Homeಮುಖಪುಟಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

- Advertisement -
- Advertisement -

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿರುವ ತೆರೆದ ಮೈದಾನಕ್ಕೆ ಬಿಟ್ಟಿದ್ದಾರೆ. ಈ ಮೈದಾನವು ರಾಜ್ಯದ ರಾಜಧಾನಿಯಾದ ಲಕ್ನೋದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ.

ವರದಿಗಳ ಪ್ರಕಾರ, ಮಂಗಳವಾರದಂದು ಆದಿತ್ಯನಾಥ್‌ ಅವರ ರ್‍ಯಾಲಿ ನಡೆಯಲಿರುವ ಕೆಲವೇ ಗಂಟೆಗಳ ಮೊದಲು ಬಿಡಾಡಿ ದನಗಳನ್ನು ಮೈದಾನದಲ್ಲಿ ಬಿಡಲಾಗಿದೆ. ರೈತರ ಈ ಅನಿರೀಕ್ಷಿತ ನಡೆಯಿಂದಾಗಿ ಜಿಲ್ಲೆಯ ಅಧಿಕಾರಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಅವರು ಪೊಲೀಸರ ಸಹಾಯದಿಂದ ಬ್ಯಾರಿಕೇಡ್‌ಗಳನ್ನು ಬಳಸಿ ಬೀಡಾಡಿ ದನಗಳು ರ್‍ಯಾಲಿಯ ಸ್ಥಳಕ್ಕೆ ಪ್ರವೇಶಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತೆರೆದ ಮೈದಾನದಲ್ಲಿ ನೂರಾರು ಬಿಡಾಡಿ ದನಗಳು ಇರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾತನಾಡಿರುವ ಸ್ಥಳೀಯ ರೈತರೊಬ್ಬರು, “ಬಿಡಾಡಿ ದನಗಳಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮುಖ್ಯಮಂತ್ರಿಗೆ ತಿಳಿಯಲಿ” ಎಂದು ಹೇಳಿದ್ದಾರೆ.

ಒಂದು ವೇಳೆ ದನಗಳು ರ್‍ಯಾಲಿ ನಡೆಯುವ ಸ್ಥಳಕ್ಕೆ ತಲುಪಿದ್ದರೆ ಸಭೆಗೆ ಅಡ್ಡಿಯಾಗುತ್ತಿತ್ತು ಎಂದು ವರದಿಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಳಕ್ಕೆ ಬರುವುದು ಸುಮಾರು ಒಂದು ಗಂಟೆ ತಡವಾಗಿದ್ದರಿಂದ ದನಗಳು ರ್‍ಯಾಲಿಯ ಸ್ಥಳಕ್ಕೆ ಬರದಂತೆ ತಡೆಯುವ ಪ್ರಯತ್ನದಲ್ಲಿ ಆಡಳಿತ ಯಶಸ್ವಿಯಾಗಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆ ವರದಿ ಮಾಡಿದೆ.

ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬೀಡಾಡಿ ದನಗಳ ಸಮಸ್ಯೆಯು ಪ್ರಮುಖ ವಿಷಯವಾಗಿದ್ದರಿಂದ ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ಬಿಡಾಡಿ ದನಗಳ ಹಾವಳಿಯ ಬಗ್ಗೆ ಮಾತನಾಡಿದ್ದಾರೆ. ನಾವು ಗೋಹತ್ಯೆಗೆ ಅವಕಾಶ ನೀಡುವುದಿಲ್ಲ ಮತ್ತು ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಬಾರಾಬಂಕಿಯಿಂದ ಸ್ವಲ್ಪ ದೂರದಲ್ಲಿರುವ ಬಹರೈಚ್‌ನ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ, ಬಿಡಾಡಿ ದನಗಳ ಸಮಸ್ಯೆಯ ಬಗ್ಗೆಯೂ ಮಾತನಾಡಿದ್ದಾರೆ. “ನಾವು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ… ಸಮಸ್ಯೆಯನ್ನು ಪರಿಹರಿಸಲು ನಾವು ಮಾರ್ಗಗಳನ್ನು ಕಂಡುಕೊಂಡಿದ್ದೇವೆ… ಮಾರ್ಚ್ ಹತ್ತರ ನಂತರ ನಮ್ಮ ಸರ್ಕಾರವನ್ನು ರಚನೆಯಾಗುತ್ತಿದ್ದಂತೆ ಬೀಡಾಡಿ ದನಗಳಿಂದ ಉದ್ಭವಿಸುವ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ನಾವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.

ಈ ಹಿಂದೆ ಕೂಡಾ ಬಿಡಾಡಿ ದನಗಳು ರಾಜ್ಯದ ವಿವಿಧ ಭಾಗಗಳಲ್ಲಿ ಬಿಜೆಪಿ ಮತ್ತು ಎಸ್‌ಪಿ ನಾಯಕರ ಚುನಾವಣಾ ರ್‍ಯಾಲಿಗೆ ಅಡ್ಡಿಪಡಿಸಿದ್ದು ವರದಿಯಾಗಿತ್ತು.

ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...