Homeಮುಖಪುಟಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಮಿಂದೆದ್ದ ರೈತ ಗಣರಾಜ್ಯೋತ್ಸವ: ವಿಶೇಷ ವರದಿ

ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಮಿಂದೆದ್ದ ರೈತ ಗಣರಾಜ್ಯೋತ್ಸವ: ವಿಶೇಷ ವರದಿ

"ಈ ಮಟ್ಟಿನ ದೊಡ್ಡ ಜನಸಮೂಹ ನಮ್ಮನ್ನು ಮತ್ತೆ ನಮ್ಮ ಸಭೆಗಳನ್ನು ಸೇರುತ್ತಿದೆ. ಇಂತಹ ಪರಿಸ್ಥಿತಿ ನಮಗೆ ಖುಷಿ ಮತ್ತು ಆತಂಕವನ್ನು ಉಂಟು ಮಾಡಿದೆ. ಲಕ್ಷಾಂತರ ಜನರನ್ನು ತಡೆಹಿಡಿಯುವುದು ಕಷ್ಟ. ಆದ್ದರಿಂದ ರೈತ ಮುಖಂಡರ ಜವಾಬ್ದಾರಿ ಹೆಚ್ಚಾಗಿದೆ. ಆದರೆ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ನಾವು ಏನು ಮಾಡಬೇಕು ಎಂಬುದರ ಬಗ್ಗೆ ನಮಗೆ ಸಂಪೂರ್ಣ ಅರಿವಿದೆ’ ಎಂದು ತಿಳಿಸಿದ್ದರು.

- Advertisement -
- Advertisement -

(ಕಳೆದ 20 ದಿನಗಳಿಂದ ದೆಹಲಿಯಲ್ಲಿ ರೈತ ಹೋರಾಟವನ್ನು ಪ್ರತ್ಯಕ್ಷವಾಗಿ ವರದಿ ಮಾಡುತ್ತಿರುವ ನ್ಯಾಯಪಥ-ನಾನುಗೌರಿ ತಂಡದ ಭಾಗವಾಗಿ ಹೋಗಿರುವ ಮಮತಾ ತಾವು ಕಂಡ ರೈತ ಗಣರಾಜ್ಯೋತ್ಸವದ ಬಗ್ಗೆ ಬರೆದಿದ್ದಾರೆ.)

ಈ ಬಾರಿಯ ಗಣರಾಜ್ಯೋತ್ಸವ ಐತಿಹಾಸಿಕ ರೈತ ಹೋರಾಟದೊಂದಿಗೆ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಕಿಸಾನ್ ಗಣರಾಜ್ಯೋತ್ಸವ ಎಂದು ಕರೆಯಲಾದ ಸಂವಿಧಾನಿಕ ಮಹತ್ವದ ಈ ದಿನ ನಡೆದ ಕಾರ್ಯಕ್ರಮ ಮೊದಲ ಬಾರಿಗೆ ಇಡೀ ದೇಶಕ್ಕೆ ರೈತ ಹೋರಾಟದ ಶಕ್ತಿಯನ್ನು ತಿಳಿಸಿದೆ. ರೈತರ ಚಾರಿತ್ರಿಕ ಹೋರಾಟ ಶೇ.99 ರಷ್ಟು ಯಶಸ್ವಿಯಾಗಿದೆ ಎಂಬ ಮಾತು ದೇಶದಾದ್ಯಂತ ಹಬ್ಬಿರುವುದು ವಿಶೇಷ.

ದೇಶದ ವಿವಿಧ ಬಾಗಗಳಿಂದ ಬೃಹತ್ ಸಂಖ್ಯೆಯಲ್ಲಿ ಬಂದಿದ್ದ ಟ್ರ್ಯಾಕ್ಟರ್‌ಗಳ ಜೊತೆಗೆ ಲಕ್ಷಾಂತರ ಮಂದಿ ರೈತರು ಮತ್ತು ಪ್ರತಿಭಟನೆಯನ್ನು ಬೆಂಬಲಿಸಲು ಬಂದಿದ್ದ ಜನಸಾಮಾನ್ಯರು ಕಿಸಾನ್ ಗಣರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸಿದ್ದಾರೆ. ದೆಹಲಿಯ ಗಡಿಗಳಲ್ಲಿ ಕಳೆದ ನವೆಂಬರ್ 26ರಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ಇದುವರೆಗೆ 11 ಸುತ್ತಿನ ಮಾತುಕತೆ ನಡೆದಿದ್ದರೂ ಯಾವುದೇ ಸಭೆ ಸಫಲವಾಗಿಲ್ಲ. ಕೇಂದ್ರ ಸರ್ಕಾರ ಪ್ರಾರಂಭದಲ್ಲಿ ಕಾನೂನುಗಳನ್ನು ರದ್ದುಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದಿತ್ತು. ಕೊನೆಯ ಸಭೆಯಲ್ಲಿ ಕೆಲವು ವರ್ಷಗಳ ಕಾಲ ಈ ಕಾಯ್ದೆಗಳನ್ನು ತಡೆಹಿಡಿಯುವ ಸಂಧಾನವನ್ನು ಮುಂದುಮಾಡಿತ್ತು. ಇದು ಯಾವುದಕ್ಕೂ ಒಪ್ಪದ ರೈತರು ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳದೆ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಬಿಗಿ ಪಟ್ಟು ಹಿಡಿದು ಕುಳಿತಿದ್ದಾರೆ.

ಈ ಬೆಳವಣಿಗೆಗಳ ನಡುವೆಯೇ ಈ ಬಾರಿಯ ಲೋಹ್ರಿಯನ್ನು ಕಿಸಾನ್ ಲೋಹ್ರಿ ಆಚರಿಸಲಾಗಿತ್ತು. ಅಲ್ಲಿ ಸಾಂಪ್ರದಾಯಿಕವಾಗಿ ಹಾಕುವ ಕೊಂಡದಲ್ಲಿ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ರೈತರು ಪ್ರತಿಭಟಿಸಿದ್ದರು. ಈಗ ಐತಿಹಾಸಿಕ ಟ್ರ್ಯಾಕ್ಟರ್ ರ್‍ಯಾಲಿಯೊಂದಿಗೆ ಕಿಸಾನ್ ಗಣರಾಜ್ಯೋತ್ಸವವನ್ನು ಆಚರಿಸಿದ್ದಾರೆ.

ಬೆಳಗುವ ದೀಪಗಳು ಮತ್ತು ರೈತ ಧ್ವಜಗಳಿಂದ ಸಾವಿರಾರು ಟ್ರ್ಯಾಕ್ಟರ್‌ಗಳನ್ನು ಅಲಂಕರಿಸಲಾಗಿತ್ತು. ಕೆಲವೊಂದು ಟ್ರ್ಯಾಕ್ಟರ್‌ಗಳಿಗೆ ರಕ್ಷಣಾತ್ಮಕ ಕಂಬಿಗಳು, ಕಬ್ಬಿಣದ ತಂತಿಗಳು ಮತ್ತು ಫೈಬರ್ ಶೀಟ್‌ಗಳನ್ನೂ ಹಾಕಲಾಗಿತ್ತು. ಕಳೆದ ಜನವರಿ 7ರಂದು ನಡೆದಿದ್ದ ಟ್ರ್ಯಾಕ್ಟರ್ ರ್‍ಯಾಲಿಯ ಪೂರ್ವಾಭ್ಯಾಸದಂತೆ ಈ ಬಾರಿ ಟ್ರ್ಯಾಲಿಗಳನ್ನು ತೆಗೆದುಕೊಂಡು ಹೋಗುಗುವಂತಿರಲಿಲ್ಲ. ಕೇವಲ ಟ್ರ್ಯಾಕ್ಟರ್‌ಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ ಈ ಬಾರಿ ಟ್ರ್ಯಾಕ್ಟರ್ ರ್‍ಯಾಲಿಗಾಗಿ ಮಾರ್ಗಸೂಚಿಯನ್ನು ನೀಡಿತ್ತು. ಗಣರಾಜ್ಯೋತ್ಸವದ ಪರೇಡ್‌ಗೆ ಸಿದ್ಧತೆ ಹೇಗಿರಬೇಕು ಎಂಬ ಅಂಶಗಳಿಂದ ಹಿಡಿದು, ಯಾವ ಮಾರ್ಗಗಳಲ್ಲಿ ಚಲಿಸಬೇಕು, ತಾವು ಯಾವುದಕ್ಕಾಗಿ ಈ ರ್‍ಯಾಲಿ ನಡೆಸುತ್ತಿದ್ದೇವೆ, ಎಂಬೆಲ್ಲಾ ವಿಚಾರಗಳ ಬಗ್ಗೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.

ಕೆಂಪುಕೋಟೆಯ ಮೇಲೆ ರೈತರ ಧ್ವಜವನ್ನು ಹಾರಿಸುವ ರೈತರ ಆಸೆಗೆ ಸರ್ಕಾರ ಮತ್ತು ದೆಹಲಿ ಪೊಲೀಸರು ಅನುಮತಿ ನೀಡಿರಲಿಲ್ಲ. ರೈತರು ನೀಡಿದ್ದ ಪರೇಡ್ ಮಾರ್ಗಕ್ಕೂ ಪೊಲೀಸರಿಂದ ಉತ್ತಮ ಸ್ಪಂದನೆ ಸಿಕ್ಕಿರಲಿಲ್ಲ. ನಂತರ ದೆಹಲಿಯ ಸುತ್ತ ಪರೇಡ್ ನಡೆಸಲು ಅನುಮತಿ ನೀಡಿದ್ದರು. ಈ ಮಾರ್ಗಗಳನ್ನು ರೈತ ಮುಖಂಡರು ಅನುಸರಿಸಿ, ಎಲ್ಲಾ ಗಡಿಗಳಿಂದ ಹೊರಡುವಂತೆ ಹೊಸ ರೀತಿಯಲ್ಲಿ ಮಾರ್ಗಗಳ ರೂಟ್ ಮ್ಯಾಪ್ ಸಿದ್ಧಪಡಿಸಿ ನೀಡಲಾಗಿತ್ತು.

ರೈತ ಸಂಘಟನೆಗಳು, ರೈತ ಮುಖಂಡರ ಇಷ್ಟು ಮುನ್ನೆಚ್ಚರಿಕೆ ಮತ್ತು ಯೋಜನೆಯ ಹೊರತಾಗಿಯೂ ಜನವರಿ 25ರ ತಡ ರಾತ್ರಿಯವರೆಗೂ ಟ್ರ್ಯಾಕ್ಟರ್ ಪರೇಡ್ ಒಂದು ದೊಡ್ಡ ಚಿಂತೆಯಾಗಿಯೇ ಉಳಿದಿತ್ತು. ಇದಕ್ಕೆ ಕಾರಣ ಲಕ್ಷಾಂತರ ಜನರು. ಜನರು ಈ ದೊಡ್ಡ ಮಟ್ಟಕ್ಕೆ ಆಗಮಿಸಿ ಸ್ಪಂದಿಸಿದ್ದು ಎಲ್ಲ ರೈತ ಮುಖಂಡರಲ್ಲಿ ಒಂದು ಆತಂಕ ಸೃಷ್ಟಿಸಿತ್ತು.

ಟಿಕ್ರಿ ಗಡಿಯಲ್ಲಿ ರೈತ ಹೋರಾಟದ ಮುನ್ನಲೆಯಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ಸುರೀಂಧರ್ ಸಿಂಗ್ ಅವರು ಹೇಳುವಂತೆ “ಈ ಮಟ್ಟಿನ ದೊಡ್ಡ ಜನಸಮೂಹ ನಮ್ಮನ್ನು ಮತ್ತೆ ನಮ್ಮ ಸಭೆಗಳನ್ನು ಸೇರುತ್ತಿದೆ. ಇಂತಹ ಪರಿಸ್ಥಿತಿ ನಮಗೆ ಖುಷಿ ಮತ್ತು ಆತಂಕವನ್ನು ಉಂಟುಮಾಡಿದೆ. ಲಕ್ಷಾಂತರ ಜನರನ್ನು ತಡೆಹಿಡಿಯುವುದು ಕಷ್ಟ. ಆದ್ದರಿಂದ ರೈತ ಮುಖಂಡರ ಜವಾಬ್ದಾರಿ ಹೆಚ್ಚಾಗಿದೆ. ಆದರೆ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ನಾವು ಏನು ಮಾಡಬೇಕು ಎಂಬುದರ ಬಗ್ಗೆ ನಮಗೆ ಸಂಪೂರ್ಣ ಅರಿವಿದೆ’ ಎಂದು ತಿಳಿಸಿದ್ದರು.

“ಈ ಟ್ರ್ಯಾಕ್ಟರ್ ಪರೇಡ್ ಮೂಲಕ ನಾವು ಸರ್ಕಾರಕ್ಕೆ ಮೂರು ಮುಖ್ಯ ವಿಷಯಗಳನ್ನು ತಿಳಿಸಲು ಬಯಸುತ್ತೇವೆ” ಎಂದಿದ್ದ ಅವರು “ಮೊದನೆಯದು ಸ್ವತಂತ್ರ ರಾಷ್ಟ್ರ ಎನ್ನುವ ಪರಿಕಲ್ಪನೆಯಲ್ಲಿಯೂ ಹೇಗೆ ನಾವು ಕಾರ್ಪೊರೇಟ್ ಕೈಯಲ್ಲಿ ಸಿಕ್ಕು ಗುಲಾಮರಾಗುತ್ತ್ತಿದ್ದೇವೆ, ಎರಡನೆಯದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರ ಸಬ್ ಕಾ ವಿಕಾಸ್ ಎನ್ನುವ ಮೂಲಕ ಅಧಿಕಾರಕ್ಕೆ ಬಂದು ಸಬ್ ಕಾ ವಿನಾಶ್ ಹೇಗೆ ಮಾಡುತ್ತಿದೆ ಎಂಬುದು. ಇನ್ನು ಕೊನೆಯದಾಗಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಕಾನೂನುಗಳನ್ನು ಹೇಗೆ ಸರ್ಕಾರ ತಿದ್ದುಪಡಿಗಳ ಮೂಲಕ ಬದಲಾಯಿಸಿ, ಸಂವಿಧಾನದ ಮೂಲ ಆಶಯಗಳಂತೆ ನಡೆದುಕೊಳ್ಳದೆ ಹಲವು ಪರಿಚ್ಛೇದಗಳನ್ನು ಬಳಸಿಕೊಂಡು ಜನರನ್ನು ತುಳಿಯುತ್ತಿದೆ ಎಂಬುವು” ಎಂದಿದ್ದರು.

ರೈತ ಮುಖಂಡರು ಈ ಮೊದಲೇ ತಿಳಿಸಿದ್ದಂತೆ, ನಮಗೆ ಯಾವ ಮಾರ್ಗದಲ್ಲಿ ರ್‍ಯಾಲಿ ಮಾಡುತ್ತೇವೆ ಎಂಬುದು ಮುಖ್ಯವಲ್ಲ ಬದಲಾಗಿ ಎಲ್ಲರೂ ಒಟ್ಟಾಗಿ ಸೇರುವುದು ಮತ್ತು ಈ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುವುದು ಮುಖ್ಯ ಎನ್ನುವುದನ್ನು ಕಿಸಾನ್ ಗಣರಾಜ್ಯೋತ್ಸವದಂದು ತೋರಿಸಿದ್ದಾರೆ.

ಬೆಳಗಿನ 5 ಗಂಟೆಯಿಂದಲೇ ನಡೆದ ಟ್ರ್ಯಾಕ್ಟರ್ ಪರೇಡ್ ತಯಾರಿ 8 ಗಂಟೆಗೆ ಆರಂಭವಾಯಿತು. ಪೊಲೀಸ್ ಇಲಾಖೆ 12 ಗಂಟೆಗೆ ಪರೇಡ್ ನಡೆಸಲು ಅನುಮತಿ ನೀಡಿತ್ತು. ಬ್ಯಾರಿಕೇಡ್, ಟ್ರ್ಯಾಕ್‌ಗಳನ್ನೂ ಬದಿಗೆ ಸರಿಸಿ ಟ್ರ್ಯಾಕ್ಟರ್ ಪರೇಡ್‌ಗೆ ಚಾಲನೆ ನೀಡಲಾಯಿತು.

ಪ್ರತಿಭಟನೆಯಲ್ಲಿ ಕೇವಲ ಅರ್ಧದಷ್ಟು ಟ್ರ್ಯಾಕರ್‌ಗಳು ಮಾತ್ರ ಪರೇಡ್‌ನಲ್ಲಿ ಭಾಗವಹಿಸಿದ್ದರೆ ಇನ್ನು ಸಾವಿರಾರು ಟ್ರಾಲಿಗಳು ಗಡಿ ಭಾಗದಲ್ಲಿ ಹಾಗೆಯೇ ಉಳಿದಿದ್ದವು. ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸಿದೊಡನೆಯ ದೆಹಲಿ ಜನರು ಫ್ಲೈಓವರ್‌ಗಳಿಂದ, ಬ್ರಿಡ್ಜ್‌ಗಳ ಮೇಲಿನಿಂದ ಹೂವು ಸುರಿಸುವ ಮೂಲಕ ರೈತರಿಗೆ ಪ್ರೀತಿಯ ಸ್ವಾಗತ ಕೋರಿದರು. ಇದರ ಜೊತೆಗೆ ರಸ್ತೆಯ ಇಕ್ಕೆಲಗಳಲ್ಲಿ ರೈತರ ಐತಿಹಾಸಿಕ ಪರೇಡ್ ನೋಡಲು ಸಾವಿರಾರು ಜನ ಸೇರಿ ರೈತರಿಗೆ ಹುಮ್ಮಸ್ಸು ತುಂಬಿ, ರೈತಪರ ಘೋಷಣೆಗಳನ್ನು ಕೂಗಿದರು. ಇದರ ಜೊತೆಗೆ ನೀರು, ಬಾಳೆಹಣ್ಣು, ಕಿತ್ತಳೆ ಹಣ್ಣು, ಊಟ ನೀಡುವ ಮೂಲಕ ರ್‍ಯಾಲಿಗೆ ಬೆಂಬಲ ನೀಡಿದರು.

ದೆಹಲಿ ಸುತ್ತ ಪರೇಡ್ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ ರೈತರು ದೆಹಲಿಯ ಒಳಗೆ ನುಗ್ಗಿ ಕೆಂಪು ಕೋಟೆ ಮೇಲೆ ಕಿಸಾನ್ ಧ್ವಜ ಹರಿಸಿದ್ದಾರೆ. ಸಿಂಘು ಗಡಿಯಿಂದ ಹೊರಟಿದ್ದ ನಮಗೆ ಒಟ್ಟು 5 ಕಡೆಯಲ್ಲಿ ಹೊಸದಾದ ಬ್ಯಾರಿಕೇಡ್‌ಗಳು ಕಾಣಿಸಿದವು. ಆದರೆ ಪ್ರತಿಭಟನಕಾರಾರು ಜೆಸಿಬಿಗಳ ಮೂಲಕ ಬ್ಯಾರಿಕೇಡ್‌ಗಳನ್ನು ತಳ್ಳುವ ಅನಿವಾರ್ಯಕ್ಕೆ ಬಿದ್ದರು.

ಕೆಲವು ಬಾರ್ಡರ್‌ಗಳಲ್ಲಿ ಪೊಲೀಸರು ಅಶ್ರುವಾಯು, ಟಿಯರ್ ಗ್ಯಾಸ್ ಸಿಡಿಸಿದ್ದರು. ಮತ್ತೆ ಕೆಲವೆಡೆ ರೈತರನ್ನು ತಡೆಯುವ ಕೆಲಸ ಮಾಡಿದ್ದಾರೆ. ಈ ಸುದ್ದಿ ಹಲವು ರೈತರ ಗುಂಪುಗಳಲ್ಲಿ ಹರಿದಾಡಿ ಸಿಂಘು ಗಡಿಯಲ್ಲಿ ಉಳಿದಿದ್ದ ರೈತರು ಕೂಡ ಕೆಲ ಕಾಲ ತಬ್ಬಿಬ್ಬುಗೊಂಡಿದ್ದೂ ನಿಜ.

ಗಾಜಿಪುರ ಮತ್ತು ಸಿಂಘು ಭಾಗದ ರೈತರ ಗುಂಪುಗಳು ಕೆಂಪುಕೋಟೆಯಲ್ಲಿ ರೈತರ ಧ್ವಜವನ್ನು ಹಾರಿಸಿ, ನಂತರ ಅಲ್ಲಿಂದ ವಾಪಾಸ್ ಸಿಂಘುಗೆ ತೆರಳಿದರು. ಇಷ್ಟರಲ್ಲಿ ಕೆಲವು ಮಾಧ್ಯಮಗಳು ಬಿತ್ತರಿಸಿದ ಸುದ್ದಿಯಿಂದ ರೈತರು ಏನಾಗುತ್ತಿದೆ ಎಂಬ ಕಳವಳ ವ್ಯಕ್ತಪಡಿಸಿದರು. ಟ್ರ್ಯಾಕ್ಟರ್ ಮತ್ತು ಪೊಲೀಸರ ಘರ್ಷಣೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದಾರೆ. ಈ ಕುರಿತು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ನೀಡಿ ಖಂಡಿಸಿದೆ.

ಎಲ್ಲೋ ಕೆಲವೇ ಕೆಲವು ಅಹಿತಕರ ಘಟನೆಗಳನ್ನು ಹೊರತುಪಡಿಸಿ ರೈತರು ಬಹಳ ಶಾಂತಿಯುತವಾಗಿ ನಡೆಸಿದ ರ್‍ಯಾಲಿ ಮತ್ತು ಪ್ರತಿಭಟನೆ ಇಡೀ ದೇಶ ಮತ್ತು ವಿಶ್ವದ ಗಮನ ಸೆಳೆದಿದೆ. ಸಂಪೂರ್ಣವಾಗಿ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಪ್ರತಿಭಟನೆಯಿಂದ ಕದಲುವುದಿಲ್ಲ ಎಂದು ರೈತರು ಮತ್ತೆ ಪುನರುಚ್ಚರಿಸಿದ್ದು, ಕೇಂದ್ರ ಸರ್ಕಾರದ ಮುಂದಿನ ಹೆಜ್ಜೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...