Homeಮುಖಪುಟಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

- Advertisement -
- Advertisement -

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿರುವ ತೆರೆದ ಮೈದಾನಕ್ಕೆ ಬಿಟ್ಟಿದ್ದಾರೆ. ಈ ಮೈದಾನವು ರಾಜ್ಯದ ರಾಜಧಾನಿಯಾದ ಲಕ್ನೋದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ.

ವರದಿಗಳ ಪ್ರಕಾರ, ಮಂಗಳವಾರದಂದು ಆದಿತ್ಯನಾಥ್‌ ಅವರ ರ್‍ಯಾಲಿ ನಡೆಯಲಿರುವ ಕೆಲವೇ ಗಂಟೆಗಳ ಮೊದಲು ಬಿಡಾಡಿ ದನಗಳನ್ನು ಮೈದಾನದಲ್ಲಿ ಬಿಡಲಾಗಿದೆ. ರೈತರ ಈ ಅನಿರೀಕ್ಷಿತ ನಡೆಯಿಂದಾಗಿ ಜಿಲ್ಲೆಯ ಅಧಿಕಾರಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಅವರು ಪೊಲೀಸರ ಸಹಾಯದಿಂದ ಬ್ಯಾರಿಕೇಡ್‌ಗಳನ್ನು ಬಳಸಿ ಬೀಡಾಡಿ ದನಗಳು ರ್‍ಯಾಲಿಯ ಸ್ಥಳಕ್ಕೆ ಪ್ರವೇಶಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತೆರೆದ ಮೈದಾನದಲ್ಲಿ ನೂರಾರು ಬಿಡಾಡಿ ದನಗಳು ಇರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾತನಾಡಿರುವ ಸ್ಥಳೀಯ ರೈತರೊಬ್ಬರು, “ಬಿಡಾಡಿ ದನಗಳಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮುಖ್ಯಮಂತ್ರಿಗೆ ತಿಳಿಯಲಿ” ಎಂದು ಹೇಳಿದ್ದಾರೆ.

ಒಂದು ವೇಳೆ ದನಗಳು ರ್‍ಯಾಲಿ ನಡೆಯುವ ಸ್ಥಳಕ್ಕೆ ತಲುಪಿದ್ದರೆ ಸಭೆಗೆ ಅಡ್ಡಿಯಾಗುತ್ತಿತ್ತು ಎಂದು ವರದಿಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಳಕ್ಕೆ ಬರುವುದು ಸುಮಾರು ಒಂದು ಗಂಟೆ ತಡವಾಗಿದ್ದರಿಂದ ದನಗಳು ರ್‍ಯಾಲಿಯ ಸ್ಥಳಕ್ಕೆ ಬರದಂತೆ ತಡೆಯುವ ಪ್ರಯತ್ನದಲ್ಲಿ ಆಡಳಿತ ಯಶಸ್ವಿಯಾಗಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆ ವರದಿ ಮಾಡಿದೆ.

ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬೀಡಾಡಿ ದನಗಳ ಸಮಸ್ಯೆಯು ಪ್ರಮುಖ ವಿಷಯವಾಗಿದ್ದರಿಂದ ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ಬಿಡಾಡಿ ದನಗಳ ಹಾವಳಿಯ ಬಗ್ಗೆ ಮಾತನಾಡಿದ್ದಾರೆ. ನಾವು ಗೋಹತ್ಯೆಗೆ ಅವಕಾಶ ನೀಡುವುದಿಲ್ಲ ಮತ್ತು ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಬಾರಾಬಂಕಿಯಿಂದ ಸ್ವಲ್ಪ ದೂರದಲ್ಲಿರುವ ಬಹರೈಚ್‌ನ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ, ಬಿಡಾಡಿ ದನಗಳ ಸಮಸ್ಯೆಯ ಬಗ್ಗೆಯೂ ಮಾತನಾಡಿದ್ದಾರೆ. “ನಾವು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ… ಸಮಸ್ಯೆಯನ್ನು ಪರಿಹರಿಸಲು ನಾವು ಮಾರ್ಗಗಳನ್ನು ಕಂಡುಕೊಂಡಿದ್ದೇವೆ… ಮಾರ್ಚ್ ಹತ್ತರ ನಂತರ ನಮ್ಮ ಸರ್ಕಾರವನ್ನು ರಚನೆಯಾಗುತ್ತಿದ್ದಂತೆ ಬೀಡಾಡಿ ದನಗಳಿಂದ ಉದ್ಭವಿಸುವ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ನಾವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.

ಈ ಹಿಂದೆ ಕೂಡಾ ಬಿಡಾಡಿ ದನಗಳು ರಾಜ್ಯದ ವಿವಿಧ ಭಾಗಗಳಲ್ಲಿ ಬಿಜೆಪಿ ಮತ್ತು ಎಸ್‌ಪಿ ನಾಯಕರ ಚುನಾವಣಾ ರ್‍ಯಾಲಿಗೆ ಅಡ್ಡಿಪಡಿಸಿದ್ದು ವರದಿಯಾಗಿತ್ತು.

ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...