Homeಕರ್ನಾಟಕರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ ಎಂದು ರೈತರು ಎಚ್ಚರಿಸಿದ್ದಾರೆ.

- Advertisement -
- Advertisement -

ರೈತರ ಟ್ರ್ಯಾಕ್ಟರ್‌‌ ಪರೇಡ್‌ಗೆ ಅನುಮತಿ ನೀಡಿ ಪೊಲೀಸರ ಮೂಲಕ ಟ್ರಾಕ್ಟರ್‌‌‌‌‌ಗಳು ಬೆಂಗಳೂರು ಕಡೆಗೆ ಹೋಗದಂತೆ ನಿಯಂತ್ರಿಸಲು ಹೊರಟಿರುವ ರಾಜ್ಯ ಸರ್ಕಾರದ ದ್ವಂದ್ವ ನೀತಿಯ ಬಗ್ಗೆ ರೈತ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟ್ರಾಕ್ಟರ್‌‌‌‌ ಪರೇಡ್ ನಡೆಸಬಹುದು. ಅದಕ್ಕೆ ಪೊಲೀಸರ ಅನುಮತಿ ಅಗತ್ಯ ಎಂದು ಸರ್ಕಾರ ಹೇಳಿತ್ತು. ಈಗ ಪೊಲೀಸರನ್ನು ಛೂಬಿಟ್ಟು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳದಂತೆ ಅಲ್ಲಲ್ಲಿ ತಡೆಯುವ ಕೆಲಸ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧ ನಡೆಯಾಗಿದೆ ಎಂದು ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಸ್ವಯಂ ಪ್ರೇರಿತರಾಗಿ ತಮ್ಮ ಟ್ರಾಕ್ಟರ್‌‌‌‌ಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೊರಟಿದ್ದರು. ತಿಪಟೂರಿನಿಂದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಮತ್ತು ಕಾರ್ಯಕರ್ತರು ಟ್ರಾಕ್ಟರ್‌‌‌‌ಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಅಂದರೆ ಕೆ.ಬಿ. ಕ್ರಾಸ್‌ನಲ್ಲಿ ಪರೇಡ್ ಗೆ ತೆರಳುತ್ತಿದ್ದ ಟ್ರಾಕ್ಟರ್‌‌‌‌ಗಳನ್ನು ಪೊಲೀಸರು ತಡೆಹಿಡಿದು ರೈತರಿಗೆ ಅನಗತ್ಯ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಕೆ.ಬಿ. ಕ್ರಾಸ್‌ನಲ್ಲಿ ಹತ್ತುಕ್ಕೂ ಹೆಚ್ಚು ಟ್ರಾಕ್ಟರ್‌‌‌‌ಗಳನ್ನು ತಡೆಯುತ್ತಿದ್ದಂತೆ ರೈತ ಮುಖಂಡರು ಪೊಲೀಸರಿಗೆ ಮನವಿ ಮಾಡಿ ಶಾಂತಿಯುತ ಪರೇಡ್‌ಗೆ ತೆರಳುತ್ತಿದ್ದೇವೆ. ಯಾವುದೇ ಸಮಸ್ಯೆಯಾಗದಂತೆ ಬೆಂಗಳೂರಿಗೆ ತೆರಳುತ್ತೇವೆ. ಮುಂದೆ ಹೋಗಲು ಅವಕಾಶ ಕೊಡಿ ಎಂದು ಕೆ.ಬಿ.ಕ್ರಾಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದ್ದಾರೆ. ತಮ್ಮ ನಾಯಕರಿಗೂ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಮೊದಲು ಬಿಡುತ್ತೇವೆ ಎಂದು ಹೇಳಿದ ಸಬ್‌ಇನ್ಸ್‌ಪೆಕ್ಟರ್ ನಂತರ ಸರ್ಕಲ್ ಇನ್ಸ್‌ಪೆಕ್ಟರ್ ಬರಬೇಕು, ಅಲ್ಲಿಯವರೆಗೂ ಮುಂದೆ ಹೋಗುವಂತಿಲ್ಲ ಎಂದು ರೈತರ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ.

ರೈತರ ಮನವಿಗೂ ಸಬ್ ಇನ್ಸ್‌ಪೆಕ್ಟರ್ ಸ್ಪಂದಿಸದಿದ್ದಾಗ ರೈತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರು ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಇದು ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತೆ ಆಗಿದೆ. ಸರ್ಕಾರಕ್ಕೆ ಧಿಕ್ಕಾರ. ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅನುಮತಿ ನೀಡುತ್ತಿಲ್ಲ. ಟ್ರಾಕ್ಟರ್‌‌‌‌ಗಳನ್ನು ತಡೆದು ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ. ಇದನ್ನು ಖಂಡಿಸುತ್ತೇವೆ ಎಂದು ಬೆಂಗಳೂರಿಗೆ ತೆರಳುತ್ತಿದ್ದ ಪೊಲೀಸರಿಂದ ತಡೆಗೆ ಒಳಗಾದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿ, “ಸರ್ಕಾರ ಸರ್ವಾಧಿಕಾರದಿಂದ ವರ್ತಿಸುತ್ತಿದೆ. ರೈತರು ಶಾಂತಿಯುತವಾಗಿ ಯಾರಿಗೂ ತೊಂದರೆ ಕೊಡದಂತೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಅವರನ್ನು ಕೆ.ಬಿ.ಕ್ರಾಸ್‌ನಲ್ಲಿ ಪೊಲೀಸರು ತಡೆದಿರುವುದು ಖಂಡನೀಯ. ಸಬ್ ಇನ್ಸ್‌‌ಪೆಕ್ಟರ್‌‌ಗೆ ಮನವಿ ಮಾಡಿದರೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ  ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಮೊದಲು ಪರೇಡ್‌ಗೆ ಅನುಮತಿ ನೀಡಿತು. ಈಗ ಪೊಲೀಸರ ಮೂಲಕ ಟ್ರ್ಯಾಕ್ಟರ್ ಪರೇಡ್ ನಡೆಯುವುದನ್ನು ತಡೆಯುತ್ತಿದೆ. ಇದು ಸರ್ಕಾರದ ದ್ವಂದ್ವ ನಿಲುವು. ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆದಿರುವ ಕ್ರಮಕ್ಕೆ ರೈತ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಈ ಸರ್ಕಾರ ರೈತರನ್ನು ಮುಗಿಸಲು ಹೊರಟಿದೆ. ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದೆ. ಬಡ ರೈತರನ್ನು ಕೃಷಿಯಿಂದ ವಿಮುಖಗೊಳ್ಳುವಂತೆ ಮಾಡಿ ಕಾರ್ಪೋರೇಟ್ ಕೃಷಿಗೆ ರತ್ನಗಂಬಳಿ ಹಾಸಲು ಹೊರಟಿದೆ. ಕೃಷಿ ಕಾಯ್ದೆಗಳು ಸಂಪೂರ್ಣ ಜಾರಿಯಾದರೆ ಇಡೀ ಜನತೆ ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಟ್ರಾಕ್ಟರ್‌‌‌‌ ತಡೆದಿರುವ ಕ್ರಮ ಖಂಡನೀಯ. ಸರ್ಕಾರಕ್ಕೆ ಗೌರವ ಇದ್ದರೆ ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು.  ಟ್ರಾಕ್ಟರ್‌‌‌‌ ತಡೆಯುವುದರಿಂದ ಚಳವಳಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಅರ್ಥ ಮಾಡಿ ಕೊಳ್ಳಬೇಕು. ರೈತರೊಂದಿಗೆ ಪೊಲೀಸರು ಸೌಜನ್ಯದಿಂದ ನಡೆದುಕೊಳ್ಳಬೇಕು. ಎಲ್ಲಿ ಜನರನ್ನು ತಡೆಯಲಾಗುವುದೊ ಅಲ್ಲೇ ಪ್ರತಿಭಟನೆ ತೀವ್ರಗೊಳ್ಳಲಿದೆ. ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಾವು ಹಿಂಸೆಗೆ ಅವಕಾಶ ನೀಡುವುದಿಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸರು ರೈತರನ್ನು ಗೌರವದಿಂದ ಕಾಣಬೇಕು ಮತ್ತು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲು ಅನುವು ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಚಳವಳಿಯನ್ನು ಹತ್ತಿಕ್ಕಲು ಸರ್ಕಾರ ವಾಮಮಾರ್ಗ ಹಿಡಿಯುತ್ತಿದೆ. ಟ್ರಾಕ್ಟರ್‌‌‌‌ ಮಾಲಿಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಆರ್.ಟಿ.ಒ ಅಧಿಕಾರಿಗಳು ಟ್ರಾಕ್ಟರ್‌‌‌‌ಗಳ ದಾಖಲೆಗಳನ್ನು ಕೇಳುವ ಮೂಲಕ ಮಾಲಿಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ, ಇದು ಖಂಡನೀಯ. ಲಕ್ಷಾಂತರ ವಾಹನಗಳು ನಿತ್ಯವೂ ಯಾವುದೇ ದಾಖಲೆಗಳು ಇಲ್ಲದೆ ಸಂಚರಿಸುತ್ತಿವೆ. ಅವುಗಳ ದಾಖಲೆ ಕೇಳದ ಆರ್.ಟಿ.ಓ ಅಧಿಕಾರಿಗಳು ಈಗ ಟ್ರಾಕ್ಟರ್‌‌‌‌ ದಾಖಲೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಚಳವಳಿಯನ್ನು ಹತ್ತಿಕ್ಕುವ ಹುನ್ನಾರ ನಿಲ್ಲಬೇಕು. ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...