದಾರೆ. “ನಾವು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ… ಸಮಸ್ಯೆಯನ್ನು ಪರಿಹರಿಸಲು ನಾವು ಮಾರ್ಗಗಳನ್ನು ಕಂಡುಕೊಂಡಿದ್ದೇವೆ… ಮಾರ್ಚ್ ಹತ್ತರ ನಂತರ ನಮ್ಮ ಸರ್ಕಾರವನ್ನು ರಚನೆಯಾಗುತ್ತಿದ್ದಂತೆ ಬೀಡಾಡಿ ದನಗಳಿಂದ ಉದ್ಭವಿಸುವ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ನಾವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.

ಈ ಹಿಂದೆ ಕೂಡಾ ಬಿಡಾಡಿ ದನಗಳು ರಾಜ್ಯದ ವಿವಿಧ ಭಾಗಗಳಲ್ಲಿ ಬಿಜೆಪಿ ಮತ್ತು ಎಸ್‌ಪಿ ನಾಯಕರ ಚುನಾವಣಾ ರ್‍ಯಾಲಿಗೆ ಅಡ್ಡಿಪಡಿಸಿದ್ದು ವರದಿಯಾಗಿತ್ತು.

ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...